PM Modi: 36 ಗಂಟೆಗಳು, 5 ಸಾವಿರ ಕಿ.ಮೀ, 8 ಕಾರ್ಯಕ್ರಮಗಳು, 7 ಮಹಾನಗರಗಳು…
ಇದು ಪ್ರಧಾನಿ ಮೋದಿಯವರ ಇನ್ನು ಎರಡು ದಿನಗಳ ಟೈಂ ಲೈನ್
Team Udayavani, Apr 22, 2023, 5:28 PM IST
ನವದೆಹಲಿ: 36 ಗಂಟೆಗಳು, 5,000 ಕ್ಕೂ ಹೆಚ್ಚು ಕಿ.ಮೀ ಸುತ್ತಾಟ, 8 ಕಾರ್ಯಕ್ರಮಗಳು, 7 ಮಹಾನಗರಗಳು… ಇದು ಪ್ರಧಾನಿ ಮೋದಿಯವರ ಇನ್ನು ಎರಡು ದಿನಗಳ ಟೈಂ ಲೈನ್.
ಎ. 24 ರ ಮುಂಜಾನೆ ರಾಷ್ಟ್ರ ರಾಜಧಾನಿಯಿಂದ ತಮ್ಮ ಪ್ರಯಾಣ ಪ್ರಾರಂಭಿಸಲಿರುವ ಪ್ರಧಾನಿ, ನೇರವಾಗಿ ದೆಹಲಿಯಿಂದ 500 ಕಿ.ಮೀ ದೂರದಲ್ಲಿರುವ ಮಧ್ಯ ಪ್ರದೇಶದ ಖಜರಾಹೋಗೆ ತೆರಳಲಿದ್ದಾರೆ. ಅಲ್ಲಿಂದ ಅವರು ರೇವಾಗೆ ತೆರಳಿ ರಾಷ್ಟ್ರೀಯ ಪಂಚಾಯತ್ ದಿನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ಮತ್ತೆ ಖಜರಾಹೋಗೆ ತೆರಳಲಿದ್ದಾರೆ. ಈ ಎರಡೂ ನಗರಗಳ ನಡುವಿನ ಅವರ ಸಂಚಾರ ಸುಮಾರು 280 ಕಿ.ಮೀ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಜರಾಹೋದಿಂದ ಮೋದಿ ದೇವನಾಡು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಖಜರಾಹೋದಿಂದ ಹೊರಟು ಕೇರಳದ ಕೊಚ್ಚಿಯಲ್ಲಿ ನಡೆಯಲಿರುವ ʻಯುವಂ ಕಾನ್ಕ್ಲೇವ್ʼ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಇದಕ್ಕಾಗಿ ಅವರು ವಿಮಾನದಲ್ಲಿ ಸುಮಾರು 1700 ಕಿ.ಮೀ ದೂರ ಪ್ರಯಾಣಿಸಲಿದ್ದಾರೆ.
ಎ. 25 ರಂದು ಮುಂಜಾನೆ ಮೋದಿಯವರು ಕೊಚ್ಚಿಯಿಂದ ನೇರವಾಗಿ ಕೇರಳ ರಾಜಧಾನಿ ತಿರುವನಂತಪುರಕ್ಕೆ ಭೇಟಿ ನೀಡಲಿದ್ದಾರೆ. ಇದರ ಅಂತರ ಸುಮಾರು 190 ಕಿ.ಮೀ. ತಿರುವನಂತಪುರದಲ್ಲಿ ಪ್ರಧಾನಿ ಮೋದಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಹಲವು ಅಭಿವೃದ್ದಿ ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದಾರೆ.
ತಿರುವನಂತಪುರದಿಂದ ಸೂರತ್ ಮೂಲಕ ಸಿಲ್ವಸ್ಸಾಗೆ ಪ್ರಧಾನಿ ತೆರಳಲಿದ್ದಾರೆ. ಈ ಪ್ರಯಾಣವು ಸುಮಾರು 1570 ಕಿ.ಮೀ ಅಂತರವನ್ನು ಹೊಂದಿರಲಿದೆ. ಅಲ್ಲಿ ಅವರು ನಮೋ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ ಅಲ್ಲಿಯೂ ಹಲವು ಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ಅಲ್ಲಿಂದ ಮೋದಿ ಭಾರತದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದಾಗಿರುವ ದಾಮನ್ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಅಲ್ಲಿ ದೇವಕಾ ಸಮುದ್ರ ದಂಡೆ ಅಭಿವೃದ್ಧಿ ಕಾರ್ಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ 110 ಕಿ.ಮೀ ದೂರದ ಸೂರತ್ಗೆ ತೆರಳಲಿದ್ದಾರೆ.
ಸೂರತ್ನಿಂದ ಮತ್ತೆ ದೆಹಲಿಗೆ ತೆರಳಲಿದ್ದು, ಈ ಪ್ರಯಾಣ 940 ಕಿ.ಮೀ ದೂರವಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್
ಒಟ್ಟಾರೆಯಾಗಿ ಈ ಎರಡು ದಿನಗಳಲ್ಲಿ ಪ್ರಧಾನಿ ಮೋದಿಯವರು ಸುಮಾರು 5,300 ಕಿ.ಮೀ ಸಂಚರಿಸಲಿದ್ದು, ಸುಮಾರು 36 ಗಂಟೆಗಳ ಕಾರ್ಯಕ್ರಮಗಳು ಈ ಪಟ್ಟಿಯಲ್ಲಿರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ