ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? : ಪ್ರತಾಪ್ ಸಿಂಹ
Team Udayavani, Sep 27, 2020, 1:39 PM IST
ಮೈಸೂರು : ರೈತ ಪರ ಕಾಯ್ದೆ ಜಾರಿ ಮಾಡಿದ್ರೆ ರೈತರಿಗೆ ಆಗುವ ಅನುಕೂಲದ ಬಗ್ಗೆ ನಾವು ಯೋಚನೆ ಮಾಡ್ತಿವಿ. ಬಂದ್ ಮಾಡುವವರು ಬಂದ್ ನ ಲಾಭದ ಬಗ್ಗೆ ಯೋಚನೆ ಮಾಡುತ್ತಾರೆ ಹಾಗಾಗಿ ದಳ್ಳಾಳಿ ವ್ಯವಸ್ಥೆಯಿಂದ ರೈತರನ್ನ ಮುಕ್ತ ಮಾಡುವುದು ತಪ್ಪಾ? ರೈತನಿಗೆ ಮತ್ತು ಗ್ರಾಹಕನಿಗೆ ಲಾಭವಿಲ್ಲದ ದಳ್ಳಾಳಿಗೆ ಲಾಭವಿರುವ ಕಾಯ್ದೆ ತಿದ್ದುಪಡಿ ಮಾಡಿದ್ದು ತಪ್ಪಾ? ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ರಾಜ್ಯಾದ್ಯಂತ ಸೋಮವಾರ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮಾತನಾಡಿದ ಸಂಸದ ಎಪಿಎಂಸಿ ಚುನಾವಣೆಗೆ ಲಕ್ಷಾಂತರ ಖರ್ಚು ಮಾಡಿ ಏಕೆ ನಡೆಸುತ್ತಾರೆ. ಲಾಭವಿಲ್ಲದೆ ಈ ರೀತಿ ಚುನಾವಣೆ ನಡೆಸಲು ಸಾಧ್ಯವೇ ? ರೈತರಿಂದಲೇ ಸೆಸ್ ಸುಲೀಗೆ ಮಾಡಿ ಲಾಭ ಮಾಡುತ್ತಿರುವವರು ದಳ್ಳಾಳಿಗಳು ಎಂದು ಹೇಳಿದರು.
ಸೂಪರ್ ಮಾರ್ಕೆಟ್ ಒಳಗೆ ಬಿಟ್ಟುಕೊಂಡಿದ್ದು ಯಾರು. ವಿರೋಧ ಮಾಡುವುದಿದ್ದರೇ ಸೂಪರ್ ಮಾರ್ಕೆಟ್ಗಳನ್ನೆ ವಿರೋಧ ಮಾಡಬೇಕಿತ್ತು.
ಇದನ್ನೂ ಓದಿ:ಕೆಲಸ ಕೊಡಿಸುವ ನೆಪ: ನಿಲ್ದಾಣದಲ್ಲೇ ಇಬ್ಬರು ರೈಲ್ವೆ ಅಧಿಕಾರಿಗಳಿಂದ ಯುವತಿಯ ಅತ್ಯಾಚಾರ
ಈ ಬಂದ್ ನಲ್ಲಿ ರೈತರು ಭಾಗಿಯಾಗ್ತಿಲ್ಲ, ಆದ್ರೆ ರೈತರ ಹೆಸರಿನ ಸಂಘಟನೆಗಳು ಭಾಗಿಯಾಗ್ತಿವೆ. ಈ ಬಂದ್ನಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಕರ್ನಾಟಕ ಬಂದ್ ನಡೆಸುವ ಸಂಘಟನೆಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ.
ಸಂಸದ ತೇಜಸ್ವಿಸೂರ್ಯ ಬಿಜೆಪಿ ರಾಷ್ಟ್ರಿಯ ಯುವಮೋರ್ಚ ಅಧ್ಯಕ್ಷರಾಗಿ ಆಯ್ಕೆಯಾದ ವಿಚಾರಾದ ಬಗ್ಗೆ ಮಾತನಾಡಿದ ಸಂಸದ ಇದು ಕರ್ನಾಟಕ್ಕ ಸಿಕ್ಕ ಅತಿದೊಡ್ಡ ಮನ್ನಣೆಯಾಗಿದೆ. ಬಿಜೆಪಿ ಕರ್ನಾಟಕದ ವಿಚಾರದಲ್ಲಿ ಹೆಚ್ಚು ಪ್ರೀತಿ ಹೊಂದಿದೆ ಅದಕ್ಕಾಗಿ ರಾಷ್ಟ್ರೀಯ ಸಂಘಟನೆಯಲ್ಲಿ ಮೂವರಿಗೆ ಅವಕಾಶ ಸಿಕ್ಕಿದೆ. ಇದು ಕರ್ನಾಟಕದಲ್ಲಿ ಬಿಜೆಪಿ ಶಕ್ತಿಯನ್ನ ಬಿಂಬಿಸುತ್ತದೆ ಎಂದ ಸಂಸದ ಸಿ.ಟಿ.ರವಿ ಹಾಗೂ ರಾಜೀವ್ ಚಂದ್ರಶೇಖರ ಹಾಗೂ ತೇಜಸ್ವಿಸೂರ್ಯ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು