ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ : ಮುತಾಲಿಕ್
Team Udayavani, Oct 20, 2021, 1:32 PM IST
ಶಿವಮೊಗ್ಗ: ‘ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ. ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ.
ಕುವೆಂಪು ರಂಗಮಂದಿರದಲ್ಲಿ ನಡೆದ ‘ವಿಧ್ವತ್ ಭಾರತ’ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್,’ನಮಗೆ ಬಲ ತುಂಬಿ, ನಿಮ್ಮ ದೇವಸ್ಥಾನ ಉಳಿಸುತ್ತೆವೆ.ನಮಗೆ ಬಲ ತುಂಬಿದರೆ, ನಿಮ್ಮ ಅಕ್ಕ-ತಂಗಿಯರನ್ನು ಉಳಿಸುತ್ತೆವೆ. ನಮಗೆ ಬಲ ತುಂಬಿ, ನಿಮ್ಮ ಹಸುವಿನ ಒಂದೇ ಒಂದು ಹನಿ ರಕ್ತ ಕೆಳಕ್ಕೆ ಬೀಳಲು ಬಿಡುವುದಿಲ್ಲ.ರಾಜಕಾರಣಿಗಳಿಗೆ ಬಲ ತುಂಬಬೇಡಿ. ಅವರಷ್ಟು ನಿರ್ಲಜ್ಜ, ನೀಚರು ಯಾರು ಇಲ್ಲ’ ಎಂದು ಕಿಡಿ ಕಾರಿದರು.
‘ಹಿಂದುತ್ವದ ಮುಖವಾಡ ಹೊತ್ತ ರಾಜಕಾರಣಿಗಳಿಗೆ ಧಿಕ್ಕಾರವಿರಲಿ .ರಾಜಕಾರಣಿಗಳು ಯಾವುದೇ ಪಕ್ಷದವರಾಗಿರಲಿ ಅವರಿಗೆ ಧಿಕ್ಕಾರವಿರಲಿ.ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ? ಹಿಂದುತ್ವದ ಮುಖವಾಡ ಹಾಕಿಕೊಂಡು ದೇಶದಲ್ಲಾಗುತ್ತಿರುವ ಅನಾಹುತಗಳಿಗೆ ಏನು ಹೇಳುತ್ತೀರಿ’ ಎಂದು ಪ್ರಶ್ನಿಸಿದರು.
‘ದೇವಸ್ಥಾನ ಒಡೆಯುತ್ತೀರಿ , ಸಾರ್ವಜನಿಕ ಗಣೇಶೋತ್ಸವ ಬ್ಯಾನ್ ಮಾಡುತ್ತೀರಿ, ದುರ್ಗಾ ಮಾತೆಯ ವಿಗ್ರಹ ಇಷ್ಟೇ ಇರಬೇಕೆಂದು ಹೇಳುತ್ತೀರಿ. ಸುಪ್ರೀಂ ಕೋರ್ಟ್ ನ ಆರ್ಡರ್ ತೋರಿಸಿ, ದೇವಾಲಯ ಒಡೆಯುತ್ತಿರಿ , ಮಸೀದಿಯ ಮೈಕ್ ಮತ್ತು ಮಸೀದಿ ತೆರವಿಗೂ ಸುಪ್ರೀಂ ಕೋರ್ಟ್ ಆರ್ಡರ್ ಇದೆ.ಅದನ್ಯಾಕೆ ತೋರಿಸುವುದಿಲ್ಲಾ’ ಎಂದು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ