ಫೆ.6ರಂದು ಪ್ರಧಾನಿ ಮೋದಿ ಅವರಿಂದ ತುಮಕೂರು ಎಚ್‌ಎಎಲ್‌ ಘಟಕ ಲೋಕಾರ್ಪಣೆ

1500ಕ್ಕೂ ಹೆಚ್ಚು ಗಣ್ಯರು.... ಒಂದು ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ

Team Udayavani, Feb 4, 2023, 5:24 PM IST

PM Modi

ತುಮಕೂರು: ಕೈಗಾರಿಕಾ ಕ್ಷೇತ್ರದಲ್ಲಿ ವಿಶ್ವಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಕಲ್ಪತರು ನಾಡಿನಲ್ಲಿ ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಘಟಕ ಉದ್ಘಾಟನೆ ಗೊಳ್ಳುತ್ತಿರುವುದು ಜಿಲ್ಲೆಯ ಜನರಲ್ಲಿ ಸಂತಸ ಮೂಡಿದೆ.

615 ಎಕರೆ: ಗುಬ್ಬಿ ತಾಲೂಕಿನ ಬಿದರಹಳ್ಳ ಕಾವಲ್‌ನಲ್ಲಿ 615 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಉದ್ಘಾಟನೆಗೆ ಸಜ್ಜಾಗಿದೆ. 2016 ಜನವರಿಯಲ್ಲಿ ಪ್ರಧಾನಿ ಮೋದಿಯವರು ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. 7 ವರ್ಷಗಳ ಬಳಿಕ ಈ ಘಟಕ ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳಲು ದಿನಗಣನೆ ಆರಂಭವಾಗಿದೆ.

ಫೆ.6 ರಂದು ಮಧ್ಯಾಹ್ನ 3.30ಕ್ಕೆ ಎಚ್‌ಎಎಲ್‌ ಹೆಲಿಕಾಪ್ಟರ್‌ ಘಟಕವನ್ನು ಲೋಕಾರ್ಪಣೆ ಮಾಡಲು ಕಲ್ಪತರುನಾಡಿಗೆ ಆಗಮಿಸುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಜಿಲ್ಲಾಡಳಿತ ಹಾಗೂ ಎಚ್‌ಎಎಲ್‌ ಆಡಳಿತ ಮಂಡಳಿ ಸರ್ವ ಸನ್ನದ್ಧವಾಗಿದೆ.

ಮನೆ ಮನೆಗೆ ಗಂಗೆ: ಎಚ್‌ಎಎಲ್‌ ಕಾರ್ಯಕ್ರಮ ಬಳಿಕ ಪ್ರಧಾನಿ, ಜಲ ಜೀವನ್‌ ಮಿಷನ್‌ ಯೋಜನೆಯಡಿ ಮನೆ ಮನೆಗೆ ಗಂಗೆ ಕಾಮಗಾರಿಗೂ ಶಿಲಾನ್ಯಾಸ ನೆರವೇರಿಸಲಿದ್ದು, ಈ ಕಾರ್ಯಕ್ಕೂ ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾಯಿಂದ ಸರಣಿ ಸಭೆ: ಈಗಾಗಲೇ ಜಿಲ್ಲಾಧಿಕಾರಿ ವೈ.ಎಸ್‌ .ಪಾಟೀಲ್‌ ಅವರು ಜಿಲ್ಲಾಡಳಿತದ ವತಿಯಿಂದ ಪ್ರಧಾನಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆಗಳನ್ನು ನಡೆಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.

ಊಟದ ವ್ಯವಸ್ಥೆ: ಈ ಅಭೂತ ಪೂರ್ವ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಸುಮಾರು 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದ್ದು, ಎಚ್‌ಎಎಲ್‌ ಘಟಕದ ಆವರಣದಲ್ಲಿ ಸೇರುವ ಜನಸ್ತೋಮ ಕುಳಿತುಕೊಳ್ಳಲು ಆಸನಗಳ, ಊಟ, ಕುಡಿಯುವ ನೀರಿನ ವ್ಯವಸ್ಥೆಗೆ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ.

ವಿಶಾಲ ವೇದಿಕೆ ನಿರ್ಮಾಣ
ಎಚ್‌.ಎ.ಎಲ್‌ ಹೆಲಿಕಾಪ್ಟರ್‌ ಘಟಕದ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಒಂದು ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಕಾರ್ಯಕ್ರಮಕ್ಕಾಗಿ ವಿಶಾಲ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ನಡೆದಿದೆ.

ಎಚ್‌ಎಎಲ್‌ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಪ್ರಾರಂಭವಾದಾಗ ರಾಜ್ಯ ಸರ್ಕಾರದಿಂದ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಎಚ್‌ಎಎಲ್‌ ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.- ವೈ.ಎಸ್‌.ಪಾಟೀಲ್‌, ಜಿಲ್ಲಾಧಿಕಾರಿ

ನೀರಿನ ಬಾಟಲ್‌, ಬ್ಯಾಗ್‌, ಪ್ಲಾಸ್ಟಿಕ್‌ ಕವರ್‌ ತರುವಂತಿಲ್ಲ
ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮೊಬೈಲ್‌ಗ‌ಳನ್ನು ಹೊರತುಪಡಿಸಿ ಬೇರೆ ಇನ್ನಾವುದೇ ವಸ್ತುಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ತಿಳಿಸಿದ್ದಾರೆ. ಮಧ್ಯಾಹ್ನ 1ರಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಜನರನ್ನು ಬಿಡಲು ಪ್ರಾರಂಭ ಮಾಡಲಾಗುವುದು. 2.30 ರೊಳಗೆ ಎಲ್ಲರೂ ಒಳಗೆ ಸೇರಿರಬೇಕು. ಕಾರ್ಯಕ್ರಮಕ್ಕೆ ಆಗಮಿಸುವವರು ನೀರಿನ ಬಾಟಲ್‌, ಬ್ಯಾಗ್‌ಗಳು, ಪ್ಲಾಸ್ಟಿಕ್‌ ಕವರ್‌ ಸೇರಿದಂತೆ ಇತರೆ ಯಾವುದೇ ವಸ್ತುಗಳನ್ನು ತರುವಂತಿಲ್ಲ ಎಂದು ತಿಳಿಸಿದ ಅವರು, ಕಾರ್ಯಕ್ರಮದ ಸ್ಥಳದಲ್ಲೇ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ 1500ಕ್ಕೂ ಹೆಚ್ಚು ಗಣ್ಯರು
ಬಿದರೆಹಳ್ಳ ಕಾವಲ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಎಚ್‌ಎಎಲ್‌ ಘಟಕ ಲೋಕಾರ್ಪಣೆ ಫೆ.6 ರಂದು ಮಧ್ಯಾಹ್ನ 3.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುವರು. ನಂತರ ಎಲ್‌ಯುಎಚ್‌ ಹೆಲಿಕಾಪ್ಟರ್‌ನ್ನು ಸಹ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ತಿಳಿಸಿದರು. ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ನಿರ್ಮಾಣಕ್ಕೆ 615 ಎಕರೆ ಜಮೀನು ಕೊಡಲಾಗಿತ್ತು. 2016
ಜನವರಿಯಲ್ಲಿ ಪ್ರಧಾನಿ ಮೋದಿಯ ವರು ಭೂಮಿಪೂಜೆ ನೆರವೇರಿಸಿದ್ದರು. 6 ವರ್ಷಗಳಲ್ಲಿ ಹೆಲಿಕಾಪ್ಟರ್‌ ತಯಾರು ಮಾಡುವ ಮಟ್ಟಕ್ಕೆ ಸಿದ್ಧಗೊಳಿಸಿ ಲೋಕಾರ್ಪಣೆಮಾಡಲಾಗುತ್ತಿದೆ. ಈ ಅಭೂತಪೂರ್ವ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಸಹಾಯಕ ರಕ್ಷಣಾ ಸಚಿವರು, ರಾಜ್ಯ ರಕ್ಷಣಾ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಮಂದಿ ಗಣ್ಯರು ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಊಟ, ಬಸ್‌, ಪಾರ್ಕಿಂಗ್‌ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿದೆ. ಯಾವುದೇ ರೀತಿಯ ಅಡಚಣೆಗಳು ಉಂಟಾಗದಂತೆ ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ವಾಹನಗಳ ಸಂಚಾರ ಮಾರ್ಗ ಬದಲಾವಣೆ
ಫೆ.6 ರಂದು ಬೆಳಗ್ಗೆಯಿಂದ ಸಂಜೆ ವರೆಗೆ 206 ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ವಾಹನ ಚಾಲಕರು, ಸಾರ್ವ ಜನಿಕರು ಮಾರ್ಗ ಬದಲಾವಣೆ ಬಗ್ಗೆ ಗಮನ ಹರಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಮನವಿ ಮಾಡಿದರು. ಜಿಲ್ಲೆಗೆ ಪ್ರಧಾನಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಐದಾರು ಬಾರಿ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆ ಕೊಡಲಾಗಿದೆ. ಎಚ್‌ಎಎಲ್‌ ಅಧಿಕಾರಿಗಳು ಸಹ ಎಲ್ಲ ಸಿದ್ಧತೆ ಕೈಗೊಂಡಿದ್ದಾರೆ ಎಂದು ಹೇಳಿದರು.

ಬೇರೆ ಕಾರ್ಯಕ್ರಮ ಮಾಹಿತಿ ಇಲ್ಲ
ಎಚ್‌ಎಎಲ್‌ ಘಟಕದ ಉದ್ಘಾಟನೆ ಬಳಿಕ ಜಲಜೀವನ್‌ ಮಿಷನ್‌ ಯೋಜನೆಯ ಮನೆ ಮನೆ ಗಂಗೆ ಕಾರ್ಯಕ್ರಮಕ್ಕೆ ಪ್ರಧಾನಿಗಳು ಶಂಕುಸ್ಥಾಪನೆಯನ್ನು ನೆರವೇರಿಸುವರು. ಈ ಕಾರ್ಯಕ್ರಮಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳ ಕುರಿತು ಪ್ರಧಾನಿ ಕಚೇರಿಯಿಂದ ಇದುವರೆಗೂ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.