ದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಅನಿವಾರ್ಯ


Team Udayavani, Apr 10, 2021, 7:00 AM IST

ದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಅನಿವಾರ್ಯ

ವರ್ಷಗಳುರುಳಿದಂತೆಯೇ ಕೃಷಿ ಕಾರ್ಮಿಕರ ಕೊರತೆ ದೇಶವ್ಯಾಪಿ ಸಮಸ್ಯೆಯಾಗಿ ಮಾರ್ಪಟ್ಟಿದ್ದು ಇದು ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮವನ್ನುಂಟು ಮಾಡುತ್ತಿದೆ. ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸುವ ದೇಶದ ಕನಸು ಸಾಕಾರಗೊಳ್ಳುವಲ್ಲಿ ಕಾರ್ಮಿಕರ ಸಮಸ್ಯೆ ಬಲುದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.

ಭಾರತ ಕೃಷಿ ಆಧಾರಿತ ದೇಶವಾಗಿದ್ದು ಇಲ್ಲಿನ ಆರ್ಥಿಕತೆ ಕೃಷಿಯನ್ನೇ ಅವಲಂಬಿಸಿದೆ. ಕೃಷಿ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರಕಾರಗಳಿಂದ ನಿರಂತರವಾಗಿ ಪ್ರಯತ್ನಗಳು ನಡೆಯುತ್ತಲೇ ಬಂದಿವೆ. ಆದರೆ ವರ್ಷಗಳುರುಳಿದಂತೆಯೇ ಒಟ್ಟಾರೆ ಕೃಷಿ ಸಂಬಂಧಿ ಚಟುವಟಿ ಕೆ ಗಳು ಕ್ಷೀಣಿಸುತ್ತಿವೆ. ಕೃಷಿ ಕ್ಷೇತ್ರದಲ್ಲಿನ ಈ ಹಿನ್ನಡೆಗೆ ಹತ್ತು ಹಲ ವು ಕಾರಣ ಗಳನ್ನು ಪಟ್ಟಿ ಮಾಡಬಹುದಾದರೂ ಕೃಷಿಕರಲ್ಲಿ ತಮ್ಮ ವೃತ್ತಿಯ ಬಗೆಗೆ ವಿಶ್ವಾಸ ಮೂಡಿಸುವಂತಹ ಉಪಕ್ರಮಗಳನ್ನು ಕೈಗೊಳ್ಳು ವಲ್ಲಿ ಸರಕಾರಗಳು ಎಡವಿರುವುದೇ ಬಲುಮುಖ್ಯ ಕಾರಣ ಎನ್ನಬಹುದು.

ಕೇಂದ್ರ ಸಾಂಖೀಕ ಮತ್ತು ಯೋಜನಾ ಅನುಷ್ಠಾನ ಇಲಾಖೆಯು ಬಿಡುಗಡೆ ಮಾಡಿರುವ “ಭಾರತದಲ್ಲಿನ ಮಹಿಳೆಯರು ಮತ್ತು ಪುರುಷರು-2020′ ವರದಿಯ ಪ್ರಕಾರ, ಕೃಷಿ ಕ್ಷೇತ್ರದಲ್ಲಿ ಪುರುಷ ಮತ್ತು ಮಹಿಳಾ ಕಾರ್ಮಿಕರ ಸಂಖ್ಯೆ ಕಳೆದ ಕೆಲವು ವರ್ಷಗಳಿಂದೀಚೆಗೆ ಗಣ ನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಈ ಅವಧಿಯಲ್ಲಿ ನಗರ ಪ್ರದೇಶ ಗಳಲ್ಲಿನ ವ್ಯಾಪಾರ, ಹೊಟೇಲ್‌ ಮತ್ತಿತರ ಕ್ಷೇತ್ರಗಳಲ್ಲಿ ಕಾರ್ಮಿಕರ ಸಂಖ್ಯೆ ಏರಿಕೆಯನ್ನು ಕಂಡಿದೆ.

ಉನ್ನತ ಶಿಕ್ಷಣ ಪಡೆದವರು ಉದ್ಯೋಗಗಳನ್ನು ಅರಸಿ ನಗರಗಳತ್ತ ಪ್ರಯಾಣ ಬೆಳೆಸಿದರೆ ಇತರರು ನಗರಗಳಲ್ಲಿ ಸಣ್ಣಪುಟ್ಟ ವೃತ್ತಿಗಳನ್ನು ಅವಲಂಬಿಸುವ ಮೂಲಕ ತಮ್ಮತಮ್ಮ ಜೀವನೋಪಾಯವನ್ನು ಕಂಡು ಕೊಳ್ಳತೊಡಗಿದ್ದಾರೆ. ಯಾರಿಗೂ ತಮ್ಮ ಹಿರಿಯರಿಂದ ಬಳುವಳಿಯಾಗಿ ಬಂದ ಜಮೀನಿನಲ್ಲಿ ಕೃಷಿ ಚಟುವಟಿಕೆ ನಡೆಸಲು ಆಸಕ್ತಿ ಇಲ್ಲವಾಗಿದೆ.

ಹಳ್ಳಿಗಳಿಂದ ನಗರಗಳಿಗೆ ವಲಸೆ ಹೋಗಿ ಅಲ್ಲಿ ಯಾವುದಾದರೊಂದು ಉದ್ಯೋಗದಲ್ಲಿ ತೊಡಗಿಕೊಂಡಿದ್ದವರು ಕಳೆದ ವರ್ಷ ಕೊರೊನಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿದಾಗ ತಮ್ಮ ಹುಟ್ಟೂರಿಗೆ ವಾಪಸಾಗಿದ್ದರು. ಈ ಸಂದರ್ಭದಲ್ಲಿ ಅವೆಷ್ಟೋ ವರ್ಷ ಗಳಿಂದ ಪಾಳುಬಿದ್ದಿದ್ದ ಕೃಷಿ ಭೂಮಿಯನ್ನು ಹದಗೊಳಿಸಿ ಕೃಷಿ ಚಟು ವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಇದರಿಂದಾಗಿ ಸಹಜವಾಗಿಯೇ ಕೃಷಿ ಬೆಳೆಗಳ ಉತ್ಪಾದನೆ ಹೆಚ್ಚಿತ್ತು. ಈ ಬೆಳವಣಿಗೆ ದೇಶದ ಸದ್ಯದ ವಾಸ್ತವ ಚಿತ್ರಣಕ್ಕೆ ಕನ್ನಡಿ ಹಿಡಿದದ್ದಂತೂ ಸುಳ್ಳಲ್ಲ.

ಕೃಷಿ ವಲಯ ಎದುರಿಸುತ್ತಿರುವ ನೈಜ ಸಮಸ್ಯೆಗಳ ಬಗೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಕಾರವಾಗಲಿ, ಕೃಷಿ ಸಂಬಂಧಿತ ಸಂಶೋಧನ ಸಂಸ್ಥೆಗಳಾಗಲಿ ಗಂಭೀರವಾದ ಪ್ರಯತ್ನಗಳನ್ನೇ ನಡೆಸುತ್ತಿಲ್ಲ. ಸರಕಾರ ಕೈಗೊಳ್ಳುತ್ತಿರುವ ಕ್ರಮಗಳೆಲ್ಲವೂ ಕೇವಲ ತಾತ್ಕಾಲಿಕ ಪರಿಹಾರ ಗಳಾಗಿವೆಯೇ ವಿನಾ ರೈತರನ್ನು ಸಮಸ್ಯೆಗಳಿಂದ ಮುಕ್ತರನ್ನಾಗಿಸುವಲ್ಲಿ ಸಹಕಾರಿ ಆಗಿಲ್ಲ. ಸರಕಾರ ಒಂದಿಷ್ಟು ಯೋಜನೆ, ಪರಿಹಾರ ಕ್ರಮಗಳನ್ನು ಘೋಷಿಸಿ ಕೃಷಿಕರ ಮೂಗಿಗೆ ಬೆಣ್ಣೆ ಸವರುವ ಬದಲು ರೈತರು ಎದುರಿಸುತ್ತಿರುವ ನೈಜ ಸಮಸ್ಯೆಗಳು, ಇದರ ಪಶ್ಚಾತ್‌ ಪರಿಣಾಮಗಳ ಬಗೆಗೆ ಆಳವಾದ ಚಿಂತನೆ ನಡೆಸಿ ಸಮಗ್ರವಾದ ಕಾರ್ಯಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಈ ದಿಸೆಯಲ್ಲಿ ಕೃಷಿ ವಿವಿಗಳು, ಸಂಶೋಧನ ಸಂಸ್ಥೆಗಳೂ ಸರಕಾರದೊಂದಿಗೆ ಕೈಜೋಡಿಸಬೇಕಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.