ಕಾಂಗ್ರೆಸ್ ಅಂದರೆ ಏನೆಂಬುದು ಕುಮಾರಸ್ವಾಮಿ ಅವರಿಗೆ ಈಗ ಜ್ಞಾನೋದಯವಾದಂತಿದೆ: ಪ್ರಹ್ಲಾದ್ ಜೋಶಿ
Team Udayavani, Dec 6, 2020, 6:05 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಡವಾಗಿ ಜ್ಞಾನೋದಯವಾಗಿದೆ, ಕಾಂಗ್ರೆಸ್ ಮನೋಭಾವವೇ ಅಂತಹದ್ದು, ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದ ಆಸೆಯಿಂದ ಜೆಡಿಎಸ್ ಕಾಂಗ್ರೆಸ್ ಜತೆ ಸೇರಿತ್ತು, ಆದರೆ ಕಾಂಗ್ರೆಸ್ ಎಂದಿಗೂ ಮಿತ್ರಪಕ್ಷಗಳ ಒಳಿತನ್ನು ಬಯಸಿಲ್ಲ. ಇದು ತಿಳಿದ ವಿಷಯವಾದರೂ ಕುಮಾರಸ್ವಾಮಿ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ಮುಖ್ಯಮಂತ್ರಿ ಆಗಿದ್ದರು. ಆದರೆ ಕಾಂಗ್ರೆಸ್ ಎಂದರೆ ಏನು ಎಂಬುದು ಇದೀಗ ತಿಳಿದಂತಿದೆ ಸಚಿವರು ಹೇಳಿದ್ದಾರೆ.
ವಿಧಾನಪರಿಷತ್ತುನಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಪರಿಷತ್ತಿಗೆ ಸೀಮಿತವಾಗಿ ಇರಲಿದೆ ಎಂದಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಕುರಿತಾಗಿ ಮಾತನಾಡಿದ ಸಚಿವರು ಕೃಷಿ, ಕೃಷಿಮಾರುಕಟ್ಟೆಗೆ ಸಂಬಂಧಿಸಿದ ಮೂರು ಕಾಯ್ದೆ ವಿಚಾರದಲ್ಲಿ ರೈತರೊಂದಿಗೆ ಚರ್ಚಿಸಲು ಕೇಂದ್ರ ಸರಕಾರ ಮುಕ್ತ ಮನಸ್ಸು ಹೊಂದಿದೆ. ಉಂಟಾಗಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಯತ್ನ ಮಾಡುತ್ತಿದೆ ಎಂದರು.
ಇದನ್ನೂ ಓದಿ:ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ; 16 ಮಂದಿಗೆ ಗಾಯ