ಪ್ರವಾಸಿ ಆಕರ್ಷಣೆ, ಉದ್ಯೋಗ ಸೃಷ್ಟಿ, ಅಭಿವೃದ್ಧಿಗಳಿಗೆ ಆದ್ಯತೆ: ಡಿಸಿ
Team Udayavani, Apr 3, 2021, 4:15 AM IST
ಪಡುಬಿದ್ರಿ: ಕೇಂದ್ರ ಸರಕಾರ ಜಿಲ್ಲಾಡಳಿತಕ್ಕೆ ಎ. 1ರಿಂದ ಹಸ್ತಾಂತರಿಸಿರುವ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ರಾಜ್ಯ ಸರಕಾರದ ಅನುದಾನದೊಂದಿಗೆ ತೇಲುವ ರೆಸ್ಟೋರೆಂಟ್ ಪ್ರಾರಂಭ, ಈಗಿನ 49 ಮಂದಿ ಸಿಬಂದಿ ವರ್ಗವನ್ನು ಉಳಿಸಿಕೊಂಡು ಮುಂದಿನ ಎರಡು ವರ್ಷಗಳಲ್ಲಿ 100 ಮಂದಿಗೆ ಉದ್ಯೋಗ ಸೃಷ್ಟಿ ಯೋಜನೆ, ಹೆಚ್ಚಿನ ಪ್ರವಾಸೀ ಆಕರ್ಷಣೆ ಹಾಗೂ ತೂಗು ಸೇತುವೆ ನಿರ್ಮಾಣದ ಮೂಲಕ ಅಭಿವೃದ್ಧಿಗಳಿಗೆ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹೇಳಿದರು.
ಅವರು ಎ. 2ರಂದು ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ಫುಡ್ ಕೋರ್ಟ್, ಪ್ರವಾಸಿ ಆಕರ್ಷಣೆಯ ಕಯಾಕಿಂಗ್, ಬೋಟಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಿದರು. ಕಾಮಿನಿ ಹೊಳೆಯಲ್ಲಿ ಕಯಾಕಿಂಗ್ ವಿಶಿಷ್ಟ ಅನುಭವವನ್ನೂ ಜಿಲ್ಲಾಧಿಕಾರಿ ಪಡೆದರು.
ಜಿಲ್ಲಾಧಿಕಾರಿಗಳೊಂದಿಗೆ ಪ್ರವಾ ಸೋದ್ಯಮ ಇಲಾಖಾ ಉಪ ನಿರ್ದೇಶಕ ಸೋಮಶೇಖರ್, ಬ್ಲೂ ಫ್ಲ್ಯಾಗ್ ಬೀಚ್ ನೋಡಲ್ ಅಧಿಕಾರಿ ಚಂದ್ರಶೇಖರ್ ನಾಯಕ್, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಗಣೇಶ್, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ| ಹರೀಶ್, ಜಿ. ಪಂ. ಸದಸ್ಯ ಶಶಿಕಾಂತ್ ಪಡುಬಿದ್ರಿ, ಉಡುಪಿ ತಾ. ಪಂ. ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ (ಆ್ಯಕ್ಟ್)ನ ಅಧ್ಯಕ್ಷ ಮನೋಹರ ಶೆಟ್ಟಿ ಕಾಪು ಹಾಗೂ ಕಾರ್ಯದರ್ಶಿ ಗೌರವ್ ಶೇಣವ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು, ಉಪಾಧ್ಯಕ್ಷೆ ಯಶೋದಾ, ಗ್ರಾ. ಪಂ. ಸದಸ್ಯರು, ಮೊಗವೀರ ಮುಂದಾಳು ಸುಕುಮಾರ ಶ್ರೀಯಾನ್ ಮತ್ತಿತರಿದ್ದರು.
ಅಭಿವೃದ್ಧಿಗೆ ಕ್ರಮ
ಇಲ್ಲಿ ಬಾಕಿ ಉಳಿದಿರುವ ತಡೆಗೋಡೆಯನ್ನು 50 ಲಕ್ಷ ರೂ. ಗಳಲ್ಲಿ ಪೂರ್ಣಗೊಳಿಸಬೇಕಿದೆ. ರಸ್ತೆ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಿನಿ ಹೊಳೆಗಡ್ಡವಾಗಿ ಸೇತುವೆ ನಿರ್ಮಾಣ, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲ್ಲಿಂದ ಪಡುಬಿದ್ರಿಯ ಮುಖ್ಯ ಬೀಚ್ವರೆಗೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ