ಮಹಾರಾಷ್ಟ್ರ ನಾಯಕರ ಪ್ರಚೋದನಕಾರಿ ಹೇಳಿಕೆ ಸರಿಯಲ್ಲ: ಪ್ರಹ್ಲಾದ್ ಜೋಶಿ
ಜನರು ಶಾಂತಿ, ನೆಮ್ಮದಿ, ಅಭಿವೃದ್ಧಿ ಬಯಸುತ್ತಿದ್ದಾರೆ...
Team Udayavani, Nov 26, 2022, 9:40 PM IST
ಹುಬ್ಬಳ್ಳಿ: ಜನರು ಶಾಂತಿ, ನೆಮ್ಮದಿ, ಅಭಿವೃದ್ಧಿ ಬಯಸುತ್ತಿದ್ದಾರೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿಚಾರವಾಗಿ ಮಹಾರಾಷ್ಟ್ರದ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಮತ್ತು ಮಹಾರಾಷ್ಟ್ರಗಡಿವಿವಾದ ಬಗೆಹರಿದ ವಿಷಯ. ಅದನ್ನು ಮುಂದಿಟ್ಟುಕೊಂಡು ಕೆಲವರು ಪ್ರಚೋದನಾಕಾರಿ ಹೇಳಿಕೆ ನೀಡುತ್ತ, ಜನರ ನೆಮ್ಮದಿ ಕದಡುವುದು ಸಮಂಜಸವಲ್ಲ. ಈ ಬಾರಿ ಅಲ್ಲಿಯ ರಾಜಕಾರಣಿಗಳೇ ನಮ್ಮವರನ್ನು ಪ್ರಚೋದಿಸಿದ್ದಾರೆ. ಅವರು ಬಸ್ಸಿಗೆ ಮಸಿ ಬಳಿದರೆಂದು ನಾವು ಬಳಿಯುವುದು, ನಾವು ಮಸಿ ಬಳಿದೆವೆಂದು ಅವರು ಬಳಿಯುವುದು. ಇವೆಲ್ಲ ಅರ್ಥಹೀನ ಸಂಗತಿ ಎಂದರು.
ದೇಶ ಒಂದು, ನಾವೆಲ್ಲರೂ ಒಂದು ಎನ್ನುವ ಮನೋಭಾವದಿಂದ ಬದುಕಬೇಕು. ಯಾರೇ ಆಗಲಿ ತಕ್ಷಣ ಪ್ರಚೋದನಕಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಎರಡೂ ರಾಜ್ಯದವರು ಪರಸ್ಪರ ಹೊಂದಾಣಿಕೆಯಿಂದ ನೆಲೆಕಂಡುಕೊಂಡು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಅಲ್ಲಿಯ ಹಳ್ಳಿ ಮಂದಿ ಇಲ್ಲಿ ಬರಲ್ಲ, ಇಲ್ಲಿಯವರು ಅಲ್ಲಿಗೆ ಹೋಗಲ್ಲ. ರಾಜಕೀಯವಾಗಿ ಇಂತಹ ಹೇಳಿಕೆಗಳಿಂದ ಸಹ ಜನ ಬೇಸತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ
ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ
ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ಹೊಸ ಸೇರ್ಪಡೆ
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ನನ್ನ ಕ್ಷೇತ್ರದ ಮೇಲೇಕೆ ಕಣ್ಣು: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ