ಅಸ್ವಸ್ಥ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಪೊಲೀಸ್ ಪೇದೆ
Team Udayavani, May 10, 2021, 7:28 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಲಾಕ್ಡೌನ್ ನೆಪದಲ್ಲಿ ಪೊಲೀಸರು ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಸಿ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂಬ ದೂರಿನ ಮಧ್ಯೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ರಕ್ಷಿಸಿ ಪೊಲೀಸ್ ಪೇದೆಯೊಬ್ಬರು ಮಾನವೀಯತೆ ಮೆರೆದಿದ್ದಾರೆ.
ಹೌದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಗೂಳೂರು ಗ್ರಾಮದಿಂದ ಬಾಗೇಪಲ್ಲಿ ಪಟ್ಟಣಕ್ಕೆ ಬಂಧಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನೊಬ್ಬ ಆಟೋದಲ್ಲಿ ಬಾಗೇಪಲ್ಲಿ ಪಟ್ಟಣಕ್ಕೆ ಆಗಮಿಸಿದ್ದರು ಪಟ್ಟಣದಲ್ಲಿ ಪೊಲೀಸ್ ನಾಕಬಂದಿ ಕಂಡು ಆಟೋ ಚಾಲಕ ದೂರದಲ್ಲಿ ನಿಲ್ಲಿಸಿ ಹೋರಟುಹೋಗಿದ್ದ ಸಕಾಲಕ್ಕೆ ಅನ್ನ ಆಹಾರ ಇಲ್ಲದೆ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಕಾನಸ್ಟೇಬಲ್ ಧನಂಜಯ ಮಹಿಳೆಯರನ್ನು ತನ್ನ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ :ಹಾಜರಿ ಪುಸ್ತಕದಲ್ಲಿ ಸಹಿ, ಕರ್ತವ್ಯಕ್ಕೆ ಗೈರು : ಹೊಳಲು ವೈದ್ಯಾಧಿಕಾರಿಯ ಕಳ್ಳಾಟಕ್ಕೆ ಆಕ್ರೋಶ
ವಾಹನಗಳ ತಪಾಸಣೆಯ ನೆಪದಲ್ಲಿ ಪೋಲಿಸರು ದೌರ್ಜನ್ಯ ಮತ್ತು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪದ ಮಧ್ಯೆ ಜಿಲ್ಲೆಯಲ್ಲಿ ಬಾಗೇಪಲ್ಲಿ ಪಟ್ಟಣದಲ್ಲಿ ಕಾನಸ್ಟೇಬಲ್ ಧನಂಜಯ ಕರ್ತವ್ಯದ ಜೊತೆಗೆ ಮಾನವೀಯತೆ ಮೆರೆದಿದ್ದಾರೆ ಅವರ ಕಾರ್ಯವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ