ಹಳ್ಳಿಗಳ ಕಡೆಗೆ ಪೊಲೀಸರ ನಡಿಗೆ; ಜಾಗೃತಿ ಮೂಡಿಸಿ ಅಪರಾಧ ಹತೋಟಿಗೆ ಯತ್ನ


Team Udayavani, Mar 25, 2021, 12:27 AM IST

ಹಳ್ಳಿಗಳ ಕಡೆಗೆ ಪೊಲೀಸರ ನಡಿಗೆ; ಜಾಗೃತಿ ಮೂಡಿಸಿ ಅಪರಾಧ ಹತೋಟಿಗೆ ಯತ್ನ

ಕಾರ್ಕಳ: ಹೆಚ್ಚುತ್ತಿರುವ ಕಳ್ಳತನ, ಸುಲಿಗೆ ಇತ್ಯಾದಿ ಅಪರಾಧ ಪ್ರಕರಣ ಕಡಿಮೆಗೊಳಿಸಲು ಪಣ ತೊಟ್ಟಿರುವ ಕಾರ್ಕಳ ಪೊಲೀಸರು ಹಳ್ಳಿಗಳ ಕಡೆಗೆ ಹೆಜ್ಜೆ ಹಾಕುತ್ತಿದ್ದು, ಪಂಚಾಯತ್‌ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಸತತ ಜಾಗೃತಿ ಮೂಡಿಸಿ ಅಪರಾಧವನ್ನು ಹತೋಟಿಗೆ ತರುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಗರ ಹಾಗೂ ಗ್ರಾಮಾಂತರ ಠಾಣೆ ಸರಹದ್ದಿನ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಪರಾಧ ತಡೆ, ನಿಯಂತ್ರಣ ಕುರಿತು ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ನಡೆಸುತ್ತಿದ್ದಾರೆ. ಅಪರಾಧ ತಡೆಗೆ ಜನ ಜನಜಾಗೃತಿ ಗೊಳ್ಳುವುದೇ ಹೆಚ್ಚು ಪರಿಣಾಮಕಾರಿ ಎಂದು ಅರಿತಿರುವ ಪೊಲೀಸರು ಈ ನಿಟ್ಟಿನಲ್ಲಿ ಗಟ್ಟಿ ಹೆಜ್ಜೆ ಇರಿಸಿದ್ದಾರೆ. ಪ್ರತಿ ಗ್ರಾ.ಪಂ.ಗಳಿಗೆ ತೆರಳಿ ಪಂಚಾಯತ್‌ನವರ ಸಹಕಾರ ಪಡೆದು ಸಭೆಗಳನ್ನು ನಡೆಸಿ ಜನರಲ್ಲಿ ಅಪರಾಧ ತಡೆಗಟ್ಟುವ ಕುರಿತು ಮಾಹಿತಿ ನೀಡುತ್ತಿದ್ದಾರೆ.

ತಾಲೂಕಿನ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಜಾಗೃತಿ ಮೂಡಿಸಲು ಪೊಲೀಸರು ನಿರ್ಧರಿಸಿದ್ದಾರೆ, ಹೇಗಾದರೂ ಮಾಡಿ ಅಪರಾಧ ಪ್ರಮಾಣಕ್ಕೆ ಕಡಿವಾಣ ಹಾಕಲೇಬೇಕು ಎಂದು ನಿರ್ಧಾರಕ್ಕೆ ಬಂದಿರುವ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಕೂಡ ಗ್ರಾಮಸ್ಥರನ್ನು ಒಂದು ಕಡೆ ಸೇರಿಸಿ ಅಲ್ಲಿ ಕೂಡ ಅಪರಾಧ ತಡೆ ಮತ್ತು ಮುನ್ನೆಚ್ಚರಿಕೆ ವಹಿಸುವ ವಿಧಾನಗಳ ಕುರಿತು ಮಾಹಿತಿ ನೀಡುತ್ತಿದ್ದಾರೆ. ನಗರ, ಗ್ರಾಮಾಂತರ ಎರಡೂ ಠಾಣೆ ವ್ಯಾಪ್ತಿ ಯಲ್ಲೂ ಈ ಕಾರ್ಯಗಳು ಪೊಲೀಸರಿಂದ ಈಗ ನಡೆಯುತ್ತಿವೆ.

ನಾಗರಿಕರಲ್ಲಿ ಭೀತಿ ದೂರಗೊಳಿಸು ವುದು ಮತ್ತು ಕಳ್ಳತನ, ಅಪರಾಧ ಕೃತ್ಯಗಳು ನಡೆಯದಂತೆ ವಹಿಸಬೇಕಿರುವ ಮುನ್ನೆಚ್ಚರಿಕೆ ಕುರಿತು ತಿಳಿವಳಿಕೆ ಮೂಡಿಸ ಲಾಗುತ್ತಿದೆ. ಹಿರಿಯ ನಾಗರಿಕರು ಮತ್ತು ಒಂಟಿಯಾಗಿ ವಾಸ್ತವ್ಯ ಹೊಂದುವವರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದು ಗ್ರಾಮದಲ್ಲಿ ಕಾನೂನಿನ ಚೌಕಟ್ಟಿನೊಳಗೆ ಸಹಕರಿಸುವುದು ಇತ್ಯಾದಿ ಕುರಿತು ಕಾನೂನಿನ ಅರಿವು ಮೂಡಿಸುತ್ತಿದ್ದಾರೆ. ಪೊಲೀಸರು, ಬೀಟ್‌ ಪೊಲೀಸರು ಮಾತ್ರವಲ್ಲದೆ ಸ್ವತಃ ಪಿಎಸ್‌ಐಗಳೇ ಜನಜಾಗೃತಿ ಮೂಡಿಸುತ್ತಿದ್ದಾರೆ.

ಅಯ್ಯಪ್ಪನಗರ, ಹಿರ್ಗಾನ ಗ್ರಾ.ಪಂ. ಕುಕ್ಕುಂದೂರು ಗ್ರಾ.ಪಂ ನಕ್ರೆ ಮುಂತಾದ ಕಡೆ ಪೊಲೀಸರು ಜಾಗೃತಿ ನಡೆಸಿದ್ದು , ನಾಗರಿಕರಿಂದಲೂ ಉತ್ತಮ ಸ್ಪಂದನೆ ದೊರಕುತ್ತಿದೆ. ಪೊಲೀಸರು ಮತ್ತು ಸಾರ್ವಜನಿಕರು ಜನಸ್ನೇಹಿಯಾಗಿ ಅಪರಾಧ ತಡೆಗೆ ಕೆಲಸ ನಿರ್ವಹಿಸಿದಲ್ಲಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗಳು ಸರಿದಾರಿಗೆ ಬರುತ್ತದೆ. ಈ ನಿಟ್ಟಿ ನಲ್ಲಿ ಈ ವಾತಾವರಣ ಉತ್ತಮ ಬೆಳವಣಿಗೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಠಾಣೆಗಳ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣಕ್ಕೆ ಬರುವು ದಲ್ಲದೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿ ಕೊಳ್ಳುವ ಕಿಡಿಗೇಡಿಗಳಿಗೂ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗುತ್ತದೆ.
ಇತ್ತೀಚೆಗೆ ಕಾರ್ಕಳ ತಾಲೂಕಿನಲ್ಲಿ ಕಳ್ಳತನ ಸಹಿತ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದು ನಾಗರಿಕರಲ್ಲಿ ಆತಂಕ ಉಂಟು ಮಾಡಿದೆ. ಕೊರೊನೋತ್ತರ ಬಳಿಕ ನಗರ ಮತ್ತು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣ ಹೆಚ್ಚಿರುವುದು ನಾಗರಿಕರು, ಪೊಲೀಸರ ಸಹಿತ ಎಲ್ಲರಲ್ಲೂ ಆತಂಕ ಹುಟ್ಟಿಸಿದೆ. ಪೊಲೀಸರಿಗೆ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವುದು, ಪ್ರಕರಣ ಭೇದಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಪಂಚಾಯತ್‌ ಮಟ್ಟದಲ್ಲಿ ಜಾಗೃತಿ ಚುರುಕು
ರಾತ್ರಿ ಹಗಲು ಎರಡೂ ಹೊತ್ತಿನಲ್ಲಿ ಕಳ್ಳತನ ಇತ್ಯಾದಿ ಪ್ರಕರಣಗಳು ತಾಲೂಕಿನಲ್ಲಿ ಹೆಚ್ಚುತ್ತಿರುವುದನ್ನು ತಡೆಗಟ್ಟಲು ಸಾರ್ವಜನಿಕರು, ಜನಪ್ರತಿನಿಧಿಗಳ ಸಹಕಾರ ಅಗತ್ಯ. ಅದಕ್ಕೆಂದು ಪಂಚಾಯತ್‌ ಮಟ್ಟದಲ್ಲಿ ಈ ಜಾಗೃತಿಯನ್ನು ಚುರುಕುಗೊಳಿಸಿದ್ದೇವೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸುವಲ್ಲಿ ಪೊಲೀಸರು, ನಾಗರಿಕರೂ ಜತೆಯಾಗಿ ಕಾರ್ಯವೆಸಗಿದಾಗ ಅಪರಾಧ ಕೃತ್ಯವನ್ನು ಮಟ್ಟ ಹಾಕಲು ಸಾಧ್ಯ.
-ತೇಜಸ್ವಿ, ನಗರ ಠಾಣೆ ಸಬ್‌ಇನ್ಸ್‌ಪೆಕ್ಟರ್‌
-ಮಧು ಬಿ., ನಗರ ಠಾಣೆ ಸಬ್‌ಇನ್ಸ್‌ಪೆಕ್ಟರ್

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.