ಸಾರಿಗೆ ನೌಕರರೊಂದಿಗೆ ಸರ್ಕಾರದ ಸಂಧಾನ ಸಕ್ಸಸ್ : ಇಂದಿನಿಂದಲೇ ಬಸ್ ಸಂಚಾರ ಆರಂಭ
Team Udayavani, Dec 13, 2020, 6:51 PM IST
ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಇಂದು ಅಂತ್ಯಗೊಂಡಿದೆ.
ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಿದ್ದರು ಆದರೆ ಸರ್ಕಾರ ಮುಷ್ಕರವನ್ನು ನಿಲ್ಲಿಸಲು ನಾನಾ ಪ್ರಯತ್ನ ನಡೆಸಿದರು ಪ್ರಯೋಜನವಾಗಲಿಲ್ಲ ಅಂತಿಮವಾಗಿ ಸರಕಾರ ಸಾರಿಗೆ ನೌಕರರ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವುದಾಗಿ ಚರ್ಚೆಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮುಖಂಡರು ಮುಷ್ಕರ ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.
ಸಾರಿಗೆ ನೌಕರರ ಮುಖಂಡರು ಸರಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು ಅದರಲ್ಲಿ ಎಂಟು ಬೇಡಿಕೆಗಳಿಗೆ ಒಪ್ಪಿಗೆ ನೀಡಿದ್ದಾರೆ.
ಹಾಗಾದರೆ ಚರ್ಚೆಯಲ್ಲಿ ಸರಕಾರ ಯಾವೆಲ್ಲ ನಿರ್ಣಯಗಳನ್ನು ಕೈಗೊಂಡಿದೆ ನೋಡೋಣ ;
– ನಿಗಮ ನೌಕರರಿಗೆ ಅರೋಗ್ಯ ಸಂಜೀವಿನಿ ವಿಮಾ ಯೋಜನೆಯನ್ನು ಅಳವಡಿಸಲು ತೀರ್ಮಾನಿಸಲಾಗಿದೆ.
– ಕೋವಿಡ್ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂಪಾಯಿಗಳನ್ನು ನೀಡಲಾಗುವುದು.
– ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ತೀರ್ಮಾನ.
– ತರಬೇತಿಯಲ್ಲಿರುವ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ತೀರ್ಮಾನ
– ನಿಗಮದಲ್ಲಿ ಹೆಚ್ ಆರ್ ಎಂ ಎಸ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
– ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಿದ ಸಂದರ್ಭ ಅವರಿಗೆ ಸೂಕ್ತ ಭತ್ಯೆ ನೀಡಲು ತೀರ್ಮಾನ.
– ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆಯನ್ನು ರೂಪಿಸುವುದು.
– ಸರಕಾರದ ಆರ್ಥಿಕ ಸುಧಾರಣೆಯ ಬಳಿಕ ೬ ನೇ ವೇತನ ಆಯೋಗ ಶಿಫಾರಸ್ಸು ಮಾಡಲಾಗುವುದು.
ಇಂದಿನಿಂದಲೇ ಬಸ್ ಸಂಚಾರ ಆರಂಭ
ಸಾರಿಗೆ ನೌಕರರ ಮುಖಂಡರು ಮುಷ್ಕರ ಹಿಂಪಡೆದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದಲೇ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದ್ದಾರೆ, ಅಲ್ಲದೆ ಸಾರಿಗೆ ನೌಕರರು ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ