ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 


Team Udayavani, Jul 6, 2022, 7:30 AM IST

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ: ಪೌಲ್‌ ಮೊಬೈಲ್‌ ಸಿಐಡಿ ವಶಕ್ಕೆ 

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಸೋಮವಾರ ಬಂಧನಕ್ಕೆ ಒಳಗಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ಅವರನ್ನು ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಅವರ ಮೊಬೈಲ್‌ ಫೋನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಮೊಬೈಲ್‌ನಲ್ಲಿ ಇರುವ ಸಾಕ್ಷ್ಯಗಳನ್ನು ಅಮೃತ್‌ ಪೌಲ್‌ ನಾಶಪಡಿಸಿದ್ದಾರೆ. ಹೀಗಾಗಿ ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರಲ್ಲಿ ಇರುವ ದಾಖಲೆಗಳನ್ನು ರಿಟ್ರೀವ್‌ ಮಾಡಿದ ಬಳಿಕ ಅವರು ಯಾರೊಂದಿಗೆಲ್ಲ ವ್ಯವಹಾರ ನಡೆಸುತ್ತಿದ್ದರು ಎಂಬಿತ್ಯಾದಿ ಸಾಕ್ಷ್ಯಗಳು ಲಭ್ಯವಾಗಲಿವೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ ಡಿವೈಎಸ್ಪಿ ಶಾಂತಕುಮಾರ್‌ ಮೊಬೈಲನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ರಿಟ್ರೀವ್‌ ಮಾಡಲಾಗಿದೆ. ಈ ವೇಳೆ ಕೆಲವು ಆಡಿಯೋಗಳು ಲಭ್ಯವಾಗಿವೆ. ಅಮೃತ್‌ ಪೌಲ್‌ ಮತ್ತು ಶಾಂತಕುಮಾರ್‌ ನಡುವಣ ಸಂಭಾಷಣೆಯೂ ಇದರಲ್ಲಿ ಸೇರಿದೆ. ಅದರಲ್ಲಿ ಅಮೃತ್‌ ಪೌಲ್‌, “ಒಎಂಆರ್‌ ಶೀಟ್‌ಗಳನ್ನು ಸಂಗ್ರಹಿಸಿಟ್ಟಿದ್ದ ಕೊಠಡಿ ಮತ್ತು ಕಿಟ್‌ ಬಾಕ್ಸ್‌ನ ಪಾಸ್‌ವರ್ಡ್‌ ಮತ್ತು ಕೀ ತೆಗೆದುಕೊಂಡು ಏನು ಬೇಕಾದರೂ ಮಾಡಿಕೋ. ಆದರೆ ಮಾತುಕತೆಯಂತೆ ಹಣ ನೀಡಬೇಕು ಅಷ್ಟೇ’ ಎಂದು ಬೇಡಿಕೆ ಮಂಡಿಸಿರುವುದು ಬಹಿರಂಗವಾಗಿದೆ. ಇದಾದ ಬೆನ್ನಲ್ಲೇ ಶಾಂತಕುಮಾರ್‌ 5 ಕೋಟಿ ರೂ.ಗಳನ್ನು ಅಮೃತ್‌ ಪೌಲ್‌ ಸೂಚಿಸಿದ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಆದರೆ ಅವು ಯಾರ ಖಾತೆಗಳು ಎಂಬುದು ಪತ್ತೆಯಾಗಬೇಕಿದೆ. ಹೀಗಾಗಿ ಸಂಬಂಧಿಸಿದ ಬ್ಯಾಂಕ್‌ಗೆ ಪತ್ರ ಬರೆಯಲಾಗಿದೆ. ಅಲ್ಲಿಂದ ಮಾಹಿತಿ ಬಂದ ಬಳಿಕ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಎಡಿಜಿಪಿ ನೇತೃತ್ವದಲ್ಲಿ ತನಿಖೆ
ಅಮೃತ್‌ ಪೌಲ್‌ ಅವರನ್ನು ಸಿಐಡಿ ಎಡಿಜಿಪಿ ಉಮೇಶ್‌ ಕುಮಾರ್‌ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶೇಖರ್‌ ವಿಚಾರಣೆ ನಡೆಸಲು ಮುಂದಾಗಿದ್ದರು. ಆದರೆ ಅಮೃತ್‌ ಪೌಲ್‌ ತಾನೊಬ್ಬ ಎಡಿಜಿಪಿ ಶ್ರೇಣಿ ಅಧಿಕಾರಿಯಾಗಿರುವುದರಿಂದ ನಿನ್ನಿಂದ ವಿಚಾರಣೆಗೆ ಒಳಪಡುವುದಿಲ್ಲ ಎಂದು ವರಸೆ ತೆಗೆದಿದ್ದರು. ಬಳಿಕ ಎಡಿಜಿಪಿ ಉಮೇಶ್‌ ಕುಮಾರ್‌ ಅವರೇ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಶಾಂತಕುಮಾರ್‌ ಮೇಲೆ ಆರೋಪ
ವಿಚಾರಣೆ ಸಂದರ್ಭ ಪೌಲ್‌, ಸ್ಟ್ರಾಂಗ್‌ ರೂಮ್‌ ಕೀಲಿಕೈ ಶಾಂತ ಕುಮಾರ್‌ಗೆಕೊಟ್ಟದ್ದು ನಿಜ. ಆತ ಒಎಂಆರ್‌ ಶೀಟ್‌ ಪರಿಶೀಲನೆಯ ನೆಪದಲ್ಲಿ ಕೀಲಿಕೈ ಪಡೆದಿದ್ದ. ಆದರೆ ಆತ ಅಕ್ರಮ ನಡೆಸುತ್ತಾನೆ ಎನ್ನುವುದು ಗೊತ್ತಿರಲಿಲ್ಲ  ಎಂದು ಶಾಂತಕುಮಾರ್‌ ವಿರುದ್ಧವೇ ಆರೋಪ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಜುನಾಥ್‌ ಮನೆ ಶೋಧ
ಮಂಗಳವಾರ ಸೆರೆಯಾಗಿರುವ ಐಎಎಸ್‌ ಅಧಿಕಾರಿ ಜೆ. ಮಂಜುನಾಥ್‌ಗೆ ಸೇರಿದ ಫ್ಲ್ಯಾಟ್‌ನಲ್ಲಿ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.  ಯಶವಂತಪುರದ ಸಲಾರ್‌ ಪುರಿಯಾ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಸುಮಾರು ಐದೂವರೆ ತಾಸುಗಳ ಕಾಲ ಶೋಧಿಸಲಾಗಿದೆ. ಈ ವೇಳೆ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ಡಿವೈಎಸ್ಪಿ ನೇತೃತ್ವದಲ್ಲಿ 8 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ಲಂಚಕ್ಕೆ ಸಂಬಂಧಿಸಿ ದಾಖಲೆ ಅಥವಾ ಸಾಕ್ಷ್ಯ ಇದೆಯೇ ಎಂದು ಶೋಧಿಸಲಾಗಿದೆ ಎಂಬುದಾಗಿ ಎಸಿಬಿ ಮೂಲಗಳು ತಿಳಿಸಿವೆ.

 

 

 

 

ಟಾಪ್ ನ್ಯೂಸ್

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.