ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ, ಭೂ ಕಂದಾಯ ವಿಧೇಯಕ ಅಂಗೀಕಾರ
Team Udayavani, Sep 19, 2022, 8:50 PM IST
ವಿಧಾನ ಪರಿಷತ್: ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ “ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ-2022′ ಹಾಗೂ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022ಕ್ಕೆ ಸೋಮವಾರ ಮೇಲ್ಮನೆ ಕೂಡ ಅಂಗೀಕರಿಸಿತು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ವಿಧೇಯಕವನ್ನು ಪ್ರಸ್ತಾಪಿಸಿದರು. ಈ ಕಾಯ್ದೆ ಅಡಿ ದೂರು ದಾಖಲಾದರೆ, ಇನ್ಮುಂದೆ ಹಣಕಾಸು ಸಂಸ್ಥೆಗಳ ಮುಖ್ಯಸ್ಥರು, ನಿರ್ದೇಶಕರ ವಿರುದ್ಧದ ಪ್ರಕರಣಗಳಲ್ಲಿನ ಅಪರಾಧವು ಜಾಮೀನುರಹಿತ ಎಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಒಂದು ಹಣಕಾಸು ಸಂಸ್ಥೆಯ ವಿರುದ್ಧ ಹಲವು ಕಡೆ ಎಫ್ಐಆರ್ಗಳು ದಾಖಲಾಗಿದ್ದರೆ, ಅದನ್ನು ಒಂದೇ ಪ್ರಕರಣವಾಗಿ ವಿಲೀನಗೊಳಿಸಲು ಅವಕಾಶ ಮಾಡಿಕೊಡಲಾಗಿದೆ.
ಈ ಪ್ರಕರಣಗಳ ವಿರುದ್ಧ ಸಾಮಾನ್ಯ ತನಿಖೆ ಕೈಗೊಳ್ಳಲು ಆದೇಶಿಸಬಹುದು. ಇದಕ್ಕಾಗಿ ಒಬ್ಬ ಅಧಿ ಕಾರಿಯನ್ನು ನೇಮಕ ಮಾಡುವ ಅಧಿ ಕಾರವನ್ನು ಸರ್ಕಾರಕ್ಕೆ ನೀಡಬಹುದು ಎಂದು ತಿದ್ದುಪಡಿ ವಿಧೇಯಕದಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಸಮ್ಮತಿಯೊಂದಿಗೆ ವಿಶೇಷ ನ್ಯಾಯಾಲಯ ಕೂಡ ಸ್ಥಾಪಿಸಬಹುದಾಗಿದೆ.
ಮುಖ್ಯವಾಗಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಸೇರಿ ಹಣಕಾಸು ಸಂಸ್ಥೆಗಳ ವಂಚನೆಗಳಿಂದ ಠೇವಣಿದಾರರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಿಗೆ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು
ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ
ನೀತಿ ಸಂಹಿತೆ ಸಡಿಲಿಕೆ: ಆಯೋಗಕ್ಕೆ ಪತ್ರ ಬರೆದು ರಾಜ್ಯ ಸರಕಾರ ಮನವಿ
Siddaramaiah ಚುನಾವಣ ಪ್ರಚಾರ: 14 ಲಕ್ಷ ಜನರನ್ನು ಉದ್ದೇಶಿಸಿ ಸಿಎಂ ಮಾತು
D.K. Shivakumar ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ