ತುಳು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವ: ಲಿಂಬಾವಳಿ
Team Udayavani, Mar 7, 2021, 11:10 PM IST
ಬೆಂಗಳೂರು: ದ್ರಾವಿಡ ಭಾಷೆಯಲ್ಲಿ ಒಂದಾಗಿರುವ ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಏರ್ಪಡಿಸಿದ್ದ “ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ’ ಕಾರ್ಯಕ್ರಮದಲ್ಲಿ ಮಾತನಾಡಿ, ತುಳು, ಕೊಡವ, ಬಂಜಾರಾ ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಗತ್ಯಬಿದ್ದರೆ ತುಳು ಭಾಷಿಕರ ನಿಯೋಗದೊಂದಿಗೆ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ಚರ್ಚಿಸಲಾಗುವುದು. ಮಲೆಯಾಳಂ ಭಾಷೆಗೆ ಮೂಲ ಲಿಪಿ ಕೊಟ್ಟಿರುವ ತುಳು ಭಾಷೆಗೆ ತನ್ನದೇ ಆದ ಸ್ಥಾನಮಾನ ದೊರಕಬೇಕು, ನಮ್ಮ ವಿದ್ಯಾರ್ಥಿಗಳು ಐಚ್ಚಿಕವಾಗಿ ಪ್ರಂಚ್ ಭಾಷೆ ಓದುತ್ತಾರೆ. ಅದರ ಬದಲಿಗೆ ತುಳು ಭಾಷೆಯನ್ನು ಐಚ್ಛಿಕವಾಗಿ ಓದಿದರೆ ಸಂಸ್ಕೃತಿ ಹಾಗೂ ಸಂಸ್ಕಾರ ಪರಿಚಯವಾಗಲು ಸಾಧ್ಯ ಎಂದರು.
ಇದನ್ನೂ ಓದಿ :ಟೋಕಿಯೊ ಒಲಿಂಪಿಕ್ಸ್ : ವಿನೇಶ್ ಸ್ವರ್ಣ ವಿಜಯ; ಸಿಂಧು ಪರಾಜಯ
ತುಳು ರಾಜ್ಯ ಬೇಕಿಲ್ಲ;ಭಾಷೆ ಸ್ಥಾನಮಾನ ಕೊಡಿಸಿ
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಮಾತನಾಡಿ, ತುಳು ಭಾಷೆಯ 54 ಶಾಸನಗಳಲ್ಲಿ 3 ಶಾಸನಗಳಲ್ಲಿ ತುಳು ರಾಜ್ಯದ ಉಲ್ಲೇಖವಿದೆ. ಆದರೆ ನಮಗೆ ತುಳು ರಾಜ್ಯ ಬೇಕಾಗಿಲ್ಲ, ತುಳು ಭಾಷೆ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ, ತುಳು ಸಾಹಿತ್ಯ ಭವನ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ನೀಡುವಂತೆ ಬೇಡಿಕೆ ಮಂಡಿಸಿದರು.
ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಚಿಂತಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಚಿವ ಎಸ್. ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ