ಜೀವನದಿ ಕಾವೇರಿಗೆ ನಮಿಸಿದ ರಾಷ್ಟ್ರಪತಿ


Team Udayavani, Feb 7, 2021, 6:00 AM IST

ಜೀವನದಿ ಕಾವೇರಿಗೆ ನಮಿಸಿದ ರಾಷ್ಟ್ರಪತಿ

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ಕೊಡಗಿನ ತಲಕಾವೇರಿಗೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹಾಗೂ ಪತ್ನಿ ಸವಿತಾ ಕೋವಿಂದ್‌ ಅವರು ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಇದರೊಂದಿಗೆ ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಪ್ರಥಮ ರಾಷ್ಟ್ರಪತಿ ಎಂಬ ಕೀರ್ತಿಗೂ ಅವರು ಭಾಜನರಾದರು.

ರಾಷ್ಟ್ರಪತಿ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಮುಖ್ಯ ಅರ್ಚಕರಾದ ರಾಜೇಶ್‌ ಆಚಾರ್ಯ, ಸುಧೀರ್‌ ಆಚಾರ್ಯ, ಸಹಾಯಕ ಅರ್ಚಕರಾದ ಅಖೀಲೇಶ್‌, ಪ್ರಸಾದ್‌, ಶ್ರೀನಿವಾಸ್‌ ಪೂಜಾ ವಿಧಿ ನೆರವೇರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಉಪಸ್ಥಿತ ರಿದ್ದರು. ಭಾಗಮಂಡಲದ ಹೆಲಿಪ್ಯಾಡ್‌ಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ರಾಷ್ಟ್ರಪತಿಗಳನ್ನು ಕೊಡಗು ಜಿಲ್ಲಾಡಳಿತ ಬರ ಮಾಡಿಕೊಂಡಿತು.

Kodagu: President Ram Nath Kovind pays tributes at a memorial after inaugurating a museum at the erstwhile ancestral house of General Thimayya at Madikeri in Kodagu district

ಸೇನಾ ಪರಂಪರೆಯ ಅಪೂರ್ವ ಮಾಹಿತಿ
ರಾಷ್ಟ್ರಪತಿಗಳಿಂದ ಲೋಕಾರ್ಪ ಣೆಗೊಂಡಿರುವ ಜನರಲ್‌ ತಿಮ್ಮಯ್ಯ ಜನರ ಗಮನಸೆಳೆಯುತ್ತಿದೆ. ಈ ಮನೆಯಲ್ಲೇ ತಿಮ್ಮಯ್ಯ ಅವರು ಬಾಲ್ಯದ ದಿನಗಳನ್ನು ಕಳೆದಿದ್ದರು.
ಮ್ಯೂಸಿಯಂನ ಆವರಣದಲ್ಲಿ 1947ರ ಬಳಿಕ ರಾಷ್ಟ್ರ ರಕ್ಷಣೆಗೆ ಬಲಿದಾನ ಗೈದ ಯೋಧರ ಸ್ಮರಣಾರ್ಥ ಸಜ್ಜುಗೊಳಿಸಿರುವ ಯುದ್ಧ ಸ್ಮಾರಕ ಕಣ್ಮನ ಸೆಳೆೆಯುತ್ತದಾದರೆ, ರಷ್ಯಾ ನಿರ್ಮಿತ ಭಾರತೀಯ ಸೇನೆಯ ಹಲ ವಾರು ಯುದ್ಧಗಳಲ್ಲಿ ಬಳಸಲಾಗಿದ್ದ ಹಿಮ್ಮತ್‌ ಹೆಸರಿನ ಟಿ.50 ಯುದ್ಧ ಟ್ಯಾಂಕರ್‌, ಮಿಗ್‌-20 ಯುದ್ಧ ವಿಮಾನ ಗಮನ ಸೆಳೆ‌ಯುತ್ತದೆ.
ಜನರಲ್‌ ತಿಮ್ಮಯ್ಯ ಅವರ ಬಾಲ್ಯ, ಸೇನಾ ಕ್ಷೇತ್ರದಲ್ಲಿನ ವಿವಿಧ ಛಾಯಾಚಿತ್ರಗಳು ಆಕರ್ಷಿಸುತ್ತವೆ. ಜನರಲ್‌ ತಿಮ್ಮಯ್ಯ ಅವರ ಬದುಕು, ಭಾರತೀಯ ಸೇನೆಯ ಇತಿಹಾಸವನ್ನು ವಸ್ತು ಸಂಗ್ರಹಾಲಯದಲ್ಲಿ ನೋಡ ಬಹುದಾಗಿದೆ.
ಭಾರತೀಯ ಸೇನಾಧಿಕಾರಿಯಾಗಿ ಜನರಲ್‌ ತಿಮ್ಮಯ್ಯ ಅವರು ನಡೆದು ಬಂದ ದಾರಿಯ ಇತಿಹಾಸ ಸಾರುವುದರ ಜತೆಗೆ ಭಾರತೀಯ ಸೇನಾ ಪರಂಪರೆಯ ಮಾಹಿತಿ ನೀಡುವ ಮಹತ್ವದ ಸಂದೇಶ ವಸ್ತುಸಂಗ್ರಹಾಲಯದಲ್ಲಿದೆ.

ಜನರತ್ತ ಕೈಬೀಸಿದ ಪ್ರಥಮ ಪ್ರಜೆ!
ಮಡಿಕೇರಿ, ಫೆ. 6: ರಾಷ್ಟ್ರಪತಿಗಳ ತಲ ಕಾವೇರಿ ಭೇಟಿ, ಮ್ಯೂಸಿಯಂ ಉದ್ಘಾ ಟನೆ ಇವೆಲ್ಲವು ಬೆರಳೆಣಿಕೆಯ ಗಣ್ಯರ ಸಮ್ಮುಖದಲ್ಲಿ ನಡೆದವು. ಅವರು ಸಾಗುವ ಮಾರ್ಗಗಳಲ್ಲೆಲ್ಲ ಬಿಗಿ ಪಹರೆ ಇತ್ತು. ಇದರ ನಡುವೆ ರಾಷ್ಟ್ರದ ಪ್ರಥಮ ಪ್ರಜೆಯನ್ನು ಕಾಣುವುದು ಅಸಾಧ್ಯದ ಮಾತು. ಆದರೂ ಕನಿಷ್ಠ ಕಾರಿನೊಳಗೆ ಕುಳಿತ ರಾಷ್ಟ್ರಪತಿಗಳನ್ನಾದರೂ ನೋಡಬಹುದೆಂದು ಮ್ಯೂಸಿಯಂ ಬಳಿಯ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಸಿಬಂದಿಹಾಗೂ ಸಾರ್ವಜನಿಕರು ಕಾದುಕುಳಿತಿ ದ್ದರು. ರಾಷ್ಟ್ರಪತಿಗಳು ಅವರನ್ನು ನಿರಾಸೆ ಗೊಳಿಸಲಿಲ್ಲ. ವಿಶೇಷ ವಾಹನದಲ್ಲಿ ತೆರಳುತ್ತಿದ್ದ ಅವರು ಜಿಲ್ಲಾಸ್ಪತ್ರೆಯ ಬಳಿ ಕಾರಿನಿಂದಿಳಿದು ಜನರತ್ತ ಕೈಬೀಸಿ ಹರ್ಷ ಮೂಡಿಸಿದರು.

ಕೊಡಗಿಗೆ ಬಂದ ತೃತೀಯ ರಾಷ್ಟ್ರಪತಿ
ಈ ಹಿಂದೆ ಕೊಡಗಿಗೆ 1982ರಲ್ಲಿ ಜಿಲ್ಲಾಸ್ಪತ್ರೆಯ ಶಂಕುಸ್ಥಾಪನೆಗಾಗಿ ಆರನೇ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಭೇಟಿ ನೀಡಿದ್ದರೆ, 2006ರ ಎ. 7ರಂದು 11ನೇ ರಾಷ್ಟ್ರಪತಿಯಾಗಿದ್ದ ಎ.ಪಿ.ಜೆ. ಅಬ್ದುಲ್‌ ಕಲಾಂ ಅವರು ಜನರಲ್‌ ತಿಮ್ಮಯ್ಯ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಗೆ ಬಂದಿದ್ದರು. ರಾಮನಾಥ ಅವರು ಇದೀಗ ಕೊಡಗಿಗೆ ಭೇಟಿ ನೀಡಿರುವ ತೃತೀಯ ಹಾಗೂ ದೇಶದ 14ನೇ ರಾಷ್ಟ್ರಪತಿಯಾಗಿದ್ದಾರೆ.

Kodagu: President Ram Nath Kovind inaugurates a museum at the erstwhile ancestral house of General Thimayya at Madikeri in Kodagu district

ಪ್ರಯಾಣಿಕರ ಪರದಾಟ
ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿತ್ತು. ರಾಷ್ಟ್ರಪತಿಯವರು ಹೆಲಿಪ್ಯಾಡ್‌ನಿಂದ ಸುದರ್ಶನ ಅತಿಥಿ ಗೃಹಕ್ಕೆ ತೆರಳುವ ಮಾರ್ಗದಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಪೂರ್ವಾಹ್ನ 11 ರಿಂದ ಸಂಜೆ 5ರ ವರೆಗೆ ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದ್ದರೂ ಬಹು ತೇಕ ಅಂಗಡಿ ಮುಂಗಟ್ಟುಗಳು ಬೆಳಗಿನಿಂದಲೇ ಮುಚ್ಚಲ್ಪಟ್ಟಿದ್ದವು. ವಾಹನ ಸಂಚಾರ ವಿರಳವಾಗಿತ್ತು. ಇದ ರಿಂದಾಗಿ ಮಡಿಕೇರಿ ನಗರದಲ್ಲಿ ಅಘೋಷಿತ ಬಂದ್‌ನ ವಾತಾವರಣ ನಿರ್ಮಾಣ ವಾಗಿತ್ತು. ಕೆಎಸ್ಸಾರ್ಟಿಸಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ನಿಲ್ದಾಣದಲ್ಲೇ ಸಂಜೆಯವರೆಗೆ ಕಾಯು ವಂತಾಯಿತು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.