ಇನ್ನೂ 100ವರ್ಷ ಅಧಿಕಾರಕ್ಕೆ ಬರಬಾರದು ಅಂತ ನಿರ್ಧರಿಸಿದ್ದೀರಾ? ಕಾಂಗ್ರೆಸ್ ವಿರುದ್ಧ ಮೋದಿ

ನೀವು ಎಷ್ಟೋ ಚುನಾವಣೆಗಳಲ್ಲಿ ಸೋತಿದ್ದೀರಿ, ಆದರೂ ನಿಮ್ಮ ಅಹಂಕಾರ ಹೋಗಿಲ್ಲ.

Team Udayavani, Feb 7, 2022, 6:17 PM IST

ಇನ್ನೂ 100ವರ್ಷ ಅಧಿಕಾರಕ್ಕೆ ಬರಬಾರದು ಅಂತ ನಿರ್ಧರಿಸಿದ್ದೀರಾ? ಕಾಂಗ್ರೆಸ್ ವಿರುದ್ಧ ಮೋದಿ

ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಬೇಜವಾಬ್ದಾರಿತನದಿಂದ ವರ್ತಿಸಿತ್ತು. ಈ ದೇಶ ನಿಮ್ಮದಲ್ಲವಾ? ಈ ದೇಶದ ಜನರು ನಿಮ್ಮವರಲ್ಲವಾ? ಎಲ್ಲಾ ಬೆಳವಣಿಗೆಯನ್ನು ಜನರು ಗಮನಿಸುತ್ತಿದ್ದಾರೆ. ಪ್ರತಿಯೊಂದನ್ನು ವಿರೋಧಿಸುವುದು ಸೂಕ್ತವಲ್ಲ. ನೀವು (ಕಾಂಗ್ರೆಸ್) ಈ ಮನಸ್ಥಿತಿಯಿಂದ ಹೊರಬರಬೇಕಾಗಿದೆ…ಇದು ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಫೆ.07) ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ ಪರಿ.

ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ವಂದನಾ ನಿರ್ಣಯ ಭಾಷಣಕ್ಕೆ ಉತ್ತರ ನೀಡುತ್ತಾ ಮಾತನಾಡಿದ ಪ್ರಧಾನಿ ಮೋದಿ, ನೀವು (ಕಾಂಗ್ರೆಸ್) 50ವರ್ಷ ದೇಶವನ್ನಾಳಿದಿರಿ. ಈ ಸ್ಧಳ (ಲೋಕಸಭೆ) ದೇಶಕ್ಕಾಗಿ ಉಪಯೋಗವಾಗಬೇಕು. ಆದರೆ ನೀವು ಈ ಸ್ಥಳವನ್ನು ಪಕ್ಷದ ರಾಜಕೀಯಕ್ಕಾಗಿ ಬಳಸಿಕೊಂಡಿದ್ದೀರಿ. ನಾವು ಅದಕ್ಕಾಗಿ ನಿಮಗೆ ಉತ್ತರ ಕೊಡಲೇಬೇಕಾಗಿದೆ. ಇದು ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದ್ದಲ್ಲ. ಇದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ. ನೀವು ಎಷ್ಟೋ ಚುನಾವಣೆಗಳಲ್ಲಿ ಸೋತಿದ್ದೀರಿ, ಆದರೂ ನಿಮ್ಮ ಅಹಂಕಾರ ಹೋಗಿಲ್ಲ. ನಿಮ್ಮ ಪರಿಸರ ನಿಮ್ಮ ಅಹಂಕಾರವನ್ನು ಬಿಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ನಮಗೆ ಪ್ರಜಾಪ್ರಭುತ್ವದ ಬಗ್ಗೆ ದೃಢವಾದ ನಂಬಿಕೆ ಇದೆ. ಅಷ್ಟೇ ಅಲ್ಲ ಟೀಕೆಯೂ ಕೂಡಾ ಪ್ರಜಾಪ್ರಭುತ್ವದ ಪ್ರಮುಖ ಒಂದು ಭಾಗವಾಗಿದೆ. ಆದರೆ ಕುರುಡು ವಿರೋಧ ಯಾವಾಗಲೂ ಉತ್ತಮವಾದ ಮಾರ್ಗವಲ್ಲ ಎಂದು ಪ್ರಧಾನಿ ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದರು.

ಕೋವಿಡ್ 19 ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಮಿತಿಯನ್ನು ಮೀರಿ ವರ್ತಿಸಿತ್ತು. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ನಾವು ವಿಶ್ವಸಂಸ್ಥೆಯ ಅಣತಿಯಂತೆ ಲಾಕ್ ಡೌನ್ ಹೇರಿ, ಮಾರ್ಗಸೂಚಿ ಅನುಸರಿಸುವಂತೆ ಘೋಷಿಸಿದ್ದೇವು. ಆದರೆ ಕಾಂಗ್ರೆಸ್ ಪಕ್ಷ ಮುಂಬಯಿ ರೈಲ್ವೆ ನಿಲ್ದಾಣದಲ್ಲಿ ಅಮಾಯಕ ಜನರನ್ನು ಹೆದರಿಸುವ ಕೆಲಸದಲ್ಲಿ ತೊಡಗಿತ್ತು ಎಂದು ದೂರಿದರು.

ವಲಸೆ ಕಾರ್ಮಿಕರು ಮುಂಬಯಿ ತೊರೆಯುವಂತೆ ಮಾಡಿದಿರಿ, ವಲಸೆ ಕಾರ್ಮಿಕರನ್ನು ಮುಂಬಯಿನಿಂದ ಉತ್ತರಪ್ರದೇಶ, ಬಿಹಾರಕ್ಕೆ ಕಳುಹಿಸಿಕೊಟ್ಟಿದ್ದೀರಿ. ಇದು ನೀವು ಸೃಷ್ಟಿಸಿದ ಆತಂಕ ಎಂದು ಪ್ರಧಾನಿ ಕಿಡಿಕಾರಿದರು.

ತಮಿಳುನಾಡು, ತೆಲಂಗಾಣ, ಜಾರ್ಖಂಡ್, ಬಿಹಾರದಲ್ಲಿ ಕಾಂಗ್ರೆಸ್ ಅನ್ನು ಜನರು ಅಧಿಕಾರದಿಂದ ಕಿತ್ತೊಗೆದಿದ್ದಾರೆ. ಇನ್ನೆಂದೂ ನಿಮಗೆ ಅವರು ಮತ ಚಲಾಯಿಸುವುದಿಲ್ಲ. ನಾಗಾಲ್ಯಾಂಡ್ ನಲ್ಲಿ 24 ವರ್ಷಗಳ ಹಿಂದೆ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದೀರಿ, ಒಡಿಶಾದಲ್ಲಿ 27 ವರ್ಷದ ಹಿಂದೆ ಅಧಿಕಾರ ಹೋಯ್ತು, ಗೋವಾದಲ್ಲಿ 28 ವರ್ಷಗಳ ಹಿಂದೆ ಪೂರ್ಣ ಬಹುಮತ ಪಡೆದಿದ್ದೀರಿ. 1972ರಲ್ಲಿ ಪಶ್ಚಿಮಬಂಗಾಳದಲ್ಲಿ ಅಧಿಕಾರ ಪಡೆದಿದ್ದೀರಿ. ಪ್ರತ್ಯೇಕ ತೆಲಂಗಾಣ ರಚಿಸಿ ಅಧಿಕಾರ ಪಡೆಯಬೇಕೆಂದು ಯೋಚಿಸಿದ್ದೀರಿ, ಆದರೆ ಜನರು ನಿಮ್ಮನ್ನು ಒಪ್ಪಲಿಲ್ಲ ಎಂದು ಮೋದಿ ತಿರುಗೇಟು ನೀಡಿದರು.

ನಿಮ್ಮ ಈ ಎಲ್ಲಾ ನಡೆಗಳನ್ನು ಗಮನಿಸಿದರೆ ನೀವು(ಕಾಂಗ್ರೆಸ್) ಇನ್ನೂ 100 ವರ್ಷಗಳ ಕಾಲ ಅಧಿಕಾರಕ್ಕೆ ಬರಲೇ ಬಾರದೆಂದು ನಿರ್ಧರಿಸಿದಂತಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.