ಪ್ರತಿಭಟನೆ; ರೈತರಿಂದ ರಸಗೊಬ್ಬರ ಲೂಟಿ; ಕಾಂಗ್ರೆಸ್ ಶಾಸಕ ಸೇರಿ ಹಲವರ ವಿರುದ್ಧ ದೂರು
ಲೂಟಿಯಲ್ಲಿ ಭಾಗಿಯಾದವರನ್ನು ಗುರುತಿಸಲು ವಿಡಿಯೋವನ್ನು ಪರಿಶೀಲಿಸಲಾಗುತ್ತಿದೆ ...
Team Udayavani, Nov 12, 2022, 3:01 PM IST
ಭೋಪಾಲ್(ಮಧ್ಯಪ್ರದೇಶ): ರಸಗೊಬ್ಬರ ವಿತರಣಾ ಕೇಂದ್ರದೊಳಗೆ ನುಗ್ಗಿ ಯೂರಿಯಾವನ್ನು ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಕೆಲವು ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಾಗಿರುವ ಘಟನೆ ರಟ್ಲಾಮ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಕಳೆದ 8 ವರ್ಷಗಳಲ್ಲಿ ಆರ್ಥಿಕತೆ ಬಲಪಡಿಸುವಲ್ಲಿ ಉತ್ತಮ ಕೆಲಸವಾಗಿದೆ: ಅಮಿತ್ ಶಾ
ತಮಗೆ ರಸಗೊಬ್ಬರವನ್ನು ವಿತರಿಸುತ್ತಿಲ್ಲ ಎಂದು ರಟ್ಲಾಮ್ ಜಿಲ್ಲೆಯ ರೈತರು ಆರೋಪಿಸಿದ ನಂತರ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ. ಗುರುವಾರ ಸಂಜೆ ಕಾಂಗ್ರೆಸ್ ಶಾಸಕ ಮನೋಜ್ ಚಾವ್ಲಾ, ಕಾಂಗ್ರೆಸ್ ಮುಖಂಡ ಯೋಗೇಂದ್ರ ಸಿಂಗ್ ಜಡೋನ್ ಹಾಗೂ ರೈತರು ಘಟನೆಯಲ್ಲಿ ಶಾಮೀಲಾಗಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಲೂಟಿ ಪ್ರಕರಣವನ್ನು ದಾಖಲಿಸಲಾಗಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಲೂಟಿಯಲ್ಲಿ ಭಾಗಿಯಾದವರನ್ನು ಗುರುತಿಸಲು ವಿಡಿಯೋವನ್ನು ಪರಿಶೀಲಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಜಿಲ್ಲೆಯಲ್ಲಿ ಯೂರಿಯಾ ಕೊರತೆ ಇಲ್ಲ. ರಸಗೊಬ್ಬರವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸೂರ್ಯವಂಶಿ ತಿಳಿಸಿದ್ದಾರೆ. ರಸಗೊಬ್ಬರ ವಿತರಣಾ ಕೇಂದ್ರದ ಬಳಿ ಕೆಲವು ರೈತರು ಕಾಯುತ್ತಿದ್ದು, ಈ ಸಂದರ್ಭದಲ್ಲಿ ಯೂರಿಯಾ ವಿತರಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಾಸಕ ಚಾವ್ಲಾ ಅವರು ಆಗಮಿಸಿದ ನಂತರ ಲೂಟಿ ಘಟನೆ ನಡೆದಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ