ಪ್ರಿಡೇಟರ್‌ ಡ್ರೋನ್‌ ಖರೀದಿಗೆ ಅಸ್ತು: ರಕ್ಷಣ ಪಡೆಗಳಿಗೆ ಮತ್ತಷ್ಟು ಬಲ


Team Udayavani, Jun 17, 2023, 5:32 AM IST

drones

ಅಮೆರಿಕದಿಂದ ಎಂಕ್ಯೂ-9ಬಿ ಪ್ರಿಡೇಟರ್‌ ಡ್ರೋನ್‌ (ಸಶಸ್ತ್ರ ಮಾನವ ರಹಿತ ವೈಮಾನಿಕ ವಾಹನ)ಗಳನ್ನು ಖರೀದಿಸುವ ರಕ್ಷಣ ಇಲಾಖೆಯ ಪ್ರಸ್ತಾವಕ್ಕೆ ರಕ್ಷಣ ಖರೀದಿ ಮಂಡಳಿ (ಡಿಎಸಿ) ಸಮ್ಮತಿ ಸೂಚಿಸಿದೆ. ಭಾರತದ ಈ ಪ್ರಸ್ತಾವನೆಗೆ ಅಮೆರಿಕ ಕಾಂಗ್ರೆಸ್‌ ತನ್ನ ಒಪ್ಪಿಗೆಯನ್ನು ಸೂಚಿ ಸಿದ್ದೇ ಆದಲ್ಲಿ ಭಾರತದ ರಕ್ಷಣ ಪಡೆಗಳಿಗೆ 30 ಪ್ರಿಡೇಟರ್‌ ಡ್ರೋನ್‌ಗಳು ಲಭ್ಯವಾಗಲಿವೆ. ಡಿಎಸಿಯ ಈ ನಿರ್ಧಾರ ಅತ್ಯಂತ ಮಹತ್ವದ್ದಾಗಿದ್ದು, ಭಾರತದ ರಕ್ಷಣ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

ಉದ್ದೇಶಿತ ಯೋಜನೆಯಂತೆ ರಕ್ಷಣ ಇಲಾಖೆಯು ಅಮೆರಿಕದ ಜನರಲ್‌ ಅಟಾಮಿಕ್ಸ್‌ ಏರೋನಾಟಿಕಲ್‌ ಸಿಸ್ಟಮ್ಸ್‌ ಇಂಕ್‌(ಜಿಎ-ಎಎಸ್‌ಐ)ನಿಂದ 30 ಎಂಕ್ಯೂ-9ಬಿ ಶಸ್ತ್ರಸಜ್ಜಿತ ಪ್ರಿಡೇಟರ್‌ ಡ್ರೋನ್‌ಗಳನ್ನು ಸುಮಾರು 3 ಬಿಲಿಯನ್‌ ಅಮೆರಿಕನ್‌ ಡಾಲರ್‌ ವೆಚ್ಚದಲ್ಲಿ ಖರೀದಿಸಲಿದೆ. ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು ಇದಕ್ಕೂ ಮುನ್ನವೇ ಡಿಎಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. 12 ಪ್ರಿಡೇಟರ್‌ ಡ್ರೋನ್‌ಗಳನ್ನು ನೌಕಾ ಪಡೆಗೆ ನೀಡಲಾದರೆ ತಲಾ 9 ಡ್ರೋನ್‌ಗಳನ್ನು ಭೂಸೇನೆ ಮತ್ತು ವಾಯುಸೇನೆಗೆ ನೀಡಲು ಇಲಾಖೆ ಚಿಂತನೆ ನಡೆಸಿದೆ. ಹಿಂದೂ ಮಹಾಸಾಗರದಾಳದಲ್ಲಿ ಮತ್ತು ಭಾರತ-ಚೀನ ನಡುವಣ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಕಣ್ಗಾವಲನ್ನು ಹೆಚ್ಚಿಸಲು ಇವುಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಸದ್ಯ ಭಾರತೀಯ ನೌಕಾಪಡೆಯು ಎರಡು ಎಂಕ್ಯೂ-9ಎ ಶಸ್ತ್ರಾಸ್ತ್ರ ರಹಿತ ಡ್ರೋನ್‌ಗಳನ್ನು ಹಿಂದೂ ಮಹಾ ಸಾಗರ ಪ್ರದೇಶದಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇಡಲು ಬಳಸುತ್ತಿದೆ.

ಇವೆರಡೂ ಡ್ರೋನ್‌ಗಳನ್ನು 3 ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಜನರಲ್‌ ಅಟಾಮಿಕ್ಸ್‌ನಿಂದ ಬಾಡಿಗೆ ಪಡೆಯಲಾಗಿದೆ. ಇವುಗಳನ್ನು ಇತ್ತೀಚೆಗೆ ಎಲ್‌ಎಸಿಯಲ್ಲಿ ಕಣ್ಗಾವಲಿಗೆ ಬಳಸಿ ಕೊಳ್ಳಲಾಗಿತ್ತು. ಇದೀಗ ಸುಧಾರಿತ ತಂತ್ರಜ್ಞಾನ ಮತ್ತು ಶಸ್ತ್ರಾಸ್ತ್ರ ಹೊರಬಲ್ಲ ಡ್ರೋನ್‌ಗಳನ್ನು ಸೇನಾಪಡೆಗಳಿಗೆ ಒದಗಿಸುವ ಮೂಲಕ ಕಣ್ಗಾವಲನ್ನು ಮತ್ತಷ್ಟು ಬಲಪಡಿಸಲು ಸರಕಾರ ಮುಂದಾಗಿದೆ.

ಪ್ರಿಡೇಟರ್‌ ಡ್ರೋನ್‌ಗಳು ಕ್ಷಿಪಣಿಗಳು, ಸ್ಮಾರ್ಟ್‌ ಬಾಂಬ್‌ಗಳನ್ನು ಹೊತ್ತೂಯ್ಯುವುದಲ್ಲದೆ ನಿರ್ದಿಷ್ಟ ಗುರಿಯ ಮೇಲೆ ಅತ್ಯಂತ ನಿಖರ ದಾಳಿ ನಡೆಸುವ ಸಾಮರ್ಥ್ಯ ಹೊಂದಿವೆ. ಯಾವುದೇ ಹವಾಮಾನ ಪರಿಸ್ಥಿತಿಯಲ್ಲೂ ಸಮುದ್ರದಲ್ಲಿ 5,500 ನಾಟಿಕಲ್‌ ಮೈಲುಗಳ ವ್ಯಾಪ್ತಿವರೆಗೆ 35 ಗಂಟೆಗಳಿಗೂ ಅಧಿಕ ಕಾಲ ಹಾರಾಡುವ ಶಕ್ತಿ ಹೊಂದಿರಲಿವೆ. ಶತ್ರು ರಾಷ್ಟ್ರಗಳ ವಿರುದ್ಧದ ಕಾರ್ಯಾಚರಣೆ, ಕಡಲ್ಗಳ್ಳರ ಪತ್ತೆ, ಮಾದಕ ವಸ್ತು ದಂಧೆಕೋರರ ವಿರುದ್ಧ ನಿಗಾ ಸಹಿತ ದೇಶ ವಿರೋಧಿ ಕೃತ್ಯ ಎಸಗುವವರ ಮೇಲೆ ಹದ್ದುಗಣ್ಣು ಇರಿಸಲು ಮತ್ತು ಅಂಥವರನ್ನು ಸದೆಬಡಿಯಲು ಸೇನಾಪಡೆಗಳಿಗೆ ಸಹಾಯಕವಾಗಲಿದೆ.

ಗಡಿ ಭಾಗಗಳಲ್ಲಿ ಸೇನಾಪಡೆಗಳ ಕಣ್ಗಾವಲು ವ್ಯವಸ್ಥೆ ಇನ್ನಷ್ಟು ಶಕ್ತಿಯುತವಾಗಲಿದೆ. ಗಡಿಯಲ್ಲಿ ಪದೇ ಪದೆ ತಗಾದೆ ತೆಗೆಯುವ ಚೀನ ಮತ್ತು ಪಾಕಿಸ್ಥಾನ ಸೇನೆಯ ರಹಸ್ಯ ಕಾರ್ಯಾಚರಣೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಅವನ್ನು ವಿಫ‌ಲಗೊಳಿಸಲು ಸೇನಾಪಡೆಗಳಿಗೆ ಅನುಕೂಲವಾಗಲಿದೆ. ಚೀನ ಸೇನೆ ಎಲ್ಲ ಅಂತಾರಾಷ್ಟ್ರೀಯ ಕಾನೂನು, ಭಾರತದೊಂದಿಗಿನ ದ್ವಿಪಕ್ಷೀಯ ಒಪ್ಪಂದ ನಿಯಮಾವಳಿಗಳನ್ನು ಗಾಳಿಗೆ ತೂರಿ ಭಾರತದ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ನಡುವೆಯೇ ಡಿಎಸಿ, ರಕ್ಷಣ ಇಲಾಖೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿರುವುದು ದೇಶದ ರಕ್ಷಣ ಕಾರ್ಯತಂತ್ರದ ಒಂದು ಭಾಗ ಮತ್ತು ಪಾಕಿಸ್ಥಾನ ಮತ್ತು ಚೀನಕ್ಕೆ ನೀಡಲಾಗಿರುವ ಪರೋಕ್ಷ ಎಚ್ಚರಿಕೆ ಎಂದೇ ವಿಶ್ಲೇಷಿಸಲಾಗಿದೆ.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.