ವೈದ್ಯೆ ಗುರುಪ್ರೀತ್ ಕೌರ್ “ಕೈ” ಹಿಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್
ಸಿಎಂ ಮಾನ್ ಅವರ ವಿವಾಹ ಸಮಾರಂಭದ ಎಲ್ಲಾ ಸಂಪ್ರದಾಯಗಳನ್ನು ಕೇಜ್ರಿವಾಲ್ ಮುಂದಾಳತ್ವದಲ್ಲಿ ನೆರವೇರಿತ್ತು.
Team Udayavani, Jul 7, 2022, 2:49 PM IST
ಅಮೃತ್ ಸರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಗುರುವಾರ (ಜುಲೈ 07) ವೈದ್ಯೆ ಗುರುಪ್ರೀತ್ ಕೌರ್ ಅವರೊಂದಿಗೆ ಸರಳವಾಗಿ ವಿವಾಹವಾದರು. ಈ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ, ಕುಟುಂಬ ಸದಸ್ಯರು ಮತ್ತು ಆಪ್ತರು ಪಾಲ್ಗೊಂಡಿದ್ದರು.
ಇದನ್ನೂ ಓದಿ:ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ
ಚಂಡೀಗಢದ ಮಾನ್ ನಿವಾಸದಲ್ಲಿ ಖಾಸಗಿಯಾಗಿ ವಿವಾಹ ಸಮಾರಂಭ ನೆರವೇರಿತ್ತು. ಸಿಎಂ ಮಾನ್ ಅವರ ವಿವಾಹ ಸಮಾರಂಭದ ಎಲ್ಲಾ ಸಂಪ್ರದಾಯಗಳನ್ನು ಕೇಜ್ರಿವಾಲ್ ಮುಂದಾಳತ್ವದಲ್ಲಿ ನೆರವೇರಿತ್ತು.
ಇಂದು ನನ್ನ ಕಿರಿಯ ಸಹೋದರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಜೀ ವಿವಾಹವಾಗುವ ಮೂಲಕ ಹೊಸ ಜೀವನ ಆರಂಭಿಸಿದ್ದು, ನನಗೆ ತುಂಬಾ ಖುಷಿಯ ವಿಚಾರವಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಇಬ್ಬರಿಗೂ ದೇವರು ಒಳ್ಳೆಯದು ಮಾಡಲಿ, ಅವರ ವೈವಾಹಿಕ ಜೀವನ ಸುಖಕರವಾಗಿರಲಿ ಎಂದು ಹಾರೈಸುವುದಾಗಿ ಅರವಿಂದ್ ಕೇಜ್ರಿವಾಲ್ ಹೇಳಿದರು. ಸಿಎಂ ಮಾನ್ ಅವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ನಾನು ಮಾನ್ ಜೀ ಅವರ ಕುಟುಂಬ ಸದಸ್ಯರು, ಅವರ ತಾಯಿ ಮತ್ತು ಸಹೋದರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಘವ್ ಚಡ್ಡಾ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ