ಪ್ರೊ. ಎಂ. ಎ. ಹೆಗಡೆ ಕುರಿತ ‘ಅಣ್ಣ ಮಹಾಬಲ’ ಕೃತಿ‌ ಏ. 9 ರಂದು ಬಿಡುಗಡೆ


Team Udayavani, Apr 7, 2022, 4:44 PM IST

1-sadsad

ಶಿರಸಿ: ಯಕ್ಷಗಾನ ತಜ್ಞರಾಗಿ, ಸಂಸ್ಕೃತ ವಿದ್ವಾಂಸರಾಗಿ, ಸಾಹಿತಿಯಾಗಿ, ಯಕ್ಷಕವಿಯಾಗಿ ತಮ್ಮ ಬಹುಮುಖಿ ಪಾಂಡಿತ್ಯದಿಂದಾಗಿ ಹೆಸರಾಗಿದ್ದ ಪ್ರೊ. ಎಂ. ಎ. ಹೆಗಡೆ ಅವರ ಕುರಿತ ‘ಅಣ್ಣ ಮಹಾಬಲ’ ಕೃತಿ‌ ಏ.9 ರಂದು ನಗರದ ರೋಟರಿ ಸೆಂಟರ್ ನಲ್ಲಿ ಬಿಡುಗಡೆ ಆಗಲಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ, ಅಧ್ಯಕ್ಷರಿಗೆ ಸರ್ಕಾರ ನೀಡುವ ಗೌರವಧನವನ್ನೂ ಸ್ವಂತಕ್ಕೆ ಬಳಸದೇ, ಕಲೆಗಾಗಿಯೇ ವ್ಯಯಿಸಿ ಆದರ್ಶ ಮೆರೆದ ಹೆಗಡೆ ಅವರು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮಾತ್ರವಲ್ಲ, ಅದ್ವೈತ ವೇದಾಂತ, ಭಾರತೀಯ ದರ್ಶನ ಕ್ಷೇತ್ರಕ್ಕೆ ನೀಡಿದ ಕೊಡುಗೆಯೂ ಗಮನಾರ್ಹವೇ ಆಗಿದ್ದವು. ಅವರ ಅಲಂಕಾರ ತತ್ತ್ವ, ಹಿಂದೂ ಸಂಸ್ಕಾರಗಳು, ಧ್ವನ್ಯಾಲೋಕ ಮತ್ತು ಲೋಚನ, ಶಬ್ದ ಮತ್ತು ಜಗತ್ತು, ಭಾರತೀಯ ತತ್ತ್ವ ಶಾಸ್ತ್ರ, ಸಿದ್ದಾಂತ ಬಿಂದು ಮೊದಲಾದ ಗ್ರಂಥಗಳು ವಿದ್ವತ್ ಮತ್ತು ಸಾಹಿತ್ಯ ವಲಯದ ಗಮನ ಸೆಳೆದಿದ್ದರೆ, ಸೀತಾ ವಿಯೋಗ, ರಾಜಾ ಕರಂಧಾಮದಂಥಹ 20 ಕ್ಕೂ ಹೆಚ್ಚು ಪ್ರಸಂಗಗಳ ಮೂಲಕ ಯಕ್ಷಕವಿಯೂ ಆಗಿದ್ದವರು.

ನೇರ ಮಾತು, ಸರಳ ವ್ಯಕ್ತಿತ್ವ ಹಾಗೂ ದಿಟ್ಟ ನಡೆಯಿಂದ ಸ್ವಚ್ಛ ಬದುಕು ಬಾಳಿದವರು. ಅವರು ನಿಧನರಾಗಿ ಒಂದು ವರ್ಷವಾಗುತ್ತಿರುವ ಸಂದರ್ಭದಲ್ಲಿ  ಅವರ ಬದುಕಿನ ಪ್ರಮುಖ ಘಟ್ಟಗಳನ್ನು ದಾಖಲಿಸುವ ಪುಸ್ತಕವೊಂದು ಹೊರಬರುತ್ತಿರುವದು ವಿಶೇಷವಾಗಿದೆ.

ಬೆಂಗಳೂರಿನ ಪದ್ಮಾವತಿ ಮತ್ತು ಹಾಸ್ಯಸಾಹಿತಿ ಎನ್. ರಾಮನಾಥ್ ಅವರ ತೇಜು ಪಬ್ಲಿಕೇಷನ್ಸ್ ಈ ಪುಸ್ತಕ ಪ್ರಕಟಿಸಿದೆ. ಹೆಗಡೆಯವರ ಜೀವನದ ಅಪರೂಪದ ವಿವರಗಳು, ಅವರೊಂದಿಗೆ ಒಡನಾಡಿದವರ ನೆನಪುಗಳು, ಅವರ ಕೃತಿಗಳ ಕುರಿತಾದ ಅಭಿಪ್ರಾಯಗಳು, ಅವರ ಚಿಂತನೆಯ ಮಾದರಿಗಳು ಎಲ್ಲವನ್ನೂ ಒಳಗೊಂಡ ಪುಸ್ತಕವನ್ನು ಹೆಗಡೆ ಅವರ ಸಹೋದರ, ಪತ್ರಕರ್ತ ರಾಜಶೇಖರ ಜೋಗಿನ್ಮನೆ ಅವರು ಸಿದ್ಧಪಡಿಸಿದ್ದಾರೆ.
ಈ ‘ಅಣ್ಣ ಮಹಾಬಲ’ ಕೃತಿ ಏ. 9ರ ಶನಿವಾರ ಸಂಜೆ 4.30ಕ್ಕೆ ಲೋಕಾರ್ಪಣೆಯಾಗಲಿದೆ.

ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆ ಪುಸ್ತಕ ಲೋಕಾರ್ಪಣೆ ಮಾಡಲಿದ್ದು, ಸೆಲ್ಕೋ ಸಂಸ್ಥೆಯ ಸಿಇಒ ಹಾಗೂ ಯಕ್ಷಗಾನ ಕಲಾವಿದ ಮೋಹನ ಭಾಸ್ಕರ ಹೆಗಡೆ ಅತಿಥಿಯಾಗಿ ಪಾಲ್ಗೊಳ್ಳುವರು. ಹಿರಿಯ ಸಾಹಿತಿ, ಕವಿ ಸುಬ್ರಾಯ ಮತ್ತಿಹಳ್ಳಿ ಕೃತಿಯ ಕುರಿತು ಮಾತನಾಡುವರು.

ಶಿರಸಿ ತಾಲೂಕು ಕನ್ನಡಸಾಹಿತ್ಯ ಪರಿಷತ್ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ಹಾಗೂ ಕೃತಿಕಾರ ರಾಜಶೇಖರ ಜೋಗಿನ್ಮನೆ ಉಪಸ್ಥಿತರಿರುವರು. ಕಾರ್ಯಕ್ರಮಕ್ಕೆ ಶಿರಸಿಯ ಶಬರ ಸಂಸ್ಥೆಯ  ಸಹಕಾರವಿದೆ ಎಂದು‌ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.