ಪ್ರವೀಣ್ ನೆಟ್ಟಾರು ಕೇಸ್ : ಸುಳ್ಯ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಿದ ಎನ್‌ಐಎ


Team Udayavani, Mar 27, 2023, 2:48 PM IST

NIA (2)

ಮಂಗಳೂರು : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಸುಳ್ಯ ಪೇಟೆಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಚೇರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ವಶಪಡಿಸಿಕೊಂಡಿದೆ.

ಸುಳ್ಯದಲ್ಲಿರುವ ಪಿಎಫ್‌ಐ ಕಚೇರಿಯನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಮತ್ತು ಗಾಂಧಿನಗರದ ಆಲೆಟ್ಟಿ ರಸ್ತೆಯಲ್ಲಿರುವ ತಾಹಿರಾ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿದೆ ಎಂದು ಮೂಲಗಳು ಹೇಳಿವೆ.

ವಶಪಡಿಸಿಕೊಂಡ ಆಸ್ತಿಯ ಪ್ರತಿಯನ್ನು ಮಾಲೀಕರು, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲಾಗಿದೆ. ಆಸ್ತಿಯನ್ನು ಗುತ್ತಿಗೆ ಅಥವಾ ಬಾಡಿಗೆಗೆ ನೀಡಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಯಾವುದೇ ಆಸ್ತಿಯನ್ನು ಕಚೇರಿಯಿಂದ ಸ್ಥಳಾಂತರಿಸುವುದು ಅಥವಾ ನವೀಕರಣ ಕಾರ್ಯವನ್ನು ಕೈಗೊಳ್ಳದಂತೆ ನಿರ್ದೇಶನಗಳನ್ನು ನೀಡಲಾಗಿದೆ.

ಕಚೇರಿಯಲ್ಲೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಮೂಲಗಳು ವಿವರಿಸಿವೆ. ತಮ್ಮ ಮೂರನೇ ಪ್ರಯತ್ನದಲ್ಲಿ ದುಷ್ಕರ್ಮಿಗಳು ಪ್ರವೀಣ್ ಅವರನ್ನು ಹತ್ಯೆಗೈದಿದ್ದರು. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ 20 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಚಾರ್ಜ್ ಶೀಟ್‌ನಲ್ಲಿ 1,500 ಪುಟಗಳು ಮತ್ತು 240 ಸಾಕ್ಷಿಗಳ ಹೇಳಿಕೆಗಳಿವೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಮಿತ್ತೂರು ಸ್ವಾತಂತ್ರ್ಯ ಸಮುದಾಯ ಭವನಕ್ಕೆ ಎನ್‌ಐಎ ಮೊಹರು ಹಾಕಿತ್ತು.

ಸುಳ್ಯ ಸಮೀಪದ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ರಾಜ್ಯದಲ್ಲಿ ಹಿಜಾಬ್ ಮತ್ತು ಹಲಾಲ್ ಬಿಕ್ಕಟ್ಟಿನ ಉತ್ತುಂಗದಲ್ಲಿದ್ದ ವೇಳೆ ಪ್ರವೀಣ್ ಅವರನ್ನು ಕಡಿದು ಕೊಲ್ಲಲಾಗಿತ್ತು.

ಹತ್ಯೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಟಿಕೆಟ್ ಘೋಷಿಸಿದ್ದು, ಈ ಬೆಳವಣಿಗೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಶಾಫಿ ಬೆಳ್ಳಾರೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದು ಆತನನ್ನು ಎನ್‌ಐಎ ಬಂಧಿಸಿ ಕಸ್ಟಡಿಯಲ್ಲಿಟ್ಟಿದೆ.

ಟಾಪ್ ನ್ಯೂಸ್

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

8-ullala

Ullala: ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಜರಂಗದಳ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

7–ullala

Hit and Run ಪ್ರಕರಣ; ಬೈಕ್ ಸವಾರ ಗಂಭೀರ

2019ರಂತೆ ಈ ಬಾರಿಯೂ ಮುಂಗಾರು ವಿಳಂಬ

2019ರಂತೆ ಈ ಬಾರಿಯೂ ಮುಂಗಾರು ವಿಳಂಬ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

WI vs UAE ಏಕದಿನ: ಕಿಂಗ್‌ ಶತಕ: ಯುಎಇ ವಿರುದ್ಧ ಗೆದ್ದ ವಿಂಡೀಸ್‌

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ