ಪಿಯು ಫಲಿತಾಂಶ:13ರಿಂದ 9ನೇ ಸ್ಥಾನಕ್ಕೆ ಜಿಗಿದ ಚಿಕ್ಕಬಳ್ಳಾಪುರ ಜಿಲ್ಲೆ
ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲು:ಶೇ.73.74 ರಷ್ಟು ಫಲಿತಾಂಶ ದಾಖಲು
Team Udayavani, Jul 14, 2020, 8:01 PM IST
ಚಿಕ್ಕಬಳ್ಳಾಪುರ: ಕೋವಿಡ್ ಆತಂಕದ ನಡುವೆಯು ದ್ವಿತೀಯ ಪಿಯು ಪರೀಕ್ಷೆ ಬರೆದ ಜಿಲ್ಲೆಯ ವಿದ್ಯಾರ್ಥಿಗಳ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಜಿಲ್ಲೆಯ ಶೈಕ್ಷಣಿಕ ಇತಿಹಾಸದಲ್ಲಿಯೆ ಅತ್ಯುತ್ತಮ ಫಲಿತಾಂಶ ದಾಖಲುಗೊಂಡಿದ್ದು ಕಳೆದ ವರ್ಷ ಶೇ.70.11 ರಷ್ಟು ಫಲಿತಾಂಶ ಪಡೆದು 13ನೇ ಸ್ಥಾನದಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಈ ವರ್ಷ ಬರೋಬರಿ ಶೇ.73.74 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಕ್ರಮಾಂಕದಲ್ಲಿ 9ನೇ ಸ್ಥಾನಕ್ಕೆ ಜಿಗಿದಿದೆ.
ಜಿಲ್ಲೆಯ ಹಿಂದಿನ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶಗಳನ್ನು ಅವಲೋಕಿಸಿದರೆ ರಾಜ್ಯ ಕ್ರಮಾಂಕದಲ್ಲಿ 10ರ ಒಳಗೆ ಎಂದೂ ಕೂಡ ಫಲಿತಾಂಶ ಪಡೆದಿರಲಿಲ್ಲ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಾದ 13 ವರ್ಷಗಳ ಪೈಕಿ ಇದೇ ಮೊದಲಿಗೆ ರಾಜ್ಯ ಕ್ರಮಾಂಕದಲ್ಲಿ ಉತ್ತಮ ಫಲಿತಾಂಶ ಪಡೆದುಈ ವರ್ಷ 9ನೇ ಸ್ಥಾನಕ್ಕೆ ಏರಿರುವುದು ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಸಂತಸ ಮನೆ ಮಾಡಿದೆ.
ಶೇ.73.73 ರಷ್ಟು ಫಲಿತಾಂಶ:
2020ನೇ ಸಾಲಿನಲ್ಲಿ ಜಿಲ್ಲಾದ್ಯಂತ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೊಸದಾಗಿ ಪರೀಕ್ಷೆ ಬರೆದಿದ್ದ ಒಟ್ಟು 11,252 ವಿದ್ಯಾರ್ಥಿಗಳ ಪೈಕಿ 8,297 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.73.74 ರಷ್ಟು ಫಲಿತಾಂಶದ ಮೂಲಕ ವಿಶೇಷ ಸಾಧನೆ ಮಾಡಿದ್ದು ಕಳೆದ ವರ್ಷಕ್ಕಿಂತ ಈ ಬಾರಿ ಶೇ.4 ರಷ್ಟು ಫಲಿತಾಂಶ ಹೆಚ್ಚಾಗಿ ಪಡೆದಿದ್ದಾರೆ. ಹೊಸ ವಿದ್ಯಾರ್ಥಿಗಳು, ಖಾಸಗಿ ಹಾಗೂ ಪುನರಾವರ್ತಿತ ಸೇರಿ ಒಟ್ಟು 13,144 ವಿದ್ಯಾರ್ಥಿಗಳ ಪೈಕಿ 8,809 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಖಾಸಗಿಯಾಗಿ ಪರೀಕ್ಷೆ ಬರೆದಿದ್ದ ಒಟ್ಟು 274 ವಿದ್ಯಾರ್ಥಿಗಳ ಪೈಕಿ ಕೇವಲ 52 ಮಂದಿ ಮಾತ್ರ ಉತ್ತೀರ್ಣರಾಗಿ ಶೇ.18.98 ರಷ್ಟು ಫಲಿತಾಂಶ ಪಡೆದರೆ ಪುನಾವರ್ತಿತ ಒಟ್ಟು 1,618 ವಿದ್ಯಾರ್ಥಿಗಳ ಪೈಕಿ ಕೇವಲ 460 ಮಂದಿ ಉತ್ತೀರ್ಣರಾಗಿ ಶೇ.28.43 ರಷ್ಟು ಫಲಿತಾಂಶ ಪಡೆದಿದ್ದಾರೆ.
ಜಿಲ್ಲೆಯಲ್ಲಿ ಬಾಲಕಿಯರೇ ಮೇಲುಗೈ
ಈ ಜಿಲ್ಲೆಯಲ್ಲಿ ಈ ವರ್ಷವು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಾಲಕರಗಿಂತ ಎಂದಿನಂತೆ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುವ ಮೂಲಕ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ. ಒಟ್ಟು ಪರೀಕ್ಷೆ ಬರೆದಿದ್ದ 6,445 ಮಂದಿ ಬಾಲಕರ ಪೈಕಿ 3994 ಮಂದಿ ಉತ್ತೀರ್ಣರಾಗಿ ಶೇ. 61.97 ರಷ್ಟು ಫಲಿತಾಂಶ ದಾಖಲಿಸಿದರೆ ಪರೀಕ್ಷೆ ಬರೆದಿದ್ದ ಒಟ್ಟು 6,699 ಬಾಲಕಿಯರ ಪೈಕಿ 4,815 ಮಂದಿ ಉತ್ತೀರ್ಣರಾಗಿ ಶೇ.71.88 ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್