ಕಮ್ಯೂನಿಷ್ಟ್ ಪಕ್ಷದ ರಹಸ್ಯ ಅಜೆಂಡಾ? ನೇಪಾಳದ ಹಲವು ಜಿಲ್ಲೆಗಳ ಭೂಭಾಗ ಚೀನಾ ವಶಕ್ಕೆ

ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ಮೌನಕ್ಕೆ ಶರಣಾಗಿದೆ

Team Udayavani, Aug 19, 2020, 1:21 PM IST

ಕಮ್ಯೂನಿಷ್ಟ್ ಪಕ್ಷದ ರಹಸ್ಯ ಅಜೆಂಡಾ? ನೇಪಾಳದ ಹಲವು ಜಿಲ್ಲೆಗಳ ಭೂಭಾಗ ಚೀನಾ ವಶಕ್ಕೆ

ಕಾಠ್ಮಂಡು/ಬೀಜಿಂಗ್: ಚೀನಾದ ವಸಾಹತುಶಾಹಿ ಬಲೆಗೆ ನೇಪಾಳ ಬಹುಬೇಗನೆ ಬಲಿಪಶುವಾಗುತ್ತಿರುವ ದೇಶವಾಗಿದೆ. ಚೀನಾ ನಿಧಾನವಾಗಿ ಹಾಗೂ ಹಂತ, ಹಂತವಾಗಿ ನೇಪಾಳದ ಹಲವಾರು ಸ್ಥಳಗಳನ್ನು ಅತಿಕ್ರಮಿಸಿದೆ ಎಂದು ವರದಿ ತಿಳಿಸಿದೆ.

ನೇಪಾಳ ಸರ್ಕಾರಿ ಸಂಸ್ಥೆಯ ಅಂಕಿಅಂಶದ ಪ್ರಕಾರ, ಚೀನಾ ಅಕ್ರಮವಾಗಿ ನೇಪಾಳದ ಭೂಮಿಯನ್ನು ಆಕ್ರಮಿಸಿಕೊಳ್ಳುತ್ತಿದೆ. ಈಗಾಗಲೇ ಏಳು ಜಿಲ್ಲೆಗಳ ಗಡಿಯನ್ನು ಆಕ್ರಮಿಸಿಕೊಂಡಿದೆ. ಅಲ್ಲದೇ ನಿಧಾನಕ್ಕೆ ಅತಿಕ್ರಮಣ ಮುಂದುವರಿಸಿದೆ ಎಂದು ತಿಳಿಸಿದೆ.

ನಿಜಕ್ಕೂ ಕಮ್ಯೂನಿಷ್ಟ್ ಆಡಳಿತದ ಚೀನಾದ ಭೂ ಅತಿಕ್ರಮಣದ ನಿಜವಾದ ಅಂಕಿಅಂಶವನ್ನು ನೇಪಾಳದ ಕಮ್ಯೂನಿಷ್ಟ್ ಪಕ್ಷ ಮುಚ್ಚಿಡಲು ಪ್ರಯತ್ನಿಸುತ್ತಿದೆ. ಚೀನಾ ನಿಜವಾಗಿ ಆಕ್ರಮಿಸಿಕೊಂಡ ಭೂಮಿ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೇಪಾಳ ಸರ್ಕಾರ ಬಹಿರಂಗಪಡಿಸುತ್ತಿಲ್ಲ. ಚೀನಾ ನೇಪಾಳದ ಹಲವು ಭೂಭಾಗವನ್ನು ಅತಿಕ್ರಮಿಸಿರುವುದಾಗಿ ಶಂಕಿಸಿರುವುದಾಗಿ ವರದಿ ವಿವರಿಸಿದೆ.

ಚೀನಾದ ಕಮ್ಯೂನಿಷ್ಟ್ ಪಕ್ಷದ ಭಯದಿಂದ ಚೀನಾ ಕಾನೂನುಬಾಹಿರವಾಗಿ ಭೂ ಭಾಗವನ್ನು ಆಕ್ರಮಿಸಿಕೊಳ್ಳುತ್ತಿದ್ದರೂ ಕೂಡಾ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ರಾಯಭಾರಿ ತಜ್ಞರು ವಿಶ್ಲೇಷಿಸಿದ್ದಾರೆ.

ಇದನ್ನು ಓದಿ: ನೇಪಾಲದ ಮೃದು ಮಾತು; ಬಿಕ್ಕಟ್ಟು ಶಮನವಾಗಲಿ

ನೇಪಾಳದ ಡೋಲಾಖ್, ಗೋರಖ್, ದಾರ್ಚೂಲಾ, ಹುಮ್ಲಾ, ಸಿಂಧುಪಾಲ್ ಚೌಕ್, ಸಂಖುವಾಸಭಾ ಮತ್ತು ರಾಸುವಾ ಜಿಲ್ಲೆಗಳು ಚೀನಾದ ಭೂ ಅತಿಕ್ರಮಣದ ಸಂಚಿಗೆ ಬಲಿಯಾಗಿರುವುದಾಗಿ ವರದಿ ಆರೋಪಿಸಿದೆ.

ಚೀನಾ ನೇಪಾಳದ ಡೋಲಾಖ್ ಪ್ರದೇಶದಲ್ಲಿ ಸುಮಾರು 1,500 ಮೀಟರ್ ನಷ್ಟು ದೂರ ಅಂತರಾಷ್ಟ್ರೀಯ ಗಡಿಯನ್ನು ವಿಸ್ತರಿಸಿದೆ. ಅದೇ ರೀತಿ ಡೋಲಾಖ್ ನ ಕೋರ್ಲಾಂಗ್ ಪ್ರದೇಶದಲ್ಲಿನ 57 ನಂಬರಿನ ಗಡಿ ಕಂಬವನ್ನು ಮುಂದಿಕ್ಕೆ ಹಾಕಿ ತನ್ನ ಜಾಗವನ್ನು ವಿಸ್ತರಿಸಿಕೊಂಡಿದೆ. ಅಲ್ಲದೇ ಮಾನವಹಕ್ಕು ಆಯೋಗ ವರದಿಯಂತೆ, ದಾರ್ಚುಲಾದ ಜಿಯೂಜಿಯು ಗ್ರಾಮವನ್ನು ಚೀನಾ ಅತಿಕ್ರಮಿಸಿದೆ. ನೇಪಾಳದ ಪ್ರದೇದಲ್ಲಿದ್ದ ಹಲವಾರು ಮನೆಗಳು ಇದೀಗ ಚೀನಾ ಸುಪರ್ದಿಗೆ ಸೇರಿದೆ ಎಂದು ಹೇಳಿದೆ.

ಕಳೆದ ಕೆಲವು ವರ್ಷಗಳಿಂದ ನೇಪಾಳದ ಕಮ್ಯೂನಿಷ್ಟ್ ಪಕ್ಷ ಚೀನಾ ಕಮ್ಯೂನಿಷ್ಟ್ ಪಕ್ಷ(ಸಿಸಿಪಿ)ದ ಕೈಗೊಂಬೆಯಂತೆ ಕುಣಿಯುತ್ತಿದೆ. ಇದರಿಂದಾಗಿ ನೇಪಾಳದ ಬಹುತೇಕ ನಿರ್ಧಾರಗಳಲ್ಲಿ ಚೀನಾ ಹಸ್ತಕ್ಷೇಪ ನಡೆಸುತ್ತಿದೆ ಎಂದು ವರದಿ ತಿಳಿಸಿದೆ.

ಕೆಲವು ವಿಶ್ಲೇಷಕರ ಪ್ರಕಾರ, ನೇಪಾಳ ಪ್ರಧಾನಿ ಕೆಪಿ ಒಲಿ ಹಾಗೂ ಎನ್ ಸಿಪಿಯ ಪ್ರಚಂಡ ನಡುವಿನ ವೈಷಮ್ಯವನ್ನು ಬಗೆಹರಿಸುವ ಮಧ್ಯವರ್ತಿಯಂತೆ ನೇಪಾಳದಲ್ಲಿರು ಚೀನಾ ರಾಯಭಾರಿ ಕಾರ್ಯನಿರ್ವಹಿಸುತ್ತಿರುವ ಬೆಳವಣಿಗೆಯನ್ನು ಇಡೀ ಜಗತ್ತು ಗಮನಿಸುತ್ತಿದೆ. ಚೀನಾ-ನೇಪಾಳದ ಈ ಗೆಳೆತನ ಮತ್ತು ನೆರವು ನೀಡುತ್ತಿರುವ ಹಿಂದಿನ ಉದ್ದೇಶ ಚೀನಾದ ಭೂ ವಿಸ್ತರಣಾ ದಾಹದ ವಸಾಹತುಶಾಹಿಯ ಒಂದು ಭಾಗದ ಮುಂದುರಿಕೆಯಾಗಿದೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.