ಪಿಎಸ್ಯು ಖಾಸಗಿಗೆ : 4 ಪ್ರಮುಖ ವಲಯಗಳಿಗೆ ವಿನಾಯಿತಿ ; ಪ್ರಧಾನಿ ಹೇಳಿಕೆ
Team Udayavani, Feb 25, 2021, 6:40 AM IST
ಹೊಸದಿಲ್ಲಿ: ನಷ್ಟದಲ್ಲಿರುವ ಸಾರ್ವಜನಿಕ ರಂಗದ ಉದ್ದಿಮೆ (ಪಿಎಸ್ಯು)ಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆದರೆ ನಾಲ್ಕು ವ್ಯೂಹಾತ್ಮಕ ವಲಯಗಳಲ್ಲಿರುವ ಪಿಎಸ್ಯುಗಳಲ್ಲಿ ಅಲ್ಪ ಪ್ರಮಾಣದ ಸರಕಾರಿ ಷೇರುಗಳನ್ನು ಉಳಿಸಿಕೊಳ್ಳಲು ಚಿಂತನೆ ನಡೆಸಲಾಗಿದೆ.
ನಷ್ಟದಲ್ಲಿರುವ ಉದ್ಯಮಗಳನ್ನು ಜತೆಗಿರಿಸಿಕೊಂಡು, ಜನರ ತೆರಿಗೆ ಹಣ ಪೋಲು ಮಾಡುವ ಉದ್ದೇಶ ನಮಗಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಬದಲಾಗಿ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳಲ್ಲಿ ಹಣ ವಿನಿಯೋಗಿಸಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬಜೆಟ್ನಲ್ಲಿ ಖಾಸಗೀಕರಣದ ಅವಕಾಶ ಕುರಿತಾದ ವೆಬಿನಾರ್ನಲ್ಲಿ ಮಾತನಾಡಿದ ಮೋದಿ, ತೈಲ, ಅನಿಲ ಮತ್ತು ವಿದ್ಯುತ್ ಕ್ಷೇತ್ರಗಳ ಸುಮಾರು 100 ಸಾರ್ವಜನಿಕ ರಂಗದ ಉದ್ದಿಮೆಗಳ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಮೂಲಕ 2.5 ಲಕ್ಷ ಕೋಟಿ ರೂ. ಹೂಡಿಕೆ ಪಡೆವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಸರಕಾರದ ಪ್ರಮುಖ ಕೆಲಸವೇ ಉದ್ದಿಮೆಗಳು ಮತ್ತು ವ್ಯಾಪಾರಕ್ಕೆ ಬೆಂಬಲ ನೀಡುವುದು. ಹೀಗಾಗಿ ಸರಕಾರವು ಸ್ವತಃ ಮಾಲಕತ್ವ ಹೊಂದಿರುವುದು ಮತ್ತು ಸಂಸ್ಥೆಗಳನ್ನು ನಡೆಸುವುದು ಉತ್ತಮವಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಖಾಸಗಿ ರಂಗ ಉತ್ತಮ ಬಂಡವಾಳ ತರುತ್ತದೆ. ಜತೆಗೆ ಜಾಗತಿಕ ಮಟ್ಟದ ನಡೆ, ಉತ್ತಮ ನಿರ್ವಾಹಕರು, ನಿರ್ವಹಣೆಯಲ್ಲಿ ಬದಲಾವಣೆ ಮತ್ತು ಆಧುನೀಕರಣ ಸಾಧ್ಯವಾಗುತ್ತದೆ. ಹೀಗಾಗಿ ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಖಾಸಗಿ ವಲಯಕ್ಕೆ ನೀಡಿ, ಬರುವ ಹಣವನ್ನು ಜನಕಲ್ಯಾಣ ಯೋಜನೆಗಳಿಗೆ ವೆಚ್ಚ ಮಾಡಬಹುದು ಎಂದಿದ್ದಾರೆ.
1.75 ಲಕ್ಷ ಕೋ.ರೂ. ಗುರಿ
ಬಿಪಿಸಿಎಲ್, ಏರ್ ಇಂಡಿಯಾ, ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಹೆಲಿಕಾಪ್ಟರ್ ಸೇವಾ ಸಂಸ್ಥೆ ಪವನ್ ಹನ್ಸ್, ಐಡಿ ಬಿಐ ಮತ್ತು ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾದ ಸರಕಾರಿ ಷೇರುಗಳನ್ನು ಎ. 1ರಿಂದ ಮಾರಾಟ ಮಾಡಿ 1.75 ಲಕ್ಷ ಕೋಟಿ ರೂ. ಗಳಿಸುವ ಗುರಿ ಇದೆ. ಜತೆಗೆ ಎಲ್ಐಸಿ, 2 ಸರಕಾರಿ ಬ್ಯಾಂಕ್ಗಳು ಮತ್ತು 1 ವಿಮಾ ಕಂಪೆನಿಗಳ ಷೇರುಗಳನ್ನೂ ಖಾಸಗಿಯವರಿಗೆ ನೀಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ