ಜನವರಿ 15ರವರೆಗೆ ರಾತ್ರಿ ಕರ್ಫ್ಯೂ ಜಾರಿ, ಶಾಲಾ, ಕಾಲೇಜು ಬಂದ್:ಪಂಜಾಬ್ ಸರ್ಕಾರ
ಕಳೆದ ಕೆಲವು ದಿನಗಳಲ್ಲಿ ಪಂಜಾಬ್ ನಲ್ಲಿ ಭಾರೀ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ.
Team Udayavani, Jan 4, 2022, 11:52 AM IST
ಚಂಡೀಗಢ್: ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಕ್ಷಿಪ್ರವಾಗಿ ಹರಡುವುದನ್ನು ತಡೆಗಟ್ಟಲು ರಾಜ್ಯಾದ್ಯಂತ ಜನವರಿ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಪಂಜಾಬ್ ಸರ್ಕಾರ ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಲಾಕ್ ಡೌನ್- ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಜೊತೆ ಚರ್ಚಿಸಿ ನಿರ್ಧಾರ: ಸಿಎಂ ಬೊಮ್ಮಾಯಿ
ಪಂಜಾಬ್ ಸರ್ಕಾರ ಹೊರಡಿಸಿರುವ ಪ್ರಕಟಣೆ ಪ್ರಕಾರ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯ್ದ ಸಡಿಲಿಕೆಯೊಂದಿಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ಹೇಳಿದೆ. ಬಾರ್, ಸಿನಿಮಾ ಹಾಲ್, ಮಾಲ್ಸ್, ರೆಸ್ಟೋರೆಂಟ್, ಸ್ಪಾಗಳಲ್ಲಿ ಶೇ.50ರಷ್ಟು ಸೀಟುಗಳ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿ ನೀಡಿರುವುದಾಗಿ ಹೇಳಿದೆ.
ಜಿಮ್ ತೆರೆಯಲು ಅವಕಾಶವಿಲ್ಲ. ಕೋವಿಡ್ ಎರಡು ಡೋಸ್ ಪಡೆದುಕೊಂಡವರು ಮಾತ್ರ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ಬರಲು ಅನುಮತಿ ನೀಡಲಾಗಿದೆ ಎಂದು ಪಂಜಾಬ್ ಸರ್ಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ರಾತ್ರಿ 10ರಿಂದ ಬೆಳಗ್ಗಿನ ಜಾವ 5ಗಂಟೆವರೆಗೆ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ವ್ಯಾಪಾರ, ವಹಿವಾಟುಗಳಿಗೆ ಅವಕಾಶವಿಲ್ಲ. ಶಾಲಾ, ಕಾಲೇಜು, ವಿಶ್ವವಿದ್ಯಾಲಯ ಮತ್ತು ಕೋಚಿಂಗ್ ಸೆಂಟರ್ ಗಳು ಬಂದ್ ಮಾಡಲು ಆದೇಶ ನೀಡಲಾಗಿದೆ.
ಕಳೆದ ಕೆಲವು ದಿನಗಳಲ್ಲಿ ಪಂಜಾಬ್ ನಲ್ಲಿ ಭಾರೀ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 6,05,922ಕ್ಕೆ ಏರಿಕೆಯಾಗಿದ್ದು, ಈವರೆಗೆ 16,651 ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?