ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ “ಉಚಿತ ಭರವಸೆ” ಗಂಭೀರ ವಿಷಯ: ಆಯೋಗಕ್ಕೆ ಸುಪ್ರೀಂ ನೋಟಿಸ್
ಈ ಚುನಾವಣೆಯಲ್ಲಿಯೇ ಇದನ್ನು ಕಾರ್ಯಗತಗೊಳಿಸಲು ಸಾಧ್ಯವೇ?
Team Udayavani, Jan 25, 2022, 2:32 PM IST
ನವದೆಹಲಿ:ಮುಂಬರುವ ಪಂಚರಾಜ್ಯ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷವೊಡ್ಡಲು ಉಚಿತ ಆಶ್ವಾಸನೆ ನೀಡುತ್ತಿರುವ ಕ್ರಮಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಂಗಳವಾರ(ಜನವರಿ 25) ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ:ಕಾಮಗಾರಿ ವಿಳಂಬ: ನವಯುಗ ಕಂಪೆನಿಗೆ ಬೀಗ ಜಡಿದು,ಮುತ್ತಿಗೆ; ಗ್ರಾ. ಪಂ.ನಿಂದ ಪ್ರತಿಭಟನೆ
ಚುನಾವಣೆಯಲ್ಲಿ ಆಶ್ವಾಸನೆ ನೀಡುತ್ತಿರುವ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ ಸಿಜೆಐ ಎನ್.ವಿ.ರಮಣ ಅವರು, ರಾಜಕೀಯ ಪಕ್ಷಗಳ ಈ ನಡವಳಿಕೆಯನ್ನು ಕಾನೂನಾತ್ಮಕವಾಗಿ ಹೇಗೆ ನಿಯಂತ್ರಿಸಬಹುದು ಎಂಬುದು ನನಗೆ ತಿಳಿಯಬೇಕಾಗಿದೆ. ಈ ಚುನಾವಣೆಯಲ್ಲಿಯೇ ಇದನ್ನು ಕಾರ್ಯಗತಗೊಳಿಸಲು ಸಾಧ್ಯವೇ? ಅಥವಾ ಮುಂದಿನ ಚುನಾವಣೆಯಲ್ಲಿಯೋ. ಇದೊಂದು ಗಂಭೀರವಾದ ವಿಷಯವಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಸಾರ್ವಜನಿಕರ ಹಣದಿಂದ ತರ್ಕಬದ್ಧವಲ್ಲದ ಉಚಿತ ಭರವಸೆಗಳನ್ನು ನೀಡುವುದನ್ನು ತಡೆಗಟ್ಟಲು ಮಾರ್ಗಸೂಚಿಯನ್ನು ಸಿದ್ದಪಡಿಸುವಂತೆ ಈ ಮೊದಲು ಚುನಾವಣಾ ಆಯೋಗಕ್ಕೆ ಸೂಚಿಸಲಾಗಿತ್ತು. ಆದರೆ ಆಯೋಗ ಕೇವಲ ರಾಜಕೀಯ ಪಕ್ಷಗಳ ನಿಲುವು ವ್ಯಕ್ತಪಡಿಸುವಂತೆ ಒಂದು ಸಭೆಯನ್ನು ಮಾತ್ರ ನಡೆಸಿರುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಇಂತಹ ಜನಪ್ರಿಯ ಆಶ್ವಾಸನೆಗಳು ಸಂವಿಧಾನ ವಿರೋಧಿಯಾಗಿದ್ದು, ಇದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಚುನಾವಣಾ ಆಯೋಗ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಪಿಐಎಲ್ ನಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ.
ಪಿಐಎಲ್ ಅನ್ನು ಸುಪ್ರೀಂಕೋರ್ಟ್ ಸಿಜೆಐ ಎನ್.ವಿ.ರಮಣ, ಜಸ್ಟೀಸ್ ಎ.ಎಸ್. ಬೋಪಣ್ಣಾ ಮತ್ತು ಜಸ್ಟೀಸ್ ಹಿಮಾ ಕೊಹ್ಲಿ ನೇತೃತ್ವದ ಪೀಠ ವಿಚಾರಣೆ ನಡೆಸಿದ್ದು, ಮುಂದಿನ ನಾಲ್ಕು ವಾರಗಳ ನಂತರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ