PM ಕಿಸಾನ್‌ ಇ ಕೆವೈಸಿ ಪ್ರಗತಿಗೆ ಕೃಷಿ ಸಖಿಯರ ನೆರವು

ಸಂಪರ್ಕಕ್ಕೇ ಸಿಗುತ್ತಿಲ್ಲ 22 ಸಾವಿರ ಕೃಷಿಕರು!

Team Udayavani, Jul 12, 2023, 6:26 AM IST

PADDY FARMERS

ಬೆಳ್ತಂಗಡಿ: ಪಿಎಂ ಕಿಸಾನ್‌ ಪ್ರೋತ್ಸಾಹಧನ ಪಡೆಯಲು ಇಕೆವೈಸಿ ಕಡ್ಡಾಯವಾಗಿದ್ದರೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22,724 ಕೃಷಿಕರು ಸಂಪರ್ಕಕ್ಕೇ ಸಿಗದಿರುವುದು ಸಮೀಕ್ಷೆ ಯಿಂದ ಬೆಳಕಿಗೆ ಬಂದಿದೆ.

ದ.ಕ. ಜಿಲ್ಲೆಯಲ್ಲಿ ನೋಂದಾಯಿತ 1,53,483 ಫಲಾನುಭವಿಗಳ ಪೈಕಿ 28,442 ಮಂದಿ ಇ ಕೆವೈಸಿ ಮಾಡಿಸಿಲ್ಲ. ಈ ಮಧ್ಯೆ 15,779 ಮಂದಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಉಡುಪಿ ಜಿಲ್ಲೆಯ 1,53,580 ನೋಂದಾಯಿತ ಫ‌ಲಾನುಭವಿಗಳ ಪೈಕಿ 22,449 ಮಂದಿ ಇ ಕೆವೈಸಿ ಮಾಡಿಲ್ಲ. 6,945 ಕೃಷಿಕರು ಸಂಪರ್ಕಕಕ್ಕೇ ಸಿಕ್ಕಿಲ್ಲ.

ಇ ಕೆವೈಸಿ ಮಾಡದ ಫಲಾನುಭವಿಗಳು ವಾರ್ಷಿಕ ಸಹಾಯಧನದಿಂದ ವಂಚಿತ ರಾಗದಂತೆ ನೋಡಿಕೊಳ್ಳುವ ಸಲು ವಾಗಿ ಕೃಷಿ ಇಲಾಖೆಯು ಗ್ರಾ.ಪಂ. ಮುಖೇನ ಎನ್‌ಆರ್‌ಎಲ್‌ಎಂ ಸಂಸ್ಥೆ ನಿಯೋಜಿ ಸಿರುವ ಕೃಷಿ ಸಖೀಯರ ಮೂಲಕ ಸಮೀಕ್ಷೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಜೂ. 13ರಿಂದ ಜು. 7ರ ವರೆಗೆ ಸಮೀಕ್ಷೆ ನಡೆದಿತ್ತು. ಇಕೆವೈಸಿಗೆ ಜೂ. 30 ಕೊನೆಯ ದಿನವೆಂದು ಘೋಷಿಸಿದ್ದರೂ ಇನ್ನೂ ಕಾಲವಕಾಶವಿದೆ. ಸರಕಾರ ಶೀಘ್ರದಲ್ಲೇ ನೋಂದಣಿ ಆ್ಯಪ್‌ ಸ್ಥಗಿತಗೊಳಿಸುವ ಮುನ್ನ ನಮೂದಿಸಿದರಷ್ಟೆ ಯೋಜನೆಯ ನೇರ ಲಾಭ ಪಡೆಯಬಹುದಾಗಿದೆ. ನಿರ್ಲಕ್ಷ್ಯ ತೋರಿದವರು ವಾರ್ಷಿಕ 10 ಸಾವಿರ ರೂ. ಸಹಾಯಧನದಿಂದ ವಂಚಿತರಾಗಲಿದ್ದಾರೆ.

38,000 ರೂ. ಜಮೆ
2018ರಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ಪಿಎಂ ಕಿಸಾನ್‌ ಯೋಜನೆಯಡಿ ರೈತರಿಗೆ ಬೆಂಬಲವಾಗಿ ಕೇಂದ್ರದಿಂದ 6 ಸಾವಿರ, ರಾಜ್ಯದಿಂದ 4 ಸಾವಿರ ರೂ. ಪ್ರೋತ್ಸಾಹಧನವನ್ನು ವಾರ್ಷಿಕ 5 ಕಂತು ಗಳಲ್ಲಿ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ದಿಂದ 13, ರಾಜ್ಯದಿಂದ 6 ಕಂತು ಗಳಲ್ಲಿ ಒಟ್ಟು 38,000 ರೂ. ರೈತರ ಖಾತೆಗೆ ಜಮೆಯಾಗಿದೆ. ಇದು ಮುಂದುವರಿ ಯಲು ಇ ಕೆವೈಸಿ ಕಡ್ಡಾಯ.

ಇ ಕೆವೈಸಿ ಮಾಡಿಸದೇ ಇರುವ ರೈತರ ಪಟ್ಟಿಯನ್ನು ಗ್ರಾ.ಪಂ.ಗಳ ನೋಟಿಸ್‌ ಬೋರ್ಡ್‌ನಲ್ಲಿ ಅಳವಡಿಸಲು ಇಲಾಖೆ ಮುಂದಾಗಿದ್ದು, ಸಂಬಂಧಪಟ್ಟವರು ತತ್‌ಕ್ಷಣ ಮಾಡಿಸಿಕೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಂಜಿತ್‌ ಟಿ.ಎಂ. ತಿಳಿಸಿದ್ದಾರೆ.

ಇ ಕೆವೈಸಿ ಎಂದರೇನು?
ಇ ಕೆವೈಸಿ ಅಂದರೆ Electronic know your customer. ರೈತರು ಹತ್ತಿರದ ಸೈಬರ್‌ ಸೆಂಟರ್‌ ಅಥವಾ ರೈತ ಸಂಪರ್ಕ ಕೇಂದ್ರ, ಗ್ರಾ.ಪಂ. ಅಥವಾ ಗ್ರಾಮ ಒನ್‌ಗಳಲ್ಲಿ ಸಂಪರ್ಕಿಸಿ ಆಧಾರ್‌ ಸಂಖ್ಯೆ ಹಾಗೂ ಆಧಾರ್‌ಗೆ ಜೋಡಣೆಯಾದ ಮೊಬೈಲ್‌ ಸಂಖ್ಯೆಯನ್ನು (pmkisanekyc) ವೆಬ್‌ ಸೈಟ್‌ನಲ್ಲಿ ದಾಖಲಿಸಬೇಕು. ಆಧಾರ್‌ಗೆ ಜೋಡಣೆಯಾದ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ಅದನ್ನು ನಮೂದಿಸಿದಾಗ ಇಕೆವೈಸಿ ಆದಂತೆ.

ಸಂಪರ್ಕಕ್ಕೆ ಸಿಗದಿರಲು ಕಾರಣ
ರೈತರು ಯೋಜನೆಗೆ ನೋಂದಾಯಿಸು ವಾಗ ನೀಡಿರುವ ಮೊಬೈಲ್‌ ಸಂಖ್ಯೆ ತಪ್ಪಾಗಿ ಮುದ್ರಿತವಾಗಿರುವುದು ಅಥವಾ ತಾಂತ್ರಿಕ ದೋಷಗಳಿಂದ ಸಂಖ್ಯೆ ಅದಲಿ ಬದಲಿ ಆಗಿರುವುದು, ವಿಳಾಸ ತಪ್ಪಾಗಿ ರುವುದು ಮೊದಲಾದ ಕಾರಣಗಳಿಂದ ಹಲವರು ಸಂಪರ್ಕಕ್ಕೆ ಸಿಗದೆ ಇಲಾಖೆ ಅಂಥವರ ಪತ್ತೆಗೆ ಗ್ರಾ.ಪಂ.ನ ಮೊರೆ ಹೋಗುವಂತಾಗಿದೆ.

ಯಾರೆಲ್ಲ ಇಕೆವೈಸಿ ಮಾಡಿಸಿಲ್ಲವೋ ಅಂಥವರ ಪತ್ತೆಗೆ ಗ್ರಾಮ ಸಹಾಯಕ್‌, ಪೋಸ್ಟ್‌ ಮಾಸ್ಟರ್‌, ಆಶಾ ಕಾರ್ಯಕರ್ತೆಯರು, ಕೃಷಿ ಸಖೀಯರ ನೆರವಿನಿಂದ ಪ್ರಯತ್ನ ನಡೆಸಲಾಗಿದೆ. ಫಲಾನುಭವಿಗಳೇ ಮುಂದೆ ಬಂದು ಇಕೆವೈಸಿ ಮಾಡಿಸಬೇಕಿದೆ. ದುರ್ಬಲರು, ಮನೆಯಲ್ಲೇ ಇರುವವರ ಬಳಿಗೇ ತೆರಳಿ ಇಕೆವೈಸಿ ಮಾಡಿಸಲಾಗಿದೆ.
– ಸೀತಾ ಎಂ.ಸಿ. ಮತ್ತು ಕೆಂಪೇಗೌಡ ಎಂ., ಜಂಟಿ ಕೃಷಿ ನಿರ್ದೇಶಕರು ಉಡುಪಿ ಮತ್ತು ದ.ಕ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.