ಯುವಜನತೆಗೆ ರಾಜಕೀಯ ತರಬೇತಿ: ವಿನೂತನ ಪರಿಕಲ್ಪನೆ


Team Udayavani, Jun 30, 2023, 5:53 AM IST

politi

ಆಸಕ್ತ ಪದವೀಧರ ಯುವ ಜನತೆಗೆ ರಾಜಕೀಯ ತರಬೇತಿ ನೀಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ತರಬೇತಿ ಸಂಸ್ಥೆಯನ್ನು ಆರಂಭಿಸುವ ಪ್ರಸ್ತಾವವನ್ನು ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಮುಂದಿಟ್ಟಿದ್ದಾರೆ. ಇಂದಿನ ಯುವಪೀಳಿಗೆ ರಾಜಕೀಯದಲ್ಲಿ ಆಸಕ್ತಿ ತೋರುತ್ತಿಲ್ಲ ಮತ್ತು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸುವ ಯುವಜನತೆಗೆ ರಾಜಕೀಯದ ಒಳ-ಹೊರಗುಗಳ ಬಗೆಗೆ ಪ್ರಾಥಮಿಕ ಜ್ಞಾನ ಇರುವುದಿಲ್ಲ ಎಂಬ ಆರೋಪಗಳು ಸರ್ವೇ ಸಾಮಾನ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಸ್ಪೀಕರ್‌ ಅವರ ಈ ಪ್ರಸ್ತಾವ ನಿಜಕ್ಕೂ ಚಿಂತನೀಯ. ರಾಜಕೀಯದಲ್ಲೂ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಬೇಕೆಂಬ ಬೇಡಿಕೆ ಇತ್ತೀಚಿನ ವರ್ಷಗಳಲ್ಲಿ ತೀವ್ರ ಚರ್ಚೆಗೀಡಾಗಿರುವಂತೆಯೇ ಯುವಜನತೆಯನ್ನು ನಾಯಕರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ.

ಕಳೆದೊಂದು ದಶಕದಿಂದೀಚೆಗೆ ರಾಜ್ಯ ಮಾತ್ರವಲ್ಲದೆ ದೇಶದೆಲ್ಲೆಡೆ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಹವಾ ಒಂದಿಷ್ಟು ಬೀಸತೊಡಗಿದ್ದು ಕೊಂಚ ಆಶಾವಾದ ಮೂಡಿಸಿದೆ. ಆದರೆ ಈ ಯುವ ಪ್ರತಿನಿಧಿಗಳು ರಾಜಕೀಯದಲ್ಲಿ ಇನ್ನಷ್ಟೇ ಪಳಗಬೇಕಾಗಿದ್ದು ಅವರ ಒಟ್ಟಾರೆ ಕಾರ್ಯವೈಖರಿ ದೇಶದ ಗಮನ ಸೆಳೆದಿಲ್ಲ. ಹೀಗಾಗಿ ಶಾಸನ ಸಭೆಗಳಿಗೆ ಚುನಾಯಿತರಾಗಿ ಆಯ್ಕೆಯಾಗಿ ಬರುವ ಯುವಕರಿಗೆ ಆರಂಭದಲ್ಲೇ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ವೇಳೆ  ನೂತನ ಶಾಸಕರಿಗೆ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವಿಕೆ, ಅವರ ಕಾರ್ಯವ್ಯಾಪ್ತಿ, ಸದನದಲ್ಲಿ ಉತ್ತಮ ನಡತೆ ಮತ್ತು ವರ್ತನೆ ತೋರುವುದು ಮತ್ತಿತರ ವಿಚಾರಗಳಲ್ಲಿ ತಜ್ಞರು ಮತ್ತು ರಾಜಕೀಯ ಮುತ್ಸದ್ಧಿಗಳಿಂದ ತರಬೇತಿಯನ್ನು ನೀಡುತ್ತ ಬರಲಾಗಿದೆ. ಇದರಿಂದಾಗಿ ನೂತನ ಶಾಸಕರು ಕೂಡ ಕಲಾಪಗಳಲ್ಲಿ ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿದೆ. ಹೀಗಾಗಿ ಸ್ಪೀಕರ್‌ ಯು.ಟಿ.ಖಾದರ್‌ ಅವರು ರಾಜಕೀಯದಲ್ಲಿ ಆಸಕ್ತಿಯುಳ್ಳ ಪದವೀಧರರನ್ನು ಸಜ್ಜು ಗೊಳಿಸಲು ಮುಂದಾಗಿರುವುದು ದೂರದೃಷ್ಟಿಯ ಕ್ರಮವಾಗಿದೆ.

ಸದ್ಯ ಈ ಪ್ರಸ್ತಾವ ಪ್ರಾಥಮಿಕ ಹಂತದಲ್ಲಿದ್ದು ಆದಷ್ಟು ಶೀಘ್ರದಲ್ಲಿ ಇದನ್ನು ಅನುಷ್ಠಾನಗೊಳಿಸುವುದಾಗಿ ಸ್ಪೀಕರ್‌ ಹೇಳಿದ್ದಾರೆ. ಹಾಲಿ ಪ್ರಸ್ತಾ ವನೆಯ ಪ್ರಕಾರ ತರಬೇತಿಯ ಅವಧಿ ಒಂದು ವರ್ಷದ್ದಾಗಿರಲಿದ್ದು ಇದ ರಲ್ಲಿ ಮೊದಲ ಆರು ತಿಂಗಳುಗಳ ಕಾಲ ಪಠ್ಯ ಸಹಿತ ತರಬೇತಿ ಹಾಗೂ ಬಳಿಕದ ಆರು ತಿಂಗಳ ಕಾಲ ಪ್ರಾಯೋಗಿಕ ಅನುಭವ ಪಡೆಯಲು ಶಾಸ ಕರು, ಸಚಿವರು ಮತ್ತು ಸ್ಪೀಕರ್‌ ಅವರ ಕಚೇರಿಗಳಲ್ಲಿ ಇಂಟರ್ನ್ಶಿಪ್‌ಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಇದರ ಜತೆಯಲ್ಲಿ ಹಿರಿಯ ನಾಯಕರು ಮತ್ತು ರಾಜಕೀಯ ಮುತ್ಸದ್ಧಿಗಳು, ಐಎಎಸ್‌ ಅಧಿಕಾ ರಿಗಳನ್ನು ಸಂಸ್ಥೆಗೆ ಕರೆಸಿಕೊಂಡು ಅವರೊಂದಿಗೆ ಸಂವಾದಗಳನ್ನು ಏರ್ಪಡಿಸುವ ಚಿಂತನೆಯನ್ನು ಇದು ಒಳಗೊಂಡಿದೆ.

ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಇಂತಹ ತರಬೇತಿ ನೀಡುತ್ತಿದೆ. ಈ ಸಂಸ್ಥೆಯ ಸಹಾಯ ಪಡೆದು ರಾಜ್ಯದಲ್ಲಿ ತೆರೆಯಲಾಗುವ ರಾಜಕೀಯ ತರಬೇತಿ ಸಂಸ್ಥೆಯ ಪಠ್ಯಕ್ರಮವನ್ನು ಅಖೈರುಗೊಳಿಸಲು ನಿರ್ಧರಿಸಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರ ಈ ವಿನೂತನ ಪರಿಕಲ್ಪನೆ ಯುವಜನತೆಗೆ ರಾಜಕಾರಣದ ವರ್ಣಮಾಲೆಯನ್ನು ಕಲಿಸಿಕೊಡುವುದರ ಜತೆಯಲ್ಲಿ ಅವರ ರಾಜಕೀಯ ಪ್ರವೇಶಕ್ಕೆ ಪ್ರಥಮ ಮೆಟ್ಟಿಲಾಗಲಿದೆ. ಭವಿಷ್ಯದ ರಾಜಕಾರಣಿಗಳನ್ನು ರೂಪಿಸುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ.

 

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.