
BKS Varma: ಖ್ಯಾತ ಚಿತ್ರಕಲಾವಿದ ಬಿಕೆಎಸ್ ವರ್ಮಾ ಹೃದಯಾಘಾತದಿಂದ ನಿಧನ
Team Udayavani, Feb 6, 2023, 11:16 AM IST

ಬೆಂಗಳೂರು: ಖ್ಯಾತ ಚಿತ್ರಕಲಾವಿದ ಬಿ.ಕೆ.ಎಸ್.ವರ್ಮಾ(74ವರ್ಷ) ಅವರು ಸೋಮವಾರ (ಫೆ.06) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇವರ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದ್ದವು. ಬುಕ್ಕಸಾಗರ ಕೃಷ್ಣಯ್ಯ ಶ್ರೀನಿವಾಸ್ (ಬಿಕೆಎಸ್) ಅವರು ಒಮ್ಮೆ ಮೈಸೂರು ಅರಮನೆಯಲ್ಲಿ ರವಿವರ್ಮ ಅವರ ಪೇಂಟಿಂಗ್ಸ್ ಗಳನ್ನು ವೀಕ್ಷಿಸುತ್ತಲೇ ಸ್ಫೂರ್ತಿಗೊಂಡಿದ್ದರು. ಹೀಗೆ ತಮ್ಮ ಹೆಸರಿನ ಜೊತೆ ವರ್ಮಾ ಅವರ ಹೆಸರನ್ನು ಸೇರಿಸಿಕೊಂಡಿದ್ದರು.
ಆ ದಿನಗಳಲ್ಲಿ ಬ್ಲೇಡ್ ನಿಂದ, ಉಗುರಿನಿಂದ, ಎಂಬಾಸಿಂಗ್, ಥ್ರೆಡ್ ಪೇಂಟಿಂಗ್ ಮಾಡಿ ಹಣಗಳಿಸುತ್ತಿದ್ದರು. ತಮ್ಮ ಎರಡೂ ಕೈಗಳ ಬೆರಳುಗಳನ್ನು ಉಪಯೋಗಿಸಿ ಸುಂದರವಾದ ಚಿತ್ರಗಳನ್ನು ರಚಿಸುವ ಪರಿ ಅನನ್ಯ. ಎರಡೇ ನಿಮಿಷಗಳಲ್ಲಿ ಸುಂದರವಾದ ಚಿತ್ರ ಬಿಡಿಸುವ ಕಲಾವಿದರಲ್ಲಿ ಮುಖ್ಯರಾಗಿದ್ದಾರೆ.
ಬಿಕೆಎಸ್ ಕಲೆಯನ್ನು ಮೇರುನಟ ಡಾ.ರಾಜ್ ಕುಮಾರ್, ರಜನಿಕಾಂತ್, ಅಂತಾರಾಷ್ಟ್ರೀಯ ಸುಪ್ರಸಿದ್ಧ ಕಲಾವಿದ ಡಾ.ರೋರಿಕ್ ಮತ್ತು ದೇವಿಕಾರಾಣಿ ದಂಪತಿ ಮೆಚ್ಚಿದ್ದರು.
ಡಾ.ಜಯಲಕ್ಷ್ಮಮ್ಮ ಮತ್ತು ಸಂಗೀತ ಶಾಸ್ತ್ರಜ್ಞ ಪಂ.ಕೃಷ್ಣಚಾರ್ ದಂಪತಿ ಪುತ್ರ ಬಿಕೆಎಸ್. ಕೇವಲ 2ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದ ಇವರು ಚಿಕ್ಕಂದಿನಲ್ಲೇ ಹಟವಾದಿಯಾಗಿದ್ದರು. ನಂತರ ಬಿಕೆಎಸ್ ಎ.ಎನ್.ಸುಬ್ಬರಾವ್ ಕಲಾಮಂದಿರದಲ್ಲಿ ಚಿತ್ರಕಲಾಭ್ಯಾಸ ಮಾಡಿದ್ದರು.
ಬಿಕೆಎಸ್ ಗೆ ಬೆಂಗಳೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಲಲಿತಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ, ಅಮೆರಿಕ, ಸಿಂಗಪುರ, ಕುವೈಟ್ ಸೇರಿದಂತೆ ಹಲವು ದೇಶಗಳಲ್ಲಿ ತಮ್ಮ ಚಿತ್ರಕಲೆಯನ್ನು ಪ್ರದರ್ಶಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ, ತನಿಖೆ ಮಾಡಲಿ:ಬಿ.ವೈ.ವಿಜಯೇಂದ್ರ

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
