ಕೋವಿಡ್ ನಿಯಂತ್ರಣದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ : ಪ್ರಿಯಾಂಕ್ ಖರ್ಗೆ ಟೀಕೆ
Team Udayavani, Nov 18, 2020, 2:23 PM IST
ಕಲಬುರಗಿ: ಕೋವಿಡ್ ವೈರಸ್ ಹಾವಳಿ ಕಡಿಮೆಯಾಗಿಲ್ಲ. ಸರ್ಕಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನರು ಕೊರೊನಾ ಕಡಿಮೆಯಾಗಿದೆ ಎಂದು ಭಾವಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ.
ನಗರದ ಎರಡು ಟೆಸ್ಟಿಂಗ್ ಕೇಂದ್ರಗಳಿಂದ ಮಾದರಿ ಪರೀಕ್ಷೆ ವರದಿಗಳು ತಕ್ಷಣಕ್ಕೆ ಲಭ್ಯವಾಗುತ್ತಿಲ್ಲ. ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಜನರು ಕೊರೋನಾ ಕಡಿಮೆಯಾಗಿದೆ ಎಂದೇ ಭಾವಿಸುತ್ತಿದ್ದಾರೆ. ಬೆಂಗಳೂರಿನಲ್ಲಿ 2.9 % ಇದೆ ಎಂದು ಹೇಳಲಾಗುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ:ಕೋವಿಡ್ ಪ್ರಕರಣದಲ್ಲಿ ಇಳಿಕೆ : ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಪುನರಾರಂಭಕ್ಕೆ ಸೂಚನೆ
ಹೋಂ ಕ್ವಾರೆಂಟೆನ್ ಬಗ್ಗೆ ಯಾವುದೇ ನಿಯಮಾವಳಿಗಳು ಇಲ್ಲ. ಯೂರೋಪ್ ರಾಷ್ಟ್ರಗಳಲ್ಲಿ ಎರಡನೆಯ ಹಂತದ ಕೊರೋನಾ ಬಂದಿದೆ. ದಿಲ್ಲಿಯಲ್ಲಿ ಕೂಡಾ ಮತ್ತೆ ಪ್ರಾರಂಭವಾಗಿದೆ. ಇಷ್ಟೆಲ್ಲ ಉದಾಹರಣೆ ಇರುವಾಗ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಮುಂಜಾಗುರೂಕತೆಯಾಗಿ ಯಾವುದೇ ಕ್ರಮಗಳನ್ನು ತೆಗೆದೆಕೊಳ್ಳುತ್ತಿಲ್ಲ. ಸಚಿವರು ಸದನದಲ್ಲಿ ಕೊಡುವ ಉತ್ತರಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ. ಕೇಂದ್ರ ಸರಕಾರ ನೀಡಿರುವ ಕಟ್ಟುನಿಟ್ಟಿನ ಕ್ರಮಗಳನ್ನು ರಾಜ್ಯದಲ್ಲಿ ಎಷ್ಟು ಪ್ರಮಾಣದಲ್ಲಿ ಜಾರಿಗೆ ತರಲಾಗಿದೆ.
ಕೇಂದ್ರ ಸರಕಾರ ನಿರ್ದೇಶನದ ಪ್ರಕಾರ ಟೆಸ್ಟಿಂಗ್ ಕೇಂದ್ರಗಳನ್ನು ಹೆಚ್ಚು ಮಾಡಬೇಕು. ಆದರೆ ಇಲ್ಲಿ ಎಷ್ಟು ಹೆಚ್ಚುವರಿ ಸ್ಥಾಪಿಸಲಾಗಿದೆ. ಕಲಬುರಗಿ ಯಲ್ಲಿ ಸಧ್ಯ ಇರುವ ಕೇಂದ್ರಗಳೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಟೀಕಿಸಿದರು.
ಮಾದರಿ ಸಂಗ್ರಹ ಮಾಡಿದ 24 ಗಂಟೆಯಲ್ಲೇ ವರದಿ ನೀಡಬೇಕು. ಆದರೆ, ಕಲಬುರಗಿಯಲ್ಲಿ ದಿನಗಳು ಕಳೆದರೂ ವರದಿ ಬರುತ್ತಿಲ್ಲ. ಸಮುದಾಯ ತಿಳುವಳಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಇತ್ಯಾದಿ ಜಾರಿಗೆ ತರಲಾಗಿಲ್ಲ. ಸ್ಥಳೀಯ ಆಡಳಿತ ಈ ಕುರಿತು ಯಾವ ಕ್ರಮ ಕೈಗೊಂಡಿದೆ ಎಂದು ಪ್ರಿಯಾಂಕ್ ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ:ಪರಿಹಾರ ಕೊಡಲು ಸರಕಾರದ ಬಳಿ ದುಡ್ಡಿಲ್ಲ! ಜಾತಿ ನಿಗಮ ಪ್ರಾಧಿಕಾರಕ್ಕೆ ದುಡ್ಡು ಎಲ್ಲಿಂದ ಬಂತು?
ಕಳೆದ ಹತ್ತು ತಿಂಗಳಿಂದ ಕಾಲೇಜುಗಳು ಬಂದ್ ಆಗಿವೆ. ಈಗ ಸರಕಾರ ಪುನಾರಂಭಕ್ಕೆ ತಯಾರಿ ನಡೆಸಿದೆ. ಈ ಕುರಿತು ಒಂದು ಸ್ಪಷ್ಟ ನೀಲ ನಕ್ಷೆ ತಯಾರಾಗಿಲ್ಲ. ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರುವಂತೆ ಹೇಳಲಾಗುತ್ತದೆ. ವಿದ್ಯಾರ್ಥಿಗಳು ಎಷ್ಟು ಸಲ ತರಬೇಕು.
ರಜೆಗೆಂದು ಬೇರೆ ಊರಿಗೆ ಹೋದವರು ಎಷ್ಟು ಸಲ ವರದಿ ತರಬೇಕು? ಹಾಸ್ಟೆಲ್ ನಲ್ಲಿ ವಾಸಿಸುವ ವಿದ್ಯಾರ್ಥಿಗಳ ಸ್ಥಿತಿ ಹೇಗೆ? 20 – 25 ಸಾವಿರ ವಿದ್ಯಾರ್ಥಿಗಳು ಹಾಗೂ 5 ಸಾವಿರ ಭೋದಕ ಹಾಗೂ ಇತರೆ ಸಿಬ್ಬಂದಿಗಳು ಮಾದರಿ ಪರೀಕ್ಷೆಗೆ ಎಲ್ಲಿ ಹೋಗಬೇಕು? ಕಲಬುರಗಿ ಜಿಲ್ಲೆಯಲ್ಲಿ ಇರುವ 16 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿಲ್ಲ ಎಂದು ಸರಕಾರದ ನಿರ್ಲಕ್ಷದ ವಿರುದ್ಧ ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA