ಜೇಮ್ಸ್ ತೆರಿಗೆ ವಿನಾಯಿತಿ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ
ಎರಡು ಸಿನಿಮಾಗಳನ್ನ ಹೋಲಿಕೆ ಮಾಡುವುದು ಬೇಡ
Team Udayavani, Mar 17, 2022, 1:40 PM IST
ಬೆಂಗಳೂರು : ”ದಿ ಕಾಶ್ಮೀರ್ ಫೈಲ್ಸ್” ರೀತಿ ಪುನೀತ್ ರಾಜಕುಮಾರ್ ಅವರ ”ಜೇಮ್ಸ್” ಚಿತ್ರಕ್ಕೂ ತೆರಿಗೆ ವಿನಾಯಿತಿ ನೀಡಬೇಕೆಂಬ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರೆ ನಾಯಕರು ಆಗ್ರಹಿಸಿದ್ದಾರೆ. ಆದರೆ ಈ ಎರಡು ಚಿತ್ರದ ಹೆಸರಿನಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಜೇಮ್ಸ್ ಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಬಗ್ಗೆ ವಿಧಾನ ಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಸಿ. ಟಿ. ರವಿ, ಎರಡು ಸಿನಿಮಾಗಳಿಗೆ ತಂದು ಹಾಕುವ ಕೆಲಸ ಬೇಡ.ಕಾಶ್ಮೀರ ಪೈಲ್ ಸಿನಿಮಾ ಅದು ಸತ್ಯಾಂಶಗಳ ಮೇಲೆ ತೆಗೆದಿರುವ ಸಿನಿಮಾ.ಇದು ಉತ್ತಮ ಸಂದೇಶ ಇರುವ ಸಿನಿಮಾ. ಜೇಮ್ಸ್ ಚಿತ್ರಕ್ಕೂ ಸಹ ತೆರಿಗೆ ವಿನಾಯಿತಿ ಕೊಡಲಿ.ಆದರೆ ಎರಡು ಸಿನಿಮಾಗಳನ್ನ ಹೋಲಿಕೆ ಮಾಡುವುದು ಬೇಡ ಎಂದು ಅಭಿಪ್ರಾಯ ಪಟ್ಟರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಎಂದು ಸರಕಾರಕ್ಕೆ ಪತ್ರ ಬರೆಯುವೆ.ಪುನೀತ್ ಬಗ್ಗೆ ಬೊಮ್ಮಾಯಿ ಬಹಳ ಪ್ರೀತಿ ತೋರಿಸಿದ್ದರು. ಪದ್ಮಶ್ರೀ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತೋ ಇಲ್ವೋ ಗೊತ್ತಿಲ್ಲ .ಜೇಮ್ಸ್ ಚಿತ್ರ ಎಲ್ಲರೂ ನೋಡಿ. ನಾನು ಥಿಯೇಟರ್ ಗೆ ಹೋಗಲ್ಲ, ಹೋಗ್ಬಾರದು ಅಂತಿಲ್ಲ, ಥಿಯೇಟರ್ ಗೆ ಹೋಗುವ ಅಭ್ಯಾಸ ತಪ್ಪಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ