ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
ಪ್ರಧಾನಿ ಮೋದಿಯವರಿಂದ ಶಂಕರಾಚಾರ್ಯರ ಸಮಾಧಿ, ಪ್ರತಿ ಮೆ ಅನಾವರಣ
Team Udayavani, Oct 31, 2021, 10:30 PM IST
ನವದೆಹಲಿ: ಇದೇ ತಿಂಗಳ 5ರಂದು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಕೆಲವು ಪ್ರಮುಖವಾದ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭಕ್ಕೆ ಮತ್ತಷ್ಟು ಧಾರ್ಮಿಕ ಸ್ಪರ್ಶ ನೀಡಲು ನಿರ್ಧರಿಸಿರುವ ಬಿಜೆಪಿ, ದೇಶಾ ದ್ಯಂತ ಪ್ರಮುಖ ಪುಣ್ಯಸ್ಥಳಗಳಿಗೆ ಸಾಧುಗಳು, ಸನ್ಯಾಸಿಗಳನ್ನು ಕರೆಸಿಕೊಂಡು ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸಿದೆ.
ಆದಿ ಶಂಕರಾಚಾರ್ಯ ಪ್ರತಿಮೆ ಲೋಕಾರ್ಪಣೆ :
ಪ್ರಧಾನಿ ಮೋದಿ ಕೇದಾರನಾಥ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಆದಿ ಶಂಕರಾಚಾರ್ಯರ ಪುನರುತ್ಥಾನಗೊಂಡ ಸಮಾಧಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಜೊತೆಗೆ, ಕೇದಾರನಾಥದಲ್ಲಿ ಸ್ಥಾಪಿಸಲಾಗಿರುವ ಶಂಕರಾಚಾರ್ಯರ ಪ್ರತಿ ಮೆಯನ್ನೂ ಅನಾವರಣಗೊಳಿಸಲಿದ್ದಾರೆ.
ಐತಿಹಾಸಿಕ ಕಾರ್ಯಕ್ರಮ : ಬಿಜೆಪಿ
ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಮಹಾನ್ ದಾರ್ಶನಿಕರಾದ ಶ್ರೀಮದ್ ಶಂಕರಾಚಾರ್ಯರ ಸಮಾಧಿಯು 2013ರಲ್ಲಿ ಕೇದಾರನಾಥದಲ್ಲಿ ಸಂಭವಿಸಿದ್ದ ಪ್ರವಾಹದಿಂದ ಧ್ವಂಸಗೊಂಡಿತ್ತು. ಈಗ ಅದ ನ್ನು ಪುನರುತ್ಥಾನಗೊಳಿಸಲಾಗಿದೆ. ಆ ಸಮಾಧಿಯನ್ನು ಹಾಗೂ ಅವರ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಐತಿಹಾಸಿಕ ಕಾರ್ಯಕ್ರಮಗಳಾಗಿವೆ. ದೇಶಾದ್ಯಂತ ಈ ಇದರ ರಂಗು ಪಸರಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಬಿಜೆಪಿ ಹೇಳಿದೆ.
ಇದನ್ನೂ ಓದಿ : 60ರ ವಯಸ್ಸಿನಲ್ಲಿ ಸರಕಾರ ನಮ್ಮನ್ನು ಗುರುತಿಸಿತಲ್ಲ: ಪ್ರಾಣೇಶ್ ಸಂತಸ
ಹಲವೆಡೆ ಪೂಜೆ, ಉತ್ಸವ
ಶಂಕರಾಚಾರ್ಯರ ನವೀಕೃತ ಸಮಾಧಿ ಹಾಗೂ ಪುತ್ಥಳಿ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಅವರು ಧರ್ಮಪ್ರಚಾರ ಹಾಗೂ ಧರ್ಮಪುನರುತ್ಥಾನಕ್ಕಾಗಿ ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ ಸಾಗಿ ಹೋಗುವಾಗ ಸಂದರ್ಶಸಿದ್ದರೆನ್ನಲಾದ 87 ಪ್ರಮುಖ ದೇಗುಲಗಳು, 12 ಜ್ಯೋತಿರ್ಲಿಂಗಗಳು, ಹಿಮಾಲಯದ ಸನ್ನಿಧಿಗಳಲ್ಲಿ ಹಾಗೂ ಹಿಮಾಲಯದ ವ್ಯಾಪ್ತಿಯಲ್ಲಿ ಬರುವ ಚಾರ್ ಧಾಮ್ಗಳಲ್ಲಿಯೂ ಧಾರ್ಮಿಕ ಪೂಜೆ ಹಾಗೂ ಸಂಭ್ರಮಾಚರಣೆ ಮಾಡಲಾಗುತ್ತದೆ. ಈ ಎಲ್ಲಾ ಸಮಾರಂಭಗಳಲ್ಲಿ ಮುಕ್ತವಾಗಿ ಭಾಗವಹಿಸಲು ಸಾಧುಗಳು, ಸನ್ಯಾಸಿಗಳಿಗೆ ಆಹ್ವಾನ ನೀಡಲಾಗುತ್ತದೆ. ಈ ಎಲ್ಲಾ ಕಾರ್ಯಕ್ರಮಗಳ ವೇಳೆ, ಕೇದಾರನಾಥದಲ್ಲಿ ನಡೆಯುವ ಮೋದಿಯವರ ಕಾರ್ಯಕ್ರಮಗಳನ್ನು ವಿಶಾಲವಾದ ಎಲ್ಇಡಿ ಪರದೆಗಳ ಮೂಲಕ ನೇರಪ್ರಸಾರ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್