ಪಿಎಸ್ ಐ ನೇಮಕಾತಿ ಹಗರಣ: ವಿಧಾನಸಭೆಯಲ್ಲಿ ಚರ್ಚೆಗೆ ಸ್ಪೀಕರ್ ಅವಕಾಶ
ಸಿದ್ದರಾಮಯ್ಯ ಆಗ್ರಹಕ್ಕೆ ಬಿಜೆಪಿ ಸದಸ್ಯರಿಂದ ಭಾರಿ ವಿರೋಧ
Team Udayavani, Sep 15, 2022, 4:17 PM IST
ವಿಧಾನಸಭೆ :ಪಿಎಸ್ ಐ ನೇಮಕಾತಿ ಹಗರಣ ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿದ್ದು, ನಿಯಮ 69 ರ ಅನ್ವಯ ಚರ್ಚೆ ನಡೆಸುವುದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ಮಾಡಿಕೊಟ್ಟಿದ್ದಾರೆ.
ಪ್ರಶ್ನೋತ್ತರ ಕಲಾಪ ಮುಕ್ತಾಯವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈ ವಿಚಾರದ ಬಗ್ಗೆ ನಿಲುವಳಿ ಸೂಚನೆ ಮಂಡಿಸುವುದಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರಿಂದ ಭಾರಿ ವಿರೋಧ ವ್ಯಕ್ತವಾಯಿತು. ಪ್ರಕರಣದ ತನಿಖೆ ನಡೆಯುವಾಗ ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸುವುದು ಎಷ್ಟು ಸೂಕ್ತ ? ಎಂದು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶ್ನಿಸಿದರು.
ಎಡಿಜಿಪಿ ದರ್ಜೆಯ ಅಧಿಕಾರಿಗಳನ್ನು ನಾವು ಬಂಧಿಸಿದ್ದೇವೆ. ಇತಿಹಾದಲ್ಲೇ ಇಷ್ಟು ಪಾರದರ್ಶಕ ತನಿಖೆ ನಡೆದಿಲ್ಲ ಎಂದು ವಾದಿಸುತ್ತಾ, ” ದೇಶಪಾಂಡೆಯವರೇ ನಿಮಗೆ” ನಾಚಿಕೆಯಾಗಬೇಕು ಎಂದು ಪದ ಬಳಸಿದರು. ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ ಉಭಯ ಪಕ್ಷದ ಸದಸ್ಯರು ತಾಳ್ಮೆಕಳೆದುಕೊಳ್ಳುವಂತಾಯಿತು.
ವಿಪಕ್ಷ ನಾಯಕ ಸಿದ್ದರಾಮಯ್ಯನವರಂತೂ 2006 ರಿಂದ ಇಲ್ಲಿಯವರೆಗೆ ನಡೆದ ಎಲ್ಲ ಪೊಲೀಸ್ ನೇಮಕಗಳ ಬಗ್ಗೆ ತನಿಖೆ ನಡೆಸಿ. ನನ್ನ ಕಾಲದಲ್ಲಿ ಆಗಿದ್ದು ಎಂದು ಯಾರೂ ಬೆರಳು ಮಾಡುವುದು ಬೇಡ ಎಂದು ಸವಾಲು ಹಾಕಿದರು.
ಕೊನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ನಾನು ಈ ಬಗ್ಗೆ ಚರ್ಚೆಗೆ ಅವಕಾಶ ನೀಡುತ್ತೇನೆ. ಆದರೆ ನಿಲುವಳಿ ಸೂಚನೆಯನ್ನು ನಿಯಮ 69ಕ್ಕೆ ಪರಿವರ್ತಿಸುತ್ತೇನೆ. ನಾಳೆ ಈ ಬಗ್ಗೆ ಚರ್ಚೆ ನಡೆಸೋಣ ಎಂದು ವಿವಾದಕ್ಕೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್