72 ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ : ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಿ ಎಂದ ಪ್ರಧಾನಿ
ಅನುಭವವು ಶೈಕ್ಷಣಿಕ ಜ್ಞಾನಕ್ಕಿಂತ ಹೆಚ್ಚಿನ ಶಕ್ತಿಯನ್ನು ಹೊಂದಿರುತ್ತದೆ
Team Udayavani, Mar 31, 2022, 12:36 PM IST
ನವದೆಹಲಿ: ದೇಶದ ಜನರೊಂದಿಗೆ ಸದನದಲ್ಲಿ ಗಳಿಸಿದ ಅನುಭವಗಳನ್ನು ಹಂಚಿಕೊಂಡು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವಂತೆ ಪ್ರಧಾನಿ ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವ ಸಂಸದರಲ್ಲಿ ನರೇಂದ್ರ ಮೋದಿ ಅವರು ಗುರುವಾರ ಒತ್ತಾಯಿಸಿದ್ದಾರೆ.
ಜುಲೈ ವರೆಗಿನ ಅವಧಿಯಲ್ಲಿ ನಿವೃತ್ತರಾಗಲಿರುವ 72 ರಾಜ್ಯಸಭಾ ಸದಸ್ಯರಿಗೆ ವಿದಾಯ ಹೇಳಿದ ಪ್ರಧಾನಿ, ಅನುಭವಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ ಮತ್ತು ಸಂಸದರು ಅದನ್ನು ರಾಷ್ಟ್ರದ ಸೇವೆಯಲ್ಲಿ ಮುನ್ನಡೆಸಬೇಕು ಎಂದರು.
“ಅನುಭವಿ ಜನರು ಹೋದಾಗ, ಉಳಿದವರ ಜವಾಬ್ದಾರಿ ಹೆಚ್ಚಾಗುತ್ತದೆ ಮತ್ತು ಅವರು ಸದನವನ್ನು ಮುಂದಕ್ಕೆ ಕೊಂಡೊಯ್ಯಬೇಕು.ಈ ಸದನದ ಸದಸ್ಯರಾಗಿ ಸಂಗ್ರಹಿಸಿದ ಅನುಭವವನ್ನು ದೇಶದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊಂಡೊಯ್ಯಬೇಕು. ನಮ್ಮ ಸದಸ್ಯರಿಗೆ ಸಾಕಷ್ಟು ಅನುಭವವಿದೆ.ಕೆಲವೊಮ್ಮೆ ಅನುಭವವು ಶೈಕ್ಷಣಿಕ ಜ್ಞಾನಕ್ಕಿಂತ ಹೆಚ್ಚಿನ ಶಕ್ತಿಯನ್ನು ಹೊಂದಿರುತ್ತದೆ” ಎಂದರು.
“ಭಾರತದ ಸ್ವಾತಂತ್ರ್ಯದ 75 ನೇ ವರ್ಷದಲ್ಲಿ, ನಮ್ಮ ಮಹಾನ್ ಪುರುಷರು ನಮಗೆ ಬಹಳಷ್ಟುಕೆ ಕೊಡುಗೆ ನೀಡಿದ್ದಾರೆ ಮತ್ತು ಈಗ ರಾಷ್ಟ್ರಕ್ಕೆ ನಮ್ಮ ಕೊಡುಗೆಯನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಮುಂಬರುವ ಪೀಳಿಗೆಗೆ ಸ್ಫೂರ್ತಿ ನೀಡುವಂತೆ ನಾನು ನಿವೃತ್ತಿಯಾಗುವ ಸದಸ್ಯರನ್ನು ಕೋರುತ್ತೇನೆ” ಎಂದು ಪ್ರಧಾನಮಂತ್ರಿ ಹೇಳಿದರು.
72 ಮಂದಿ ನಿವೃತ್ತರಾದವರಲ್ಲಿ, 65 ನಿವೃತ್ತ ಸದಸ್ಯರು 19 ರಾಜ್ಯಗಳನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಏಳು ಮಂದಿ ನಾಮನಿರ್ದೇಶಿತ ಸದಸ್ಯರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ