ಮಿಸೈಲ್ ಮ್ಯಾನ್: ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಅಬ್ದುಲ್ ಕಲಾಂ ಆರನೇ ಪುಣ್ಯಸ್ಮರಣೆ
ಕಲಾಂ ಅವರ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು.
Team Udayavani, Jul 27, 2021, 3:32 PM IST
ನವದೆಹಲಿ: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಆರನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಂಗಳವಾರ (ಜುಲೈ27) ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ನೂರಾರು ಗಣ್ಯರು ಗೌರವಾರ್ಪಣೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಐಎಂಡಿಬಿ ರೇಟಿಂಗ್ ನಲ್ಲಿ ಟಾಪ್ : ಜೋರಾಗಿದೆ ಕಿಚ್ಚನ ‘ವಿಕ್ರಾಂತ್ ರೋಣ’ ಕ್ರೇಜ್
ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂಜೀ, ಮಾಜಿ ರಾಷ್ಟ್ರಪತಿ ಮಿಸೈಲ್ ಮ್ಯಾನ್ ಎಂದೇ ಜನಪ್ರಿಯಗೊಂಡಿದ್ದರು. ಮಹಾನ್ ವಿಜ್ಞಾನಿಯಾಗಿದ್ದ ಕಲಾಂ ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದರು. ಭಾರತ ಅಣುಶಕ್ತಿ ರಾಷ್ಟ್ರವಾಗುವಲ್ಲಿ ಕಲಾಂ ಮಹತ್ವದ ಪಾತ್ರವಹಿಸಿದ್ದರು. ಅವರು ನಿಧನರಾಗಿ ಇಂದಿಗೆ ಆರು ವರ್ಷವಾದರೂ ಕೂಡಾ ಅವರ ಸಾಧನೆ, ಸ್ಫೂರ್ತಿ ಸದಾ ನಮಗೆ ದಾರಿದೀಪವಾಗಲಿದೆ ಎಂದು ನಡ್ಡಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಕೇವಲ ವಿಜ್ಞಾನಿಯಾಗಿ ಮಾತ್ರ ದೇಶಕ್ಕೆ ಕೊಡುಗೆಯನ್ನು ನೀಡಿಲ್ಲ. ದೇಶದ 11ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಪಕ್ಷ ಸೇರಿದಂತೆ ಎಲ್ಲಾ ವಯೋ ಮಾನದವರಿಗೆ ಕಲಾಂ “ಜನರ ರಾಷ್ಟ್ರಪತಿ” ಎಂದೇ ಗುರುತಿಸಿಕೊಂಡಿದ್ದರು.
ಎಪಿಜೆ ಅಬ್ದುಲ್ ಕಲಾಂ ಅವರು ಡಿಆರ್ ಡಿಒ ಮತ್ತು ಇಸ್ರೋದಲ್ಲಿಯೂ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿದ್ದರು. ಪಿಎಸ್ ಎಲ್ ವಿ ಟೆಕ್ನಾಲಜಿ ಅಭಿವೃದ್ಧಿಪಡಿಸುವಲ್ಲಿ ಕಲಾಂ ಮುಖ್ಯ ಪಾತ್ರ ವಹಿಸಿದ್ದರು. ಕಲಾಂ ಅವರ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. 2002 ಜುಲೈ 25ರಿಂದ 2007ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿದ್ದು. 2015ರ ಜುಲೈ 27ರಂದು ವಿಧಿವಶರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು