ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಅಪ್ಪುಗೆ ಶ್ರದ್ಧಾಂಜಲಿ ; ನಾಳೆ 11ನೇ ದಿನದ ಕಾರ್ಯ
Team Udayavani, Nov 7, 2021, 7:56 PM IST
ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕು,ಚಿಕ್ಕಜಾಜೂರಿನ ಮಾರುತಿ ಚಿತ್ರ ಮಂದಿರದಲ್ಲಿ ಶ್ರದ್ದಾಂಜಲಿ
ಬೆಂಗಳೂರು: ಅಕಾಲಿಕವಾಗಿ ಹೃದಯಾಘಾತದಿಂದ ವಿಧಿವಶರಾದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾನುವಾರ ರಾಜ್ಯಾದ್ಯಂತ 550 ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ದೀಪ ನಮನ ಮತ್ತು ಮೌನಾಚರಣೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.
ಹೆಚ್ಚಿನ ಚಿತ್ರ ಮಂದಿರಗಳಲ್ಲಿ ಮೌನಾಚರಣೆ ಮಾಡಿ, ಕ್ಯಾಂಡಲ್ , ದೀಪಗಳನ್ನು ಹಚ್ಚಿ ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಪುಟಾಣಿಗಳು, ಚಿತ್ರ ಪ್ರೇಮಿಗಳು ಸೇರಿ ಅಭಿಮಾನಿಗಳು ಈ ವೇಳೆ ಭಾವುಕರಾಗಿ ಕಣ್ಣೇರಿಟ್ಟರು.
ನಾಳೆ 11 ನೇ ದಿನದ ಕಾರ್ಯ
ಸೋಮವಾರ ಪುನೀತ್ ಅವರ 11 ನೇ ದಿನದ ಕಾರ್ಯ ನಡೆಯಲಿದ್ದು, ಅಭಿಮಾನಿಗಳಿಗೆ ಬೆಳಗ್ಗೆ ಕಂಠೀರವ ಸ್ಟುಡಿಯೋ ಗೆ ಪ್ರವೇಶ ನೀಡಲಾಗುತ್ತಿಲ್ಲ. ಕುಟುಂಬ ಸದಸ್ಯರು ಕಾರ್ಯ ನಡೆಸಿ ಬಳಿಕ ಸದಾಶಿವ ನಗರದ ಮನೆಯಲ್ಲಿ ಕಾರ್ಯಗಳು ನಡೆಯಲಿವೆ. ಕಂಠೀರವ ಸ್ಟುಡಿಯೋ ಸುತ್ತ ಭದ್ರತೆ ಹೆಚ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ