ಇಬ್ಬರು ಕನ್ನಡಿಗ ಸಾಧಕಿಯರು ಸೇರಿ 29 ಮಂದಿಗೆ ನಾರಿ ಶಕ್ತಿ ಪುರಸ್ಕಾರ ಪ್ರದಾನ
ಕನ್ನಡಿಗರರಾದ ,ನಿವೃತ್ತಿರಾಯ್, ಶೋಭಾ ಗಸ್ತಿ ಪ್ರಶಸ್ತಿಗೆ ಭಾಜನ
Team Udayavani, Mar 8, 2022, 12:23 PM IST
ಜಂಟಿಯಾಗಿ ಪ್ರಶಸ್ತಿ ಸ್ವೀಕರಿಸುತ್ತಿರುವ ತಮಿಳುನಾಡಿನ ನೀಲಗಿರಿಯ ಟೋಡಾ ಕಸೂತಿ ಕುಶಲಕರ್ಮಿಗಳಾದ ಜಯ ಮುತ್ತು, ತೇಜಮ್ಮ
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನ ವಾದ ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 2020 ಮತ್ತು 2021 ರ ಸಾಲಿನ 29 ಮಂದಿ ಸಾಧಕಿಯರಿಗೆ ನಾರಿ ಶಕ್ತಿ ಪುರಸ್ಕಾರಗಳನ್ನು ಪ್ರದಾನ ಮಾಡಿದರು.
ಮಹಿಳಾ ಸಬಲೀಕರಣಕ್ಕಾಗಿ ವಿಶೇಷವಾಗಿ ದುರ್ಬಲ ಮತ್ತು ಅಂಚಿನಲ್ಲಿರುವವರಿಗಾಗಿ ಮಾಡಿದ ಅವರ ಅಸಾಧಾರಣ ಕೆಲಸವನ್ನು ಗುರುತಿಸಿ ಮಹಿಳೆಯರಿಗೆ ನೀಡಲಾಗಿದೆ. ಪುರಸ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಮಹಿಳೆಯರ ಜೀವನವನ್ನು ಬದಲಾಯಿಸುವ ವೇಗವರ್ಧಕಗಳಾಗಿ ಕೆಲಸ ಮಾಡುವವ ವ್ಯಕ್ತಿಗಳು ಮತ್ತು ಸಂಸ್ಥೆಗಳು ನೀಡಿದ ಅಸಾಧಾರಣ ಕೊಡುಗೆಗಳಿಗೆ, ಸಮಾಜದಲ್ಲಿ ಧನಾತ್ಮಕ ಬದಲಾವಣೆಗೆ ಕಾರಣವಾದವರಿಗೆ ನೀಡಲಾಗುತ್ತಿದೆ.
ಉದ್ಯಮಶೀಲತೆ, ಕೃಷಿ, ನಾವೀನ್ಯತೆ, ಸಾಮಾಜಿಕ ಕಾರ್ಯ, ಶಿಕ್ಷಣ ಮತ್ತು ಸಾಹಿತ್ಯ, ಭಾಷಾಶಾಸ್ತ್ರ, ಕಲೆ ಮತ್ತು ಕರಕುಶಲ, ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ, ಅಂಗವೈಕಲ್ಯ ಹಕ್ಕುಗಳು, ವ್ಯಾಪಾರಿ ನೌಕೆ ಮತ್ತು ವನ್ಯಜೀವಿ ಸಂರಕ್ಷಣೆಯಂತಹ ಕ್ಷೇತ್ರಗಳಿಂದ ಬಂದವರಿಗೆ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಸ್ತಿಗೆ ಭಾಜನರಾದವರಲ್ಲಿ ಕರ್ನಾಟಕದ ಇಂಟೆಲ್ ಇಂಡಿಯಾ ಮುಖ್ಯಸ್ಥೆ,ನಿವೃತ್ತಿ ರಾಯ್, ಸಾಮಾಜಿಕ ಕಾರ್ಯಕರ್ತೆ, ದೇವದಾಸಿ ಪದ್ಧತಿಯನ್ನು ಕೊನೆಗೊಳಿಸಲು ಶ್ರಮಿಸುತ್ತಿರುವ ಶೋಭಾ ಗಸ್ತಿ ಸೇರಿದ್ದಾರೆ.
ಸಾಮಾಜಿಕ ಉದ್ಯಮಿ ಅನಿತಾ ಗುಪ್ತಾ, ಸಾವಯವ ಕೃಷಿಕ ಮತ್ತು ಬುಡಕಟ್ಟು ಕಾರ್ಯಕರ್ತೆ ಉಷಾಬೆನ್ ದಿನೇಶ್ಭಾಯಿ ವಾಸವ, ನವೋದ್ಯಮಿ ನಾಸಿರಾ ಅಖ್ತರ್, ಡೌನ್ ಸಿಂಡ್ರೋಮ್ ಪೀಡಿತ ಕಥಕ್ ನೃತ್ಯಗಾರ್ತಿ ಸೈಲಿ ನಂದಕಿಶೋರ್ ಆಗವಾನೆ, ಮೊದಲ ಮಹಿಳಾ ಉರಗ ರಕ್ಷಕಿ ವನಿತಾ ಜಗದೀಯೊ ಬಿ. ಸೇರಿದ್ದಾರೆ.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು ಮತ್ತು ಸ್ಥಳೀಯರಿಗೆ ಧ್ವನಿಯಂತಹ ಸರ್ಕಾರದ ಪ್ರಯತ್ನಗಳ ಯಶಸ್ಸು ಮಹಿಳೆಯರ ಕೊಡುಗೆಯ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.
ಎಲ್ಲಾ ಮಹಿಳೆಯರು ತಮ್ಮ ಆರ್ಥಿಕ ಸಬಲೀಕರಣದ ಪರಿಣಾಮವಾಗಿ ಕುಟುಂಬದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವ ಭಾಗವಾಗುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ