ಲಂಕಾ ಅಧ್ಯಕ್ಷ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿ; ಕೊಲಂಬೊದಲ್ಲಿ ಭುಗಿಲೆದ್ದ ಜನಾಕ್ರೋಶ
ಜನಸಮೂಹ ನಿಯಂತ್ರಿಸಲು ಸೇನಾಪಡೆ ಅಶ್ರುವಾಯು ಪ್ರಯೋಗಿಸಿರುವುದಾಗಿ ವರದಿ ತಿಳಿಸಿದೆ.
Team Udayavani, Jul 13, 2022, 11:35 AM IST
ಕೊಲಂಬೊ: ಶ್ರೀಲಂಕಾದಲ್ಲಿ ರಾಜಪಕ್ಸ ವಿರುದ್ಧ ಜನಾಕ್ರೋಶ ಮುಂದುವರಿದಿರುವ ನಡುವೆಯೇ ದ್ವೀಪರಾಷ್ಟ್ರದ ಲಂಕಾ ಅಧ್ಯಕ್ಷ ಗೊಟಬಯಾ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ತುಂಗಾಭದ್ರಾ ನದಿಗೆ ನೀರು: ಕಂಪ್ಲಿ ಸೇತುವೆ ಸಂಚಾರ; ಶ್ರೀಕೃಷ್ಣದೇವರಾಯ ಸಮಾಧಿ ಮುಳುಗಡೆ
ಬುಧವಾರ (ಜುಲೈ 13) ಬೆಳಗ್ಗೆ ಗೊಟಬಯಾ ಮಾಲ್ಡೀವ್ಸ್ ಗೆ ಬಂದಿಳಿದಿದ್ದು, ಈ ಸಂದರ್ಭದಲ್ಲಿ ಮಾಲ್ಡೀವ್ ಸರ್ಕಾರದ ಅಧಿಕಾರಿಗಳು ಗೊಟಬಯಾ ಅವರನ್ನು ಸ್ವಾಗತಿಸಿರುವುದಾಗಿ ವರದಿ ವಿವರಿಸಿದೆ.
ಗೊಟಬಯಾ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಮತ್ತೆ ಸಾವಿರಾರು ಜನರು ಬೀದಿಗಿಳಿದಿದ್ದು, ರಾಜಪಕ್ಸ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಜನಸಮೂಹ ನಿಯಂತ್ರಿಸಲು ಸೇನಾಪಡೆ ಅಶ್ರುವಾಯು ಪ್ರಯೋಗಿಸಿರುವುದಾಗಿ ವರದಿ ತಿಳಿಸಿದೆ.
ಗೊಟಬಯಾ ರಾಜಪಕ್ಸ ಅಧಿಕೃತವಾಗಿ ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ತಿಳಿಸಿದ್ದಾರೆ. ಅಷ್ಟೇ ಅಲ್ಲ ರಾನಿಲ್ ವಿಕ್ರಮಸಿಂಘೆ ಕೂಡಾ ಪ್ರಧಾನಿ ಹುದ್ದೆಗೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ