‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಪುನೀತ್ ‌ ಹೆಸರು

ಮೈಸೂರು, ಬೆಳಗಾವಿ,ಮಂಗಳೂರು ಹಾಗೂ ತುಮಕೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ

Team Udayavani, Nov 9, 2021, 5:48 PM IST

1-muru

ಬೆಂಗಳೂರು: ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಕಲಬುರಗಿಯಲ್ಲಿ ಇದೇ 11 ರಂದು ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಿಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ತೀರ್ಮಾನಿಸಿದ್ದಾರೆ.

ಇದೇ ತಿಂಗಳ 11 ರಂದು ಕಲಬುರಗಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಉದ್ಯಮಿಯಾಗಿ ಉದ್ಯೋಗ ನೀಡು ಮತ್ತು ಕೈಗಾರಿಕೆ ಅದಾಲತ್ ಕಾರ್ಯಾಗಾರವನ್ನು ಆಯೋಜಿಸಿದೆ.

ಕಾರ್ಯಾಗಾರ ನಡೆಯುವ ವೇದಿಕೆಗೆ “ಪುನೀತ್ ರಾಜ್ ಕುಮಾರ್” ಎಂದು ಹೆಸರಿಟ್ಟು ಆಗಲಿದ ಮೇರು ನಟನೆಗೆ ಗೌರವ ಸಮರ್ಪಣೆ ಸಲ್ಲಿಸಲು ಸಚಿವ ನಿರಾಣಿ ಅವರು ಮುಂದಾಗಿದ್ದಾರೆ.

ಕಲಬುರಗಿ ಮಾತ್ರವಲ್ಲದೆ, ಮುಂದೆ ನಡೆಯಲಿರುವ ಮೈಸೂರು, ಬೆಳಗಾವಿ, ಕರಾವಳಿಭಾಗದ ಮಂಗಳೂರು ಹಾಗೂ ತುಮಕೂರಿನಲ್ಲಿ “ಉದ್ಯಮಿಯಾಗು ಉದ್ಯೋಗ ನೀಡು” ಕಾರ್ಯಕ್ರಮದ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಸರ್ವಸಮ್ಮತದ ತೀರ್ಮಾನವನ್ನು ಸಚಿವರು ತೆಗೆದುಕೊಂಡಿದ್ದಾರೆ.

ಕೇವಲ ಸಿನಿಮಾ ಕ್ಷೇತ್ರಕ್ಕೆ ಗುರುತಿಸಿಕೊಳ್ಳದ ಪುನೀತ್ ರಾಜ್ ಕುಮಾರ್ ಅನೇಕ ಸಮಾಜ‌ ಸೇವೆಗಳಲ್ಲೂ ತೊಡಗಿಸಿಕೊಂಡಿದ್ದರು. ನಿಜ ಜೀವನದಲ್ಲಿ ಪುನೀತ್ ರಾಜ್ ಕುಮಾರ್ ರಾಜಕುಮಾರನಾಗಿಯೇ ಮೆರೆದರು. ಮುಂದಿನ ಯುವಜನಾಂಗಕ್ಕೆ ಅವರ ಹೆಸರು “ಆಜಾರಮರಗೊಳಿಸಲು” ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿರುವುದಾಗಿ ನಿರಾಣಿ ಅವರು ಹೇಳಿದ್ದಾರೆ.

ಯುವಜನತೆಯು ಯಾರೊಬ್ಬರ ಮೇಲೆ ಅವಲಂಬಿತರಾಗದೆ, ಸ್ವಾವಲಂಬಿಗಳಾಗಿ ಬದುಕಬೇಕು ಎಂಬುದು ಅಪ್ಪು ಅವರ ಕನಸಾಗಿತ್ತು. ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಣ್ಣ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಉದ್ಯಮಶೀಲತೆ ತೋರಿದರು.
ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸುವ ಮೂಲಕ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಕೊಂಡಿದ್ದರು. ಹೊಸ ಪ್ರತಿಭೆಗಳಿಗೆ ಮಣೆ ಹಾಕುವ ಮೂಲಕ ಸ್ಯಾಂಡಲ್​ವುಡ್​​ನಲ್ಲಿ ಅವರು ಎಲ್ಲರಿಂದಲೂ ಮೆಚ್ಚುಗೆ ಗಳಿಸಿದ್ದರು ಎಂದು ನಿರಾಣಿ ಅವರು ಕೊಂಡಾಡಿದರು

ಕೇವಲ ಸಿನಿಮಾ ಕ್ಷೇತ್ರವಲ್ಲದೆ, ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು. ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು. ತಾನು ಸಮಾಜಕ್ಕೆ ಈ ಕೊಡುಗೆ ಕೊಟ್ಟಿದ್ದೇನೆ ಎಂದು ಎಲ್ಲೂ ಬಹಿರಂಗಪಡಿಸದೇ ಸಮಾಜ ಸೇವೆ ಮಾಡುತ್ತಿದ್ದರು. ಈ ಮೂಲಕ ದೊಡ್ಡಮನೆಯ ದೊಡ್ಡತನ ಮೆರೆದಿದ್ದರು. ಅಂತಹ ಮೇರುನಟ ನಮಗೆ ಎಂದೆಂದಿಗೂ ಮಾದರಿ ಎಂದು ನಿರಾಣಿ ಕೊಂಡಾಡಿದ್ದಾರೆ.

ಸೋಮವಾರ ನಡೆದ ಪುನೀತ್ ರಾಜ್ ಕುಮಾರ್ ಅವರ 11 ನೇ ದಿನದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಚಿವ ನಿರಾಣಿ ಅವರು ಭಾಗವಹಿಸಿ ಆಗಲಿದ ಯುವನಟನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿದ್ದ ಅವರು ಅಪ್ಪುವಿನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ‌ಗೌರವ ನಮನ ಸಲ್ಲಿಸಿದರು. ಬಳಿಕ ಪುನೀತ್ ರಾಜ್ ಕುಮಾರ್ ಪತ್ನಿ ಶ್ರೀಮತಿ ಅಶ್ವಿನಿ, ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.