
ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ
ಶೀಘ್ರದಲ್ಲೇ ಉದ್ಘಾಟನೆಗೊಳ್ಳುವ ಸಾಧ್ಯತೆ
Team Udayavani, Mar 30, 2023, 10:02 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು. ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಕಳೆದ ವರ್ಷ ನವೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದ ನೂತನ ಕಟ್ಟಡ ಶೀಘ್ರದಲ್ಲೇ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.
2020 ರ ಡಿಸೆಂಬರ್ನಲ್ಲಿ, ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಹೊಸ ಸಂಸತ್ ಭವನದ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ಮಾಡಿದ್ದರು. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಗೆ 2020 ರಲ್ಲಿ 971 ಕೋಟಿ ರೂ.ಗೆ ಯೋಜನೆಯನ್ನು ನೀಡಿದ ನಂತರ ಕಟ್ಟಡ ನಿರ್ಮಿಸಲಾಗುತ್ತಿದೆ. ಆದಾಗ್ಯೂ, ಯೋಜನಾ ವೆಚ್ಚವು ಹೆಚ್ಚಾಗಿದೆ ಎಂದು ಹೇಳಲಾಗಿದೆ.
ಹೊಸ ಕಟ್ಟಡವು ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ಭವ್ಯವಾದ ಸಂವಿಧಾನ ಭವನ, ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಕಮಿಟಿ ಕೊಠಡಿಗಳು, ಊಟದ ಪ್ರದೇಶ ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿರುತ್ತದೆ.
ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿಯಲ್ಲಿ, ಸರಕಾರವು ಕಾರ್ಯನಿರ್ವಾಹಕ ಎನ್ಕ್ಲೇವ್ ಅನ್ನು ಸಹ ನಿರ್ಮಿಸುತ್ತದೆ, ಅದು ಹೊಸ ಪ್ರಧಾನ ಮಂತ್ರಿ ಕಚೇರಿ (PMO), ಕ್ಯಾಬಿನೆಟ್ ಸೆಕ್ರೆಟರಿಯೇಟ್, ಇಂಡಿಯಾ ಹೌಸ್ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ ಸಚಿವಾಲಯವನ್ನು ಹೊಂದಿರುತ್ತದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ರಾಮಚಂದ್ರನ್ ವಿಶ್ವನಾಥನ್ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ