ಗಲಭೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಪೊಲೀಸ್ ಪಥಸಂಚಲನ; ಕಟ್ಟೆಚ್ಚರ
Team Udayavani, Apr 17, 2022, 6:05 PM IST
ಹುಬ್ಬಳ್ಳಿ: ಗಲಭೆಗೆ ಗುರಿಯಾಗಿದ್ದ ಹುಬ್ಬಳ್ಳಿಯ ವಿವಿಧ ಪ್ರದೇಶಗಳಲ್ಲಿ ಪೊಲೀಸರು ರವಿವಾರ ಸಂಜೆ ಪಥಸಂಚಲನ ನಡೆಸಿದರು.
ಸಾರ್ವಜನಿಕರಲ್ಲಿ ಅಸತ್ಮಸ್ಥೈರ್ಯ ತುಂಬಲು ಹಾಗೂ ದುಷ್ಟ ಶಕ್ತಿಗಳಿಗೆ ಭಯ ಮೂಡಿಸಲು ಪಥಸಂಚಲನ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಿಂದ ಹಿರೇಪೇಟೆ, ಬೀರಬಂದ ಓಣಿ, ಜಂಗ್ಲಿಪೇಟೆ, ಅಕ್ಕಿಪೇಟೆ, ಮಸ್ತಾನ ಸೋಪಾ, ಕಸಬಾಪೇಟೆ ರಸ್ತೆ, ಮ್ಯಾದಾರ ಓಣಿ, ನ್ಯೂ ಇಂಗ್ಲೀಷ್ ಸ್ಕೂಲ್, ದುರ್ಗದ ಬಯಲು, ಮರಾಠಿ ಗಲ್ಲಿ, ಗಣೇಶ ಪೇಟೆ ವೃತ್ತ ವರೆಗೆ ಪಥಸಂಚಲನ ನಡೆಸಿದರು.
ವಿವಾದಾತ್ಮಕ ಪೋಸ್ಟ್ ವಿಷಯವಾಗಿ ಹಳೇಹುಬ್ಬಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ಎಬ್ಬಿಸಲಾಗಿತ್ತು. ಹಲವು ಕಿಡಿಗೇಡಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಮನೆ ಮನೆಗೆ ತೆರಳಿ ತಪಾಸಣೆ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಆಧರಿಸಿ ಕಿಡಿಗೇಡಿಗಳು ಗಲಭೆ ವೇಳೆ ಬಳಸಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೆ 46 ಜನರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !