ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರ ಬರಬೇಡಿ :ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಎಚ್ಚರಿಕೆ


Team Udayavani, May 9, 2021, 9:38 PM IST

ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರ ಬರಬೇಡಿ :ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಎಚ್ಚರಿಕೆ

ಬೆಂಗಳೂರು: ಈ ಬಾರಿ ಲಾಕ್‌ ಡೌನ್‌ ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ಪೊಲೀಸರು ಪಾಳಿ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಬಾರದೆ ಸಹಕಾರ ನೀಡಬೇಕು ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು.

ಉದಯವಾಣಿ ಜತೆ ಮಾತನಾಡಿದ ಅವರು, ಕಳೆದ ವರ್ಷದ ಲಾಕ್‌ ಡೌನ್‌ ನಲ್ಲಿ ಸಂಪೂರ್ಣವಾಗಿ ಎಲ್ಲ ವ್ಯವಹಾರಗಳನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ಆದರೆ, ಈ ಬಾರಿ ಕೈಗಾರಿಕೆ, ವಿಮಾನ, ರೈಲುಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಕೆಲವೊಂದು ವಾಣಿಜ್ಯ ವಹಿವಾಟು ನಡೆಸಲು ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದರಿಂದ ಈ ಬಾರಿ ಲಾಕ್‌ ಡೌನ್‌ ವಿಭಿನ್ನವಾಗಿದೆ. ಆದರೂ ಈ ಬಾರಿಯ ಲಾಕ್‌ ಡೌನ್‌ ಅನ್ನು ಯಶಸ್ವಿಯಾಗಿಸುವ ಹೊಣೆ ನಮ್ಮ ಮೇಲಿದೆ ಎಂದರು.

ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಸಾರ್ವಜನಿಕರು ಓಡಾಟ ನಡೆಸಬಹುದು. ಅನಂತರ ನಗರದ ಎಲ್ಲ ರಸ್ತೆಗಳಲ್ಲಿ ಪೊಲೀಸರು ನಿಯೋಜನೆಗೊಂಡು ಬ್ಯಾರಿಕೇಡ್‌ ಗಳನ್ನು ಹಾಕಿಕೊಂಡು ತಪಾಸಣೆ ನಡೆಸಲಿದ್ದಾರೆ ಎಂದರು.

ಪಾಳಿ ಮಾದರಿಯಲ್ಲಿ ಕರ್ತವ್ಯ
ಕೆಎಸ್‌ಆರ್‌ಪಿ, ಸಿಎಆರ್‌ ಸೇರಿ ಸುಮಾರು 16 ಸಾವಿರ ಮಂದಿ ಪೊಲೀಸರನ್ನು ನಿಯೋಜಿಸಿಕೊಳ್ಳಲಾಗಿದೆ. ಬೆಂಗಳೂರು ಪ್ರವೇಶ ದ್ವಾರದಲ್ಲಿ ಚೆಕ್‌ ಪೋಸ್‌ಗಳನ್ನು ಹಾಕಿಕೊಳ್ಳಲಾಗಿದೆ. ನಗರ ಪ್ರವೇಶಿಸುವ ಪ್ರತಿಯೊಬ್ಬರು ತಪಾಸಣೆಗೆ ಒಳಗಾಗಲೇ ಬೇಕು. ಇದರೊಂದಿಗೆ ನಗರದಲ್ಲಿ ಪ್ರತಿ ಹಂತದಲ್ಲೂ ಪೊಲೀಸರು ವಾಹನಗಳ ತಪಾಸಣೆ ನಡೆಸಲಿದ್ದಾರೆ. ಬೇರೆ ಜಿಲ್ಲೆಗಳು, ರಾಜ್ಯಗಳ ಪ್ರವಾಸ ಸಂಪೂರ್ಣವಾಗಿ ರದ್ದು ಮಾಡಲಾಗಿದೆ. ಹೀಗಾಗಿ ಬೆಂಗಳೂರಿನಿಂದ ಹೊರಗಡೆ ಹೋಗುವುದು, ಒಳಗಡೆ ಬರುವ ಪ್ರಶ್ನೆಯೇ ಇಲ್ಲ. ಅದಕ್ಕೆ ಆಸ್ಪದವೂ ಇಲ್ಲ. ಒಂದು ವೇಳೆ ಅನಿವಾರ್ಯತೆ ಇದ್ದರೇ ಸೂಕ್ತ ದಾಖಲೆ ತೋರಿಸಿ ಒಳಗಡೆ ಬರಬಹುದು. ಅದು ಹೊರತು ಪಡಿಸಿ ಬೇರೆ ಯಾವುದೇ ಕಾರಣಗಳನ್ನು ನೀಡಿದರೂ ವಿನಾಯಿತಿ ಇರುವುದಿಲ್ಲ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು.

ಇದನ್ನೂ ಓದಿ :ಅಗತ್ಯ ವಸ್ತು ಖರೀದಿಗೆ ವಾಹನ ಬಳಸದೆ ಕಾಲ್ನಡಿಗೆಯಲ್ಲಿ ಬನ್ನಿ: ಕಾರವಾರ ಜಿಲ್ಲಾಧಿಕಾರಿ ಸೂಚನೆ

ಅಷ್ಟು ಮಾತ್ರವಲ್ಲ ಅನಗತ್ಯವಾಗಿ ಓಡಾಡುವವರನ್ನು ಬಂಧಿಸಲಾಗುತ್ತದೆ. ಅವರ ವಾಹನ ಜಪ್ತಿ ಮಾಡಲಾಗುತ್ತದೆ. ಆ ವಾಹನಗಳ ವಿರುದ್ಧ ಈ ಹಿಂದೆ ಯಾವುದಾದರೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಇದ್ದರೇ ಅವುಗಳನ್ನು ಈ ಸಂದರ್ಭದಲ್ಲಿಯೇ ದಂಡ ಕಟ್ಟಿ ಕೋರ್ಟ್‌ ಮೂಲಕ ಲಾಕ್‌ ಡೌನ್‌ ಅವಧಿ ಮುಗಿದ ಬಳಿಕ ಬಿಡಿಸಿಕೊಳ್ಳಬೇಕಾಗುತ್ತದೆ. ಹೀಗಾಗಿ ಅನಗತ್ಯವಾಗಿ ಯಾರು ಹೊರಗಡೆ ಬರಬೇಡಿ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.