ನನ್ನ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ: ಪಂಜಾಬ್ ಸಿಎಂ ಚನ್ನಿಗೆ ಭಗವಂತ್ ಮಾನ್ ಸವಾಲು
ಜನವರಿ 18ರಂದು ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯನ್ನಾಗಿ ಮಾನ್ ಹೆಸರನ್ನು ಘೋಷಿಸಿದ್ದರು.
Team Udayavani, Jan 22, 2022, 5:29 PM IST
ಚಂಡೀಗಢ್: ಮುಂಬರುವ ಪಂಜಾಬ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಧುರಿ ಕ್ಷೇತ್ರದಲ್ಲಿ ತನ್ನ ವಿರುದ್ಧ ಸ್ಪರ್ಧಿಸುವಂತೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಚರಣಜಿತ್ ಸಿಂಗ್ ಚನ್ನಿಗೆ ಸವಾಲು ಹಾಕಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದೇವರ ಕಲ್ಲು ಎಂದು ಕರಿ ಕಲ್ಲು ಮಾರಾಟ ಮಾಡಿ 5 ಲಕ್ಷ ವಂಚನೆ : ಓರ್ವನ ಬಂಧನ
ನಾನು ಚಾಮ್ ಕೌರ್ ಸಾಹೀಬ್(ಚರಣ್ ಜಿತ್ ಚನ್ನಿ ಕ್ಷೇತ್ರ) ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಿಲ್ಲ. ಆದರೆ ಅವರು (ಚನ್ನಿ) ಧುರಿ ಕ್ಷೇತ್ರದಿಂದ ಸ್ಪರ್ಧಿಸಬಹುದು. ನಾನು ಅವರನ್ನು ಸ್ವಾಗತಿಸುತ್ತೇನೆ ಎಂದು ಮಾನ್ ಹೇಳಿದ್ದಾರೆ.
ಪಂಜಾಬ್ ಚುನಾವಣೆಯಲ್ಲಿ ಭಗವಂತ್ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಭಗವಂತ್ ಮಾನ್ ಸಂಸದರಾಗಿರುವ ಸಂಗ್ರೂರ್ ಜಿಲ್ಲೆಯಲ್ಲಿರುವ ಧುರಿ ಕ್ಷೇತ್ರದಿಂದ ಅಖಾಡಕ್ಕಿಳಿಯಲಿದ್ದಾರೆ. ಸಮೀಕ್ಷೆ ಮೂಲಕ ಆಮ್ ಆದ್ಮಿ ಪಕ್ಷ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಶೇ.93ರಷ್ಟು ಮಂದಿ ಮಾನ್ ಪರವಾಗಿ ಮತಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 18ರಂದು ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯನ್ನಾಗಿ ಮಾನ್ ಹೆಸರನ್ನು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ