ಸ್ವಾಸ್ಥ್ಯ, ಮೂಲಸೌಕರ್ಯದ ಜತೆಗೆ ಕೃಷಿ ಕ್ಷೇತ್ರಕ್ಕೂ ಆದ್ಯತೆ
Team Udayavani, Feb 2, 2021, 6:40 AM IST
ಬಜೆಟ್ ಮಂಡನೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್, ಈ ಆಯವ್ಯಯದಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದಿದ್ದಾರೆ.
ಈ ಬಗ್ಗೆ ಮಾತನಾಡುತ್ತಾ ಅವರು “”ಈ ಬಜೆಟ್ನಲ್ಲಿ ಎರಡು ಮಹತ್ವಪೂರ್ಣ ವಿಶೇಷತೆಗಳಿವೆ. ಮೊದಲನೆಯದು ಮೂಲ ಸೌಕರ್ಯಾಭಿವೃದ್ಧಿಯ ಮೇಲೆ ಖರ್ಚು. ಇದರಡಿಯಲ್ಲಿ ರಸ್ತೆಗಳು, ವಿದ್ಯುತ್ ಉತ್ಪಾದನೆ, ಸೇತುವೆಗಳ ನಿರ್ಮಾಣ ಮತ್ತು ಬಂದರು ಅಭಿವೃದ್ಧಿ ಪ್ರೋತ್ಸಾಹ ನೀಡುವಂಥ ಯೋಜನೆ ಗಳು ಬರುತ್ತವೆ. ಎರಡನೆಯದು ಆರೋಗ್ಯ ಕ್ಷೇತ್ರದಲ್ಲೂ ಬಜೆಟ್ಗೆ ಹೆಚ್ಚಿನ ಜಾಗ ಮೀಸಲಿಡಲಾಗಿರುವುದು. ಇದು ಪ್ರಯೋಗ ಶಾಲೆಗಳ ಸ್ಥಾಪನೆ, ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ತುರ್ತು ಆರೈಕೆ ಕೇಂದ್ರಗಳ ಸ್ಥಾಪನೆ, ಟೆಸ್ಟಿಂಗ್ ಲ್ಯಾಬ್ಗಳ ಸ್ಥಾಪ ನೆ ಯನ್ನು ಒಳಗೊಂಡಿರುತ್ತದೆ” ಎಂದರು.
“”ಬಜೆಟ್ನಲ್ಲಿ ದೊಡ್ಡ ಪಾಲನ್ನು ಮೂಲಸೌಕರ್ಯಾಭಿವೃದ್ಧಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಲಾಗಿದೆ. ಹೀಗೆಂದಾಕ್ಷಣ, ಕೃಷಿ ಕ್ಷೇತ್ರಕ್ಕೆ ಜಾಗ ಸಿಕ್ಕಿಲ್ಲ ಎಂದರ್ಥವಲ್ಲ. ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಾಭ ಸಿಗಲಿ ಎಂಬ ಕಾರಣಕ್ಕಾಗಿ ನಬಾರ್ಡ್ಗಾಗಿ ಅನುದಾನವನ್ನು ಹಚ್ಚಿಸಲಾಗಿದೆ. ಇನ್ನು ಕೃಷಿ ಮೂಲಸೌಕರ್ಯ ಸೆಸ್ನಿಂದಾಗಿ ಗ್ರಾಹಕರಿಗೆ ಹಣಕಾಸು ಹೊರೆಯಾಗುವುದಿಲ್ಲ” ಎಂದು ಖಾತ್ರಿಪಡಿಸಿದ ಅವರು ಹೆಚ್ಚಿನ ಸೆಸ್ಗೆ ಅನುಗುಣವಾಗಿ ಕಸ್ಟಮ್ಸ್ ಸುಂಕವನ್ನು ಕಡಿತಗೊಳಿಸಿರುವ ವಿಚಾರವನ್ನು ಪ್ರಸ್ತಾಪಿಸಿದರು.
ಈ ವೇಳೆಯಲ್ಲಿ ಕೃಷಿ ಕಾಯ್ದೆಯ ಕುರಿತು ಎದುರಾದ ಪ್ರಶ್ನೆಗೆ ಅವರು, “”ಈ ವಿಚಾರದಲ್ಲಿ ರೈತರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಮೊದಲಿನಿಂದಲೂ ಮುಕ್ತವಾಗಿದೆ. ಕೃಷಿ ಕಾನೂನೂಗಳಲ್ಲಿನ ಪ್ರತಿಯೊಂದು ಅಂಶದ ಬಗ್ಗೆಯೂ ರೈತರೊಂದಿಗೆ ಚರ್ಚಿಸಲು ಕೃಷಿ ಸಚಿವರು ಸಿದ್ಧರಾಗಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ