ಡಿಕೆಶಿ, ಸಿದ್ದರಾಮಯ್ಯ ಪೊಲೀಸ್ ಬೆಂಗಾವಲು ವಾಹನ ಅಪಘಾತ
ಮಾನವೀಯತೆ ಮೆರೆದ ಕಾಂಗ್ರೆಸ್ ನಾಯಕರು
Team Udayavani, Dec 3, 2021, 5:59 PM IST
ಚಿಕ್ಕಮಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬೆಂಗಾವಲು ಒದಗಿಸಿದ್ದ ಪೊಲೀಸ್ ವಾಹನ ಚಿಕ್ಕಮಗಳೂರಿನ ಲಿಂಗದಹಳ್ಳಿ ಸಮೀಪ ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲು ನೆರವಾಗುವುದರ ಮೂಲಕ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಮಾನವೀಯತೆ ಮೆರೆದಿದ್ದಾರೆ.
ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರರು ಚಿಕ್ಕಮಗಳೂರಿನಲ್ಲಿ ಗ್ರಾಮ ಸ್ವರಾಜ್ ಸಮಾವೇಶ ಮುಗಿಸಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರಿಗೆ ಭದ್ರತೆ ಒದಗಿಸಿದ್ದ ಚಿಕ್ಕಮಗಳೂರು ಪೊಲೀಸ್ ಬೆಂಗಾವಲು ವಾಹನ ಚಿಕ್ಕಮಗಳೂರು ಸಮೀಪದ ಲಿಂಗದಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿ ಕಾಫಿತೋಟದ ಹಳ್ಳಕ್ಕೆ ಉರುಳಿಬಿತ್ತು. ತತ್ಪರಿಣಾಮ ಪೊಲೀಸ್ ಸಿಬ್ಬಂದಿಯೊಬ್ಬರ ತಲೆಗೆ ತೀವ್ರ ಪೆಟ್ಟಾಯಿತು. ಉಳಿದವರಿಗೂ ಅಲ್ಪಸ್ವಲ್ಪ ಗಾಯಗಳಾದವು.
ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರು ಪ್ರಯಾಣವನ್ನು ಕೊಂಚಕಾಲ ಮೊಟಕುಗೊಳಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?