ನಾಗಮೋಹನ ದಾಸ್ ವರದಿ ಅಂಗೀಕರಿಸಲು ಒತ್ತಾಯಿಸಿ ಪ್ರತಿಭಟನೆ
Team Udayavani, Mar 22, 2022, 12:20 PM IST
ಹುಣಸೂರು: ನ್ಯಾಯಾಮೂರ್ತಿ ನಾಗಮೋಹನದಾಸ್ ವರದಿಯನ್ನು ಶೀಘ್ರವೇ ಅಂಗೀಕರಿಸಬೇಕೆಂದು ಆಗ್ರಹಿಸಿ ಹಾಗೂ ಬೆಂಗಳೂರಿನಲ್ಲಿ ಪರಮ ಪೂಜ್ಯ ಪ್ರಸನ್ನಾನಂದ ಪುರಿ ಸ್ವಾಮಿಜಿಗಳು ನಡೆಸುತ್ತಿರುವ ಧರಣಿ ಬೆಂಬಲಿಸಿ ಹುಣಸೂರಿನ ಪ್ರತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಮತ್ತು ಪಕ್ಷಾತೀತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಸಂವಿಧಾನ ಸರ್ಕಲ್ ನಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ವರದಿ ಜಾರಿಗೊಳಿಸಲು ವಿಫಲವಾಗಿರುವ ಸರಕಾರದ ವಿರುದ್ದ ಧಿಕ್ಕಾರ ಮೊಳಗಿಸಿದರು.
ಈ ವೇಳೆ ಮಾತನಾಡಿದ ದಸಂಸ ಮುಖಂಡರಾದ ನಿಂಗರಾಜಮಲ್ಲಾಡಿ, ಹರಿಹರ ಆನಂದಸ್ವಾಮಿ, ಕಲ್ಕುಣಿಕೆ ಬಸವರಾಜು ಮತ್ತಿತರರು ನ್ಯಾಯಾಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡುವಂತೆ ಆದೇಶಿಸುತ್ತು. ಇದಕ್ಕಾಗಿ ಸರಕಾರಿ ಯಂತ್ರ ಸಿಬ್ಬಂದಿಗಳು ಸೇರಿದಂತೆ ಕೋಟ್ಯಾಂತರ ರೂ ವ್ಯಯಿಸಿದೆ. ಸಮಿತಿ ವರದಿ ನೀಡಿ ಎರಡು ವರ್ಷಗಳೇ ಕಳೆದರೂ ಜಾರಿಗೆ ಬಿಜೆಪಿ ಸರಕಾರ ಹಿಂದೇಟು ಹಾಕುತ್ತಿದ್ದು, ಸಾರ್ವಜನಿಕರ ತೆರಿಗೆ ಹಣ ಪೋಲಾದಂತಾಗಿದ್ದು, ತಕ್ಷಣವೇ ವರದಿ ಅಂಗೀಕರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಸ್ವಾಮಿಗೌಡ, ಮುಖಂಡರಾದ ನಿಲುವಾಗಿಲು ಪ್ರಭಾಕರ್, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಕುನ್ನೇಗೌಡ, ಗಣೇಶ್ ಕರಿಯಪ್ಪಗೌಡ, ಕುಮಾರ್, ಸ್ವಾಮಿನಾಯಕ .ಡಿ.ಕುಮಾರ್, ಶಿವಣ್ಣ, ಮಯೂರ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್