ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ
7 ಕಂಪನಿಗಳ ಪ್ರತಿನಿಧಿಗಳೊಂದಿಗೆ ಪಿಎಂ ಸಭೆ
Team Udayavani, Oct 23, 2021, 8:30 PM IST
ನವದೆಹಲಿ : “ಕೇವಲ 9 ತಿಂಗಳ ಅವಧಿಯಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲು ಸಾಧ್ಯವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಕಾರಣ.’
ಭಾರತದ ಕೊರೊನಾ ಲಸಿಕೆ ಉತ್ಪಾದಕ ಕಂಪನಿಗಳ ಅಭಿಪ್ರಾಯವಿದು. ಶನಿವಾರ 7 ಲಸಿಕೆ ಉತ್ಪಾದಕ ಕಂಪನಿಗಳ ಪ್ರತಿನಿಧಿಗಳೊಂದಿಗೆ ಪ್ರಧಾನಿ ಮೋದಿ ನಡೆಸಿದ ಸಂವಾದದ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
100 ಕೋಟಿ ಡೋಸ್ ಸಾಧನೆ ಹಿನ್ನೆಲೆಯಲ್ಲಿ ಮೋದಿ, ದೇಶದ ಲಸಿಕೆ ಉತ್ಪಾದಕ ಕಂಪನಿಗಳಾದ ಸೀರಂ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್, ಡಾ. ರೆಡ್ಡೀಸ್ ಲ್ಯಾಬೊರೆಟರೀಸ್, ಝೈಡಸ್ ಕ್ಯಾಡಿಲಾ, ಬಯಾಲಾಜಿಕಲ್ ಇ, ಜೆನ್ನೋವಾ ಬಯೋಫಾರ್ಮಾ ಮತ್ತು ಪನೇಶಿಯಾ ಬಯೋಟೆಕ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದಾರೆ. ಲಸಿಕೆ ಸಂಶೋಧನೆಯನ್ನು ಮುಂದುವರಿಸುವುದು ಸೇರಿದಂತೆ ಅನೇಕ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.
ಪೂನಾವಾಲ ಶ್ಲಾಘನೆ:
ಲಸಿಕೆ ಮೈಲುಗಲ್ಲು ಸಾಧಿಸುವಲ್ಲಿ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ಕೊಂಡಾಡಿದ ಸೀರಂ ಇನ್ಸ್ಟಿಟ್ಯೂಟ್ ಸಿಇಒ ಅಡಾರ್ ಪೂನಾವಾಲ, “ಜಗತ್ತಿನಾದ್ಯಂತ ಎಲ್ಲ ದೇಶಗಳೂ ಈಗ ಲಸಿಕೆ ಉತ್ಪಾದನೆ ಕ್ಷೇತ್ರದಲ್ಲಿ ಹೂಡಿಕೆ ಮಾಡುತ್ತಿವೆ. ಭಾರತ ಕೂಡ ಆ ನಿಟ್ಟಿನಲ್ಲಿ ಹೆಜ್ಜೆಯಿಡಬೇಕು. ನಮ್ಮ ಈ ಕ್ಷೇತ್ರ ಮತ್ತು ಸರ್ಕಾರ ಜತೆಗೂಡಿ ಹೇಗೆ ಇದನ್ನು ಸಾಧ್ಯವಾಗಿಸಬಹುದು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ’ ಎಂದಿದ್ದಾರೆ. ಅಡಾರ್ ಅವರ ತಂದೆ ಸೈರಸ್ ಪೂನಾವಾಲ ಮಾತನಾಡಿ, “ಮೋದಿಯವರಿಲ್ಲದಿದ್ದರೆ ಭಾರತ ಇಂದು ಶತಕೋಟಿ ಡೋಸ್ಗಳ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ’ ಎಂದಿದ್ದಾರೆ.
ಇದನ್ನೂ ಓದಿ : ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು
ಮೋದಿ ಬದ್ಧತೆಯೇ ಕಾರಣ:
100 ಕೋಟಿ ಡೋಸ್ನ ದಾಖಲೆ ಮಾಡುವುದು ಸುಲಭದ ಕೆಲಸವಲ್ಲ. ಇದು ಆತ್ಮನಿರ್ಭರ ಭಾರತದ ಯಶೋಗಾಥೆ. ಪ್ರಧಾನಿ ಮೋದಿ ಅವರ ಬದ್ಧತೆಯಿಂದ ಇದು ಸಾಧ್ಯವಾಯಿತು. ಆರಂಭದಲ್ಲಿದ್ದ ಎಲ್ಲ ಋಣಾತ್ಮಕತೆಗಳೂ ನಂತರದಲ್ಲಿ ಅವಕಾಶವಾಗಿ ಪರಿವರ್ತನೆಗೊಂಡವು. ಯಾವುದೇ ದೇಶಕ್ಕೆ ಒಬ್ಬ ನಾಯಕನು ಮಾಡಬಹುದಾದ ಶ್ರೇಷ್ಠ ಕೆಲಸವಿದು ಎಂದು ಭಾರತ್ ಬಯೋಟೆಕ್ ಸ್ಥಾಪಕ ಕೃಷ್ಣ ಎಲ್ಲಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ