ಚೆನ್ನೈ-ಕೊಯಮತ್ತೂರು ನಡುವಿನ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ PM ಮೋದಿ
ರೈಲಿನಲ್ಲಿರಲಿದೆ ಹಲವು ಅತ್ಯಾಧುನಿಕ ಸುರಕ್ಷಾ ವ್ಯವಸ್ಥೆ
Team Udayavani, Apr 8, 2023, 6:00 PM IST
ಚೆನ್ನೈ: ಚೆನ್ನೈ-ಕೊಯಮತ್ತೂರು ಮಧ್ಯೆ ಸಂಪರ್ಕ ಕಲ್ಪಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ಧಾರೆ.
ಚೆನ್ನೈ ಸೆಂಟ್ರಲ್ ಡಾ.MGR ರೈಲ್ವೇ ನಿಲ್ದಾಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ.
ಆ ಬಳಿಕ ರೈಲಿನಲ್ಲಿ ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದ್ದಾರೆ.
ತಮಿಳುನಾಡಿನ ಪ್ರಮುಖ ಎರಡು ನಗರಗಳ ಮಧ್ಯೆ ವಂದೇ ಭಾರತ್ ಓಡುವುದರಿಂದ ಚೆನ್ನೈ-ಕೊಯಮತ್ತೂರು ನಡುವಿನ ಪ್ರಯಾಣ ಅವಧಿಯೂ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಈ ರೈಲು ಚೆನ್ನೈನಿಂದ ಕೊಯಮತ್ತೂರು ತಲುಪಲು 5 ಗಂಟೆ 50 ನಿಮಿಷ ತೆಗೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | Prime Minister Narendra Modi flags off Chennai-Coimbatore Vande Bharat Express in Chennai, Tamil Nadu
(Source: DD News) pic.twitter.com/YiZetP3FoQ
— ANI (@ANI) April 8, 2023
ವಂದೇ ಭಾರತ್ ರೈಲು ʻಕವಚʼ ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ ಹೊಂದಿರಲಿದ್ದು, ಎಲ್ಲ ಬೋಗಿಗಳು ಸಿಸಿಟಿವಿ, ಆಟೋಮ್ಯಾಟಿಕ್ ಸ್ಲೈಡಿಂಗ್ ಬಾಗಿಲುಗಳು, ಬ್ರೈಲ್ ಲಿಪಿಯಲ್ಲೂ ಸೀಟು ಸಂಖ್ಯೆ, ದಿವ್ಯಾಂಗರಿಗೆ ಅನುಕೂಲವಾಗುವ ಶೌಚಾಲಯ ವ್ಯವಸ್ಥೆ, ಎಲ್ಇಡಿ ಲೈಟ್ಗಳು, 360 ಡಿಗ್ರಿ ತಿರುಗುವ ಆಸನ ವ್ಯವಸ್ಥೆ ಸೇರಿ ಅತ್ಯಾಧುನಿಕ ವ್ಯವಸ್ಥೆಯನ್ನೂ, ಉತ್ತಮ ಸುರಕ್ಷತಾ ವ್ಯವಸ್ಥೆಯನ್ನೂ ಹೊಂದಿದೆ.
ಇದನ್ನೂ ಓದಿ : ಕೊಳಕು ಬಟ್ಟೆ ಧರಿಸುವ ಹುಡುಗಿಯರು….: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ