ಕಳಪೆ ಮಸಾಲಾ ಪದಾರ್ಥ ಮಾರಾಟ ದಂಧೆ


Team Udayavani, Nov 15, 2021, 1:26 PM IST

11poor-quality

ವಾಡಿ: ಚಿತ್ತಾಪುರ ತಾಲೂಕಿನ ವಿವಿಧೆಡೆ ಕೆಲ ಕಿರಾಣಿ ಅಂಗಡಿಗಳಲ್ಲೀಗ ನಕಲಿ ಪದಾರ್ಥಗಳ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ.

ಪಟ್ಟಣದ ಮಾರುಕಟ್ಟೆಯಲ್ಲಿಯೂ ಕಳಪೆ ಆಹಾರ ಉತ್ಪನ್ನಗಳ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಖಾರಾ, ಅರಿಶಿಣ, ಸಾಂಬಾರ ಪದಾರ್ಥಗಳು ಗುಣಮಟ್ಟ ಕಳೆದುಕೊಂಡಿವೆ. ಬಣ್ಣದಿಂದ ಗಮನ ಸೆಳೆಯುವ ಈ ಅಡುಗೆ ಪದಾರ್ಥಗಳಲ್ಲಿ ಸುಗಂಧ ಸುವಾಸನೆ ಗೌಣವಾಗಿದೆ. ಕಡಿಮೆ ದರದ ನೆಪದಲ್ಲಿ ನಕಲಿ ಸಾಬೂನು ಮತ್ತು ವಾಶಿಂಗ್‌ ಪೌಡರ್‌ ಮಾರಾಟ ಮಾಡಲಾಗುತ್ತಿದೆ.

ರೈಲ್ವೆ ಜಂಕ್ಷನ್‌ ಹೊಂದಿರುವ ವಾಡಿಯ ಮಾರುಕಟ್ಟೆಗೆ ಹೈದರಾಬಾದ ಮೂಲದ ವಿವಿಧ ಕಂಪನಿಗಳು ಐದಾರು ರೀತಿಯ ಬೆಳ್ಳುಳ್ಳಿ ಶುಂಠಿ ಪೇಸ್ಟ್‌ ಪದಾರ್ಥವನ್ನು ವಿವಿಧ ಹೆಸರಿನಡಿ ಪೂರೈಸುತ್ತಿವೆ. ಐದು ಕೆಜಿ ತೂಕದ ಈ ಬೆಳ್ಳುಳ್ಳಿ ಶುಂಠಿ ಪೇಸ್ಟ್‌ ಕೇವಲ ವಾಸನೆ ಹರಡುತ್ತಿದೆ. ಗೋಧಿ ಹಿಟ್ಟಿನ ಕಣಕದಂತಿರುವ ಇದು ಸಂಪೂರ್ಣ ಕಳಪೆಯಾಗಿದೆ. ಅಡುಗೆಯಲ್ಲಿ ಬಳಸಿದರೆ ಇಡೀ ಅಡುಗೆ ಹಾಳಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರವನ್ನು ಕಾಂಗ್ರೆಸ್ ನವರು ಕೇವಲ ರಾಜಕೀಯಕ್ಕೆ ಬಳಸುತ್ತಿದ್ದಾರೆ: ಸಿಎಂ

ಅವಧಿ ಮುಗಿದ ಪದಾರ್ಥಗಳ ಪ್ಯಾಕೇಟ್‌ ಗಳ ಮೇಲೆ ದಿನಾಂಕ ಮತ್ತು ಬೆಲೆ ಗುರುತಿಸುವ ನಕಲಿ ಲೇಬಲ್‌ ಅಂಟಿಸಿ ಗ್ರಾಹಕರಿಗೆ ಮೋಸ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಆಹಾರ ಇಲಾಖೆ ಅಧಿಕಾರಿಗಳು ಇಂಥ ವ್ಯವಹಾರಕ್ಕೆ ಕಡಿವಾಣ ಹಾಕಿ ನಕಲಿ ಕಂಪನಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬುದು ಜನರ ಆಗ್ರಹವಾಗಿದೆ.

ಗುಣಮಟ್ಟ ನೋಡಿ ಖರೀದಿಸಿ

ಅನಧಿಕೃತ ಕಂಪನಿಗಳಿಂದ ಇಂಥ ನಕಲಿ ಕಲಬೆರಕೆ ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿರುತ್ತವೆ. ಗ್ರಾಹಕರು ಪದಾರ್ಥಗಳ ಗುಣಮಟ್ಟ ಮತ್ತು ಅಧಿಕೃತ ಕಂಪನಿಗಳ ಉತ್ಪನ್ನ ಗುರುತಿಸಿ ಖರೀದಿಸಬೇಕು. ವಿಶ್ವಾಸಾರ್ಹತೆ ಇಲ್ಲದ ಯಾವುದೇ ಆಹಾರ ಪದಾರ್ಥ ಖರೀದಿಸಬಾರದು. ಸಂಶಯ ಬಂದಲ್ಲಿ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳು ಅಥವಾ ಆಹಾರ ಸುರಕ್ಷತಾ ಇಲಾಖೆಗೆ ದೂರು ನೀಡಬೇಕು. ಇಂಥಹ ಪ್ರಕರಣಗಳು ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಚಿತ್ತಾಪುರದ ಆಹಾರ ಮತ್ತು ಸುರಕ್ಷತಾಧಿಕಾರಿ ಪರಮೇಶ್ವರ ಮಠಪತಿ ತಿಳಿಸಿದ್ದಾರೆ.

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.