ರಾಜಸ್ಥಾನ ಕಾರ್ಯಕ್ರಮದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಗೆ ಪ್ರಧಾನಿ ಮೋದಿ ಬಹುಪರಾಕ್
ಬುಡಕಟ್ಟು ಸಮುದಾಯದ ಹೋರಾಟ ಮತ್ತು ತ್ಯಾಗಕ್ಕೆ ಸೂಕ್ತ ಸ್ಥಾನ ಮಾನ ದೊರಕಲಿಲ್ಲ
Team Udayavani, Nov 1, 2022, 2:58 PM IST
ಜೈಪುರ: ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಶ್ಲಾಘಿಸಿದರು. ಮತ್ತು ತಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದ್ದ ದಿನಗಳನ್ನು ನೆನಪಿಸಿಕೊಂಡರು.
ಇದನ್ನೂ ಓದಿ:ಚೆನ್ನಪ್ಪನಪುರ ವೀರಭದ್ರೇಶ್ವರ ರಥೋತ್ಸವದಲ್ಲಿ ಚಕ್ರ ಮುರಿದು, ಉರುಳಿ ಬಿದ್ದ ರಥ
“ಅಶೋಕ್ ಜೀ ಮತ್ತು ನಾನು (ಮೋದಿ) ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದೇವೆ. ದೇಶದ ಎಲ್ಲಾ ಮುಖ್ಯಮಂತ್ರಿಗಳ ಸಾಲಿನಲ್ಲಿ ಗೆಹ್ಲೋಟ್ ಅತ್ಯಂತ ಹಿರಿಯರಾಗಿದ್ದಾರೆ. ಅಶೋಕ್ ಜೀ ಈಗಲೂ ದೇಶದ ಅತೀ ಹಿರಿಯ ಮುಖ್ಯಮಂತ್ರಿಗಳಾಗಿದ್ದು, ಅನುಭವಿ ರಾಜಕಾರಣಿಯಾಗಿದ್ದಾರೆ” ಎಂದು ಹೊಗಳಿದರು.
ನಂತರ ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ, ಸ್ವಾತಂತ್ರ್ಯ ನಂತರ ಬರೆದ ಇತಿಹಾಸದಲ್ಲಿ ಬುಡಕಟ್ಟು ಸಮುದಾಯದ ಹೋರಾಟ ಮತ್ತು ತ್ಯಾಗಕ್ಕೆ ಸೂಕ್ತ ಸ್ಥಾನ ಮಾನ ದೊರಕಲಿಲ್ಲ ಎಂದು ಹೇಳಿದರು.
ಇಂದು ದೇಶದಲ್ಲಿ ದಶಕಗಳ ಹಿಂದೆ ನಡೆದ ತಪ್ಪುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಬುಡಕಟ್ಟು ಜನಾಂಗವನ್ನು ಹೊರತುಪಡಿಸಿ ಭಾರತದ ಭೂತ, ವರ್ತಮಾನ ಮತ್ತು ಭವಿಷ್ಯಕಾಲ ಪೂರ್ಣಗೊಳ್ಳಲಾರದು ಎಂದು ಪ್ರಧಾನಿ ಮೋದಿ ತಿಳಿಸಿದ್ದು, ನಮ್ಮ ಸ್ವಾತಂತ್ರ್ಯ ಹೋರಾಟದ ಪ್ರತಿಯೊಂದು ಅಂಶವೂ ಇತಿಹಾಸದ ಪುಟಗಳಲ್ಲಿ ದಾಖಲಾಗಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ